Sunday, June 15, 2025
Google search engine
Homeರಾಜ್ಯಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಸಭೆ,ತೆಗೆದುಕೊಂಡ ಮಹತ್ವದ...

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಸಭೆ,ತೆಗೆದುಕೊಂಡ ಮಹತ್ವದ ತೀರ್ಮಾನಗಳು…

ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಪಟ್ಟಂತೆ ವಿವಿಧ ಕಾಮಗಾರಿಗಳ ಕುರಿತಂತೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಶಿವಮೊಗ್ಗ ಸಂಸದರಾದ ಬಿ ,ವೈ ರಾಘವೇಂದ್ರ ಅವರು ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಇರುವ ಅಂಶಗಳ ಬಗ್ಗೆ ವಿವರವಾಗಿ ಸಭೆಗೆ ಪ್ರಸ್ತಾಪಿಸಿದರು. ಬಳಿಕ ಸಭೆಯಲ್ಲಿ ಈ ಕೆಳಕಂಡಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನಗಳು:

@ಅರಣ್ಯ ಹಕ್ಕು ಅಧಿನಿಯಮದಡಿ ಇತರೆ ವರ್ಗದ ಅರ್ಜಿದಾರರಿಗೆ ಮೂರು ತಲೆಮಾರಿನ ಅಂದರೆ 75 ವರ್ಷಗಳ ಅವಧಿಯ ದಾಖಲಾತಿಗಳನ್ನು ಸಲ್ಲಿಸಲು ಸಾಧ್ಯವಾಗದೇ ಇರುವುದರಿಂದ ಈ ಬಗ್ಗೆ ಒಂದು ತಲೆಮಾರಿನ ಅಂದರೆ 25ವರ್ಷಗಳ ದಾಖಲಾತಿಗಳನ್ನು ಒದಗಿಸಲು ವಿನಾಯಿತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು. ಇದರಿಂದ ಇತರೆ ವರ್ಗದ ಅರ್ಜಿದಾರರು ಗಳು ಅರಣ್ಯ ಭೂಮಿಯ ಮೇಲಿನ ಹಕ್ಕು ಪಡೆಯಲು ಸಹಕಾರಿಯಾಗುತ್ತದೆ.

@ಕೊಡಲಾಯಿತು. ಕಾಗದ ಕಾರ್ಖಾನೆ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲವು ಕಾರ್ಮಿಕರು ಅನ್ಯ ನಿಗಮ-ಮಂಡಳಿಗಳಲ್ಲಿ ನಿಯೋಜನೆ ಮೇಲೆ ಕಾಗದ ಕಾರ್ಖಾನೆ ಕಾರ್ಯ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿಕಾಗದ ಕಾರ್ಖಾನೆ ಕಾರ್ಯ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಅಂತ ನೌಕರರನ್ನು ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿಗಮ-ಮಂಡಳಿಗಳಲ್ಲಿ ವಿಲೀನಗೊಳಿಸಲು ಸೂಕ್ತ ಕ್ರಮಕೈಗೊಳ್ಳಲು ತೀರ್ಮಾನಿಸಲಾಯಿತು.

@ನೀರಾವರಿ ಇಲಾಖೆ ಹಾಗೂ ಇತರ ಇಲಾಖೆಗಳಲ್ಲಿ ಮಂಜೂರಾದ ವಿವಿಧ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

@ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನವನ್ನು ತ್ವರಿತ ಗೊಳಿಸಲು ಅಗತ್ಯವಿರುವ ವಿವಿಧ ಇಲಾಖೆಗಳಿಂದ ಪಡೆಯಬೇಕಾದ ಅನುಮತಿಗಳನ್ನು ನೀಡಲು ಹಾಗೂ ಅಗತ್ಯ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್, ಕಾರ್ಯದರ್ಶಿಯವರಾದ ವಿ ಪೊನ್ನುರಾಜ್,ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ,ಅರಣ್ಯ ಇಲಾಖೆಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ/ ಸೆಲ್ವಕುಮಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಹಾಗೂ ಇತರ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!