Home ರಾಜ್ಯಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ..!

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ..!

by EDITOR NEWS WARRIORS
0 comments
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿರವರು ನ. 23 ರಂದು ಸಂಜೆ 9.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ನ.24 ರಿಂದ 25 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ. 24 ರಂದು ಬೆಳಗ್ಗೆ 9.00 ಕ್ಕೆ ನಗರದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. 10.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಿರುವ ಪಿಯು ಹಾಗೂ ಪದವಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮ. 12 ಕ್ಕೆ ನಗರದ ಸಹ್ಯಾದ್ರಿ ಕಲಾ ಹಾಗೂ ವಿಜ್ಞಾನ ಕಾಲೇಜ್‌ನಲ್ಲಿ ಏರ್ಪಡಿಸಲಿರುವ ವಿದ್ಯಾರ್ಥಿನಿಯರೊಂದಿಗಿನ ಸಂವಾದ ಕಾರ್ಯಕ್ರಮ ಹಾಗೂ ಕಾನೂನು ಅರಿವಿನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮ. 4.30ಕ್ಕೆ ನಗರದ ಮಹಿಳಾ ಪೊಲೀಸ್ ಠಾಣೆ ಭೇಟಿ ನೀಡಲಿದ್ದಾರೆ.
ಸಂಜೆ 5.30ಕ್ಕೆ ನಗರದ ಬಿ.ಸಿ.ಎಂ. ಇಂಜಿನಿಯರಿAಗ್ ಮತ್ತು ಮೆಡಿಕಲ್ ವಿದ್ಯಾರ್ಥಿನಿಯರ ವಸತಿನಿಲಯಕ್ಕೆ ಭೇಟಿ ನೀಡುವರು ಹಾಗೂ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ನ. 25 ರಂದು ಬೆ. 10.00ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿರುವ “POSH” ಅಧಿನಿಯಮ 2013ರ ತರಬೇತಿ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆ.11.00ಕ್ಕೆ ಶಿಕಾರಿಪುರಕ್ಕೆ ತೆರಳಿ ಬೆ.11.45ಕ್ಕೆ ಶಿಕಾರಿಪುರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮಹಿಳಾ ಬೋಧಕರೊಂದಿಗೆ ಸಂವಾದ ನಡೆಸಲಿದ್ದಾರೆ. ಮ.12.45ಕ್ಕೆ ಶಿಕಾರಿಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ, ಮ.1.30ಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ, ಮ 2.30ಕ್ಕೆ ಉಡುತಡಿ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಭೇಟಿ, ಮ. 4.00ಕ್ಕೆ ಶಿಕಾರಿಪುರ ಪೊಲೀಸ್ ಠಾಣೆಗೆ ಭೇಟಿ,ಸಂಜೆ 5.00ಕ್ಕೆ ಚನ್ನಕೇಶವ ನಗರದ ಅಲ್ಪಸಂಖ್ಯಾತರ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಲಿದ್ದು, ಸಂಜೆ 7.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ನ. 26 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ “POSH” ಕಾಯ್ದೆಯ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಿದ್ದಾರೆ. ಬೆ. 11.00ಕ್ಕೆ ಮಹಿಳಾ ಸ್ಪಂಧನಾ ಕಾರ್ಯಕ್ರಮ ನಡೆಸಲಿದ್ದಾರೆ. ಮ. 12.00 ಕ್ಕೆ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮ. 3.00ಕ್ಕೆ ಪ್ರೆಸ್ ಮೀಟ್ ಮಾಡಲಿದ್ದಾರೆ. ಮ. 4.00ಕ್ಕೆ ಶಿವಮೊಗ್ಗದಿಂದ ಉಡುಪಿಗೆ ತೆರಳಲಿದ್ದಾರೆ .

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...