ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಂಜುನಾಥ್ ಎ ಆಲಿಯಾಸ್ ನೇಪಾಳಿ ಮಂಜ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ಮೇಲೆ ಹಲವು ವಾರೆಂಟ್ ಗಳು ಇದ್ದವು ನ್ಯಾಯಾಲಯ ಕ್ಕೆ ಹಾಜರಾಗದೆ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಇದೀಗ ಪೊಲೀಸರು ಸೆರೆ ಹಿಡಿದಿದ್ದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರಿಸಿಕೂಂಡು ಓಡಾಡುತ್ತಿದ್ದ ಬೆಂಗಳೂರಿನಲ್ಲಿ ಪೇಂಟಿಂಗ್ ವೃತ್ತಿಯನ್ನು ಮಾಡುತ್ತಿದ್ದ ಈತನ ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿ ಐ ಸತ್ಯನಾರಾಯಣ ಮಾರ್ಗದರ್ಶನದಲ್ಲಿ ಪಿಎಸ್ಐ ಅಂಬಿಗೇರ್ ಎಂಎನ್ ರವರ ನೇತೃತ್ವದಲ್ಲಿ ವಾರಂಟ್ ಸಿಬ್ಬಂದಿಗಳಾದ ಗೋವರ್ಧನ್ ರವೀಂದ್ರಪ್ರಸಾದ್ ದಿನಾಂಕ 13.04.2025 ರಂದು ಖಚಿತ ಮಾಹಿತಿಯ ಮೇರೆಗೆ ಈತನನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.