Sunday, June 15, 2025
Google search engine
Homeರಾಜ್ಯಪುನೀತ್ ಅಂತಿಮ ಯಾತ್ರೆಯಲ್ಲಿ ಶಾಂತಿಯುತವಾಗಿ ಸಹಕರಿಸಿದ ಅಭಿಮಾನಿಗಳಿಗೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯವರಿಗೂ...

ಪುನೀತ್ ಅಂತಿಮ ಯಾತ್ರೆಯಲ್ಲಿ ಶಾಂತಿಯುತವಾಗಿ ಸಹಕರಿಸಿದ ಅಭಿಮಾನಿಗಳಿಗೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯವರಿಗೂ ಗೃಹ ಸಚಿವರು ಧನ್ಯವಾದಗಳನ್ನು ತಿಳಿಸಿದ್ದಾರೆ….

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ, ಯಾತ್ರೆ ಮತ್ತು ಅಂತ್ಯಕ್ರಿಯೆಯ ವೇಳೆ ಶಾಂತಿ ಕಾಪಾಡಿದ ಸಾರ್ವಜನಿಕರು ಮತ್ತು ಶಾಂತಿ ಕಾಪಾಡಲು ಸಹಕರಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.


ಪತ್ರಿಕಾ ಪ್ರಕಟಣೆ ನೀಡಿರುವ ಸಚಿವ ಆರಗ ಜ್ಞಾನೇಂದ್ರ, ”ನಮ್ಮೆಲ್ಲರ ನೆಚ್ಚಿನ ನಟರೂ, ಕನ್ನಡ ಚಿತ್ರರಂಗದ ಮುಕುಟ ಮಣಿಯೂ ಆಗಿದ್ದ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ ವಿಧಿ ವಿಧಾನಗಳು, ಅತ್ಯಂತ ಶಾಂತಿಯುತವಾಗಿ, ಸಕಲ ಸರಕಾರಿ ಗೌರವಳೊಂದಿಗೆ ನೆರವೇರಿದೆ.ನೆಚ್ಚಿನ ನಟನ ಅಕಾಲಿಕ ನಿಧನದ ದುಃಖದ ಸಂದರ್ಭದಲ್ಲಿ, ಸಾರ್ವಜನಿಕರು, ಅತ್ಯಂತ, ಶಾಂತಿ ಹಾಗೂ ತಾಳ್ಮೆಯನ್ನು, ಪ್ರದರ್ಶಿಸಿ ಅಗಲಿದ ಚೈತನ್ಯಕ್ಕೆ ಲಕ್ಷಾಂತರ ಜನರು ಗೌರವ ಸಲ್ಲಿಸಿದ್ದಾರೆ. ಅತ್ಯಂತ ಶಿಸ್ತು ಬದ್ಧವಾಗಿ, ಎಷ್ಟೇ ಕಷ್ಟ ಗಳಿದ್ದರೂ, ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿ, ನಿಭಾಯಿಸಿದ, ನಮ್ಮ ಪೊಲೀಸ್, ಬಿಬಿಎಂಪಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಬರೆದಿದ್ದಾರೆ.


ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್‌ಕುಮಾರ್ ಸಮಾಧಿ ಪಕ್ಕದಲ್ಲಿಯೇ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆದಿದ್ದು, ಕುಟುಂಬಸ್ಥರು, ಚಿತ್ರರಂಗದ ಅನೇಕ ಗಣ್ಯರು ಅಗಲಿದ ನಟನಿಗೆ ಅಂತಿಮ ನಮನ ಸಲ್ಲಿಸಿದರು.

ಪುನೀತ್‌ರಾಜ್‌ಕುಮಾರ್‌ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್‌ಕುಮಾರ್ ಪುತ್ರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಚಿತ್ರರಂಗದ ಗಣ್ಯರು ವಿವಿಧ ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪುನೀತ್‌ರಾಜ್‌ಕುಮಾರ್ ಅಂತಿಮ ದರ್ಶನ ಪಡೆದರು.

ಅಪ್ಪು ಕುಟುಂಬದ ಜೊತೆ ನಾವಿದ್ದೇವೆ ಚಿಂತಿಸಬೇಡಿ ಶಿವಣ್ಣ:

ಅಪ್ಪು ನನಗಿಂತ ಸುಮಾರು ಹದಿಮೂರು ವರ್ಷ ಚಿಕ್ಕವನು ಅವನ ಸಾವಿನ ನೋವನ್ನು ನಮಗೆ ತಡೆದುಕೊಳ್ಳಲು ಆಗುತ್ತಿಲ್ಲ ಅಭಿಮಾನಿಗಳಿಗೆ ಇನ್ನೂ ಹೆಚ್ಚಿನ ನೋವಾಗಿರುತ್ತದೆ. ಎಲ್ಲರೂ ಸಹನೆಯಿಂದ ಸಹಕರಿಸಿ ಪುನೀತ್ ಕುಟುಂಬದ ಜೊತೆ ನಾವಿದ್ದೇವೆ. ಎಂದು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ಹಾಗೆಯೇ ಅಂತಿಮ ಯಾತ್ರೆಗೆ ಸಹಕರಿಸಿದ ಸರ್ಕಾರಕ್ಕೆ ಅಭಿಮಾನಿಗಳಿಗೂ ಎಲ್ಲಾ ಇಲಾಖೆಯವರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!