Wednesday, April 30, 2025
Google search engine
Homeರಾಜ್ಯರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ ಮುಖ್ಯಮಂತ್ರಿ ಘೋಷಣೆ ಸಮರ್ಪಕವಾಗಿ ಜಾರಿ ಆಗುತ್ತಾ?

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ ಮುಖ್ಯಮಂತ್ರಿ ಘೋಷಣೆ ಸಮರ್ಪಕವಾಗಿ ಜಾರಿ ಆಗುತ್ತಾ?

ರಾಜ್ಯದಲ್ಲಿ ಮರಳು ಮಾಫಿಯಾ ಹೇರಳವಾಗಿ ಹಬ್ಬಿದ್ದು. ಇದರಿಂದ ಜನಸಾಮಾನ್ಯರು ಮನೆ ಕಟ್ಟುವುದು ಹಾಗಿರಲಿ, ಗುಡಿಸಲು ಕಟ್ಟುವುದಕ್ಕೂ ಮರಳು ಕೊಂಡುಕೊಳ್ಳುವುದು ಕಷ್ಟಕರವಾಗಿದೆ.

ಸರ್ಕಾರದ ಮಹತ್ವದ ನಿರ್ಧಾರ ಸಮರ್ಪಕವಾಗಿ ಜಾರಿ ಆಗುತ್ತಾ?

ಜನಸಾಮಾನ್ಯರಿಗೆ ಹೊರೆಯಾಗುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಕೈಗೆಟುಕುವ ದರದಲ್ಲಿ ಮರಳು ಸಿಗಲು ಅನುಕೂಲವಾಗುವಂತೆ ಹೊಸ ಮರಳು ನೀತಿಯನ್ನು ಜಾರಿಗೆ ತಂದಿದೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸ ಮರಳು ನೀತಿಯನ್ನು ಜಾರಿಗೆ ತರುವ ತೀರ್ಮಾನವನ್ನು ಕೈಗೊಳ್ಳಲಾಗಿದ್ದು.

ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಯಾಗಿರುವುದರಿಂದ ಇನ್ನು ಮುಂದೆ ಕಡಿಮೆ ದರದಲ್ಲಿ ಜನಸಾಮಾನ್ಯರಿಗೂ ಮರಳು ಲಭ್ಯವಾಗಲಿದೆ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಿಗುತ್ತೆ ಇದರಿಂದ ಲಾಭ:

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರತಿ ಟನ್ ಮರಳಿಗೆ 300 ರೂ. ನದಿ ಪಾತ್ರದಲ್ಲಿ 700 ರೂ. ನಿಗದಿ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ತೆಗೆಯುವ ಮರಳಿಗೆ ಶೇ.50ರಷ್ಟು ರಾಜಸ್ವವನ್ನು ನಿಗದಿಪಡಿಸಲಾಗಿದೆ.

ಇದರಲ್ಲಿ ಶೇ.25ರಷ್ಟು ರಾಜಸ್ವವು ಸರಕಾರಕ್ಕೆ ಹಾಗೂ ಉಳಿದ ಶೇ.25ರಷ್ಟು ರಾಜಸ್ವ ಗ್ರಾಪಂ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ, ಮೂಲಭೂತ ಸೌಕರ್ಯಗಳು ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬಹುದೆಂದು ತಿಳಿಸಿದರು.

ಯಂತ್ರಗಳಿಂದ ಮರಳು ತೆಗೆಯುವುದನ್ನು ನಿಲ್ಲಿಸಿ ಮಾನವರಿಂದ ಮರಳು ತೆಗೆಯಲು ಸೂಚನೆ:

ಕರಾವಳಿ ತೀರ ಪ್ರದೇಶದಲ್ಲಿ ಯಂತ್ರಗಳನ್ನು ಬಳಸಿ ಮರಳುಗಾರಿಕೆ ನಡೆಸುವುದು ಪರಿಸರಕ್ಕೆ ಹಾನಿಕರ ಎಂಬ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಮಾನವರ ಮೂಲಕವೇ ಮರಳು ತೆಗೆಯುವುದನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ. ಮರಳುಗಾರಿಕೆ ಸಂಪೂರ್ಣವಾಗಿ ಯಾವ ಪ್ರದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೆಗೆಯಬೇಕು ಎಂಬುದನ್ನು ಆಯಾ ಜಿಲ್ಲೆಗಳಿಂದ ವರದಿ ತರಿಸಿಕೊಳ್ಳಲಾಗುವುದು ಎಂದರು.

ರಾಜ್ಯ ಸರ್ಕಾರವು ಉಪಖನಿಜ ನೀತಿಗೆ ತಿದ್ದುಪಡಿ ಮಾಡಲಾಗಿದ್ದು, ಈವರೆಗೂ 10ರಿಂದ 15 ವರ್ಷ ಮಾತ್ರ ಗುತ್ತಿಗೆ ನೀಡಲಾಗುತ್ತಿತ್ತು. ಇನ್ನು ಮುಂದೆ 50 ವರ್ಷ ಗುತ್ತಿಗೆ ನೀಡಲು ತಿದ್ದುಪಡಿ ಮಾಡಿದ್ದೇವೆ ಎಂದು ತಿಳಿಸಿದರು.

ಸುಗ್ರಿವಾಜ್ಞೆ:

50 ಕೋಟಿ ಮೀರಿದ ಎಲ್ಲಾ ಇಲಾಖೆಯ ಟೆಂಡರ್‍ಗಳನ್ನು ಪರಿಶೀಲಿಸಲು ಹೈಕೋರ್ಟ್ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ಸುಗ್ರೀವಾಜ್ಞೆ ಜಾರಿಗೆ ತರಲು ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಬಳ್ಳಾರಿ ಜಿಲ್ಲೆ ಖನಿಜ ಪ್ರತಿಷ್ಠಾನ ಕ್ರಿಯಾಯೋಜನೆ 6ರಡಿ 30 ಕೋಟಿ ರೂ. ವೆಚ್ಚದಲ್ಲಿ ಹೊಸಪೇಟೆ-ಬಳ್ಳಾರಿ ರಸ್ತೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಹೊಸ ಮರಳು ನೀತಿ ಸಮರ್ಪಕವಾಗಿ ಜಾರಿ ಆಗುತ್ತಾ?

ನಿರಂತರವಾಗಿ ಮಾಧ್ಯಮಗಳ ಮಾಡಿದ ಒತ್ತಾಯಕ್ಕೆ ಜನಸಾಮಾನ್ಯರ ಆಕ್ರೋಶಕ್ಕೆ ಮಣಿದು ಜನಸಾಮಾನ್ಯರಿಗೆ ಒಳಿತಾಗುವ ದೃಷ್ಟಿಯಿಂದ ಹೊಸ ಮರಳು ನೀತಿಯನ್ನು ಜಾರಿಗೆ ತಂದಿದೆ. ಹಾಗೆ ಯಂತ್ರಗಳಿಂದ ಮರಳನ್ನು ತೆಗೆಯದೆ ಮಾನವರಿಂದ ಮಾತ್ರ ಮರಳು ತೆಗೆಯಬೇಕೆಂಬ ಎನ್ನುವ ಆದೇಶವನ್ನು ಸಹ ನೀಡಿದೆ.

ಈ ಆದೇಶಗಳು ಸಮರ್ಪಕವಾಗಿ ರಾಜ್ಯದಲ್ಲಿ ಜಾರಿ ಆಗುತ್ತಾ? ಮರಳು ಮಾಫಿಯಾದ ದೊರೆಗಳು ಸರ್ಕಾರದ ಆದೇಶಕ್ಕೆ ಬೆಲೆ ನೀಡುತ್ತಾರ? ಕೆಲವು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭ್ರಷ್ಟ ಅಧಿಕಾರಿಗಳು ಸರ್ಕಾರದ ಆದೇಶ ಪಾಲಿಸುತ್ತಾರ? ಮುಂದಿನ ದಿನಗಳಲ್ಲಿ ಕಾದು ನೋಡಬೇಕು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...