Wednesday, April 30, 2025
Google search engine
Homeರಾಜ್ಯಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಸಭೆ,ತೆಗೆದುಕೊಂಡ ಮಹತ್ವದ...

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಸಭೆ,ತೆಗೆದುಕೊಂಡ ಮಹತ್ವದ ತೀರ್ಮಾನಗಳು…

ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಪಟ್ಟಂತೆ ವಿವಿಧ ಕಾಮಗಾರಿಗಳ ಕುರಿತಂತೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಶಿವಮೊಗ್ಗ ಸಂಸದರಾದ ಬಿ ,ವೈ ರಾಘವೇಂದ್ರ ಅವರು ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಇರುವ ಅಂಶಗಳ ಬಗ್ಗೆ ವಿವರವಾಗಿ ಸಭೆಗೆ ಪ್ರಸ್ತಾಪಿಸಿದರು. ಬಳಿಕ ಸಭೆಯಲ್ಲಿ ಈ ಕೆಳಕಂಡಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನಗಳು:

@ಅರಣ್ಯ ಹಕ್ಕು ಅಧಿನಿಯಮದಡಿ ಇತರೆ ವರ್ಗದ ಅರ್ಜಿದಾರರಿಗೆ ಮೂರು ತಲೆಮಾರಿನ ಅಂದರೆ 75 ವರ್ಷಗಳ ಅವಧಿಯ ದಾಖಲಾತಿಗಳನ್ನು ಸಲ್ಲಿಸಲು ಸಾಧ್ಯವಾಗದೇ ಇರುವುದರಿಂದ ಈ ಬಗ್ಗೆ ಒಂದು ತಲೆಮಾರಿನ ಅಂದರೆ 25ವರ್ಷಗಳ ದಾಖಲಾತಿಗಳನ್ನು ಒದಗಿಸಲು ವಿನಾಯಿತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು. ಇದರಿಂದ ಇತರೆ ವರ್ಗದ ಅರ್ಜಿದಾರರು ಗಳು ಅರಣ್ಯ ಭೂಮಿಯ ಮೇಲಿನ ಹಕ್ಕು ಪಡೆಯಲು ಸಹಕಾರಿಯಾಗುತ್ತದೆ.

@ಕೊಡಲಾಯಿತು. ಕಾಗದ ಕಾರ್ಖಾನೆ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲವು ಕಾರ್ಮಿಕರು ಅನ್ಯ ನಿಗಮ-ಮಂಡಳಿಗಳಲ್ಲಿ ನಿಯೋಜನೆ ಮೇಲೆ ಕಾಗದ ಕಾರ್ಖಾನೆ ಕಾರ್ಯ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿಕಾಗದ ಕಾರ್ಖಾನೆ ಕಾರ್ಯ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಅಂತ ನೌಕರರನ್ನು ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿಗಮ-ಮಂಡಳಿಗಳಲ್ಲಿ ವಿಲೀನಗೊಳಿಸಲು ಸೂಕ್ತ ಕ್ರಮಕೈಗೊಳ್ಳಲು ತೀರ್ಮಾನಿಸಲಾಯಿತು.

@ನೀರಾವರಿ ಇಲಾಖೆ ಹಾಗೂ ಇತರ ಇಲಾಖೆಗಳಲ್ಲಿ ಮಂಜೂರಾದ ವಿವಿಧ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

@ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನವನ್ನು ತ್ವರಿತ ಗೊಳಿಸಲು ಅಗತ್ಯವಿರುವ ವಿವಿಧ ಇಲಾಖೆಗಳಿಂದ ಪಡೆಯಬೇಕಾದ ಅನುಮತಿಗಳನ್ನು ನೀಡಲು ಹಾಗೂ ಅಗತ್ಯ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್, ಕಾರ್ಯದರ್ಶಿಯವರಾದ ವಿ ಪೊನ್ನುರಾಜ್,ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ,ಅರಣ್ಯ ಇಲಾಖೆಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ/ ಸೆಲ್ವಕುಮಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಹಾಗೂ ಇತರ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...