Wednesday, April 30, 2025
Google search engine
Homeರಾಜ್ಯಗೋವುಗಳ ರಕ್ಷಣೆಗೆ ಸರ್ಕಾರ ಬದ್ಧ ಹಾಗೂ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಗೃಹಸಚಿವ ಆರಗ...

ಗೋವುಗಳ ರಕ್ಷಣೆಗೆ ಸರ್ಕಾರ ಬದ್ಧ ಹಾಗೂ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ….

ಧರ್ಮಸ್ಥಳ: ಮಂಗಳವಾರ >9>ರಾಜ್ಯದಲ್ಲಿ ಗೋವುಗಳ ಹತ್ಯೆ ಮತ್ತು ಅಕ್ರಮ ಸಾಗಾಟವನ್ನು ಸಂಪೂರ್ಣವಾಗಿ ನಿಷೇದಿಸಿದ್ದು, ಇದಕ್ಕೆ ಸಂಬಂದಿಸಿದ ಕಾಯಿದೆಯ್ನನು ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುವುದು ಎಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಹೇಳಿದ್ದಾರೆ.

ಪೊಲೀಸ್ ಠಾಣೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ “ಅಕ್ರಮ ಗೋವುಗಳ ಸಾಗಾಟ ಮತ್ತು ಹತ್ಯೆಯನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ” ಎಂದರು.

“ಈ ಹಿಂದೆ ಅಕ್ರಮ ಗೋವುಗಳ ಸಾಗಾಟ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡ ಉದಾಹರಣೆಗಳು ಇದ್ದು, ಇದರಿಂದ ಹಲವು ಬಾರಿ ಸಂಘರ್ಷಕ್ಕೂ ಕಾರಣವಾಗಿದ್ದವು. ಪೊಲೀಸರು, ಗೋವುಗಳ ಹತ್ಯೆ ಮತ್ತು ಅಕ್ರಮ ಸಾಗಾಟ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದರಿಂದ, ಸಾರ್ವಜನಿಕರ ಮಧ್ಯ ಪ್ರವೇಶಕ್ಕೆ ಅವಕಾಶವಿರುವುದಿಲ್ಲ” ಎಂದರು.

ಮತಾಂತರ ತಡೆ ಕಾಯಿದೆ ಕುರಿತು, ಕೇಳಲಾದ ಪ್ರಶ್ನೆಗೆ, ಸಚಿವರು ಉತ್ತರಿಸುತ್ತಾ ” ಈ ಸಂಬಂಧ ಪ್ರಕ್ರಿಯೆಗಳು ನಡೆದಿದೆ, ಹಾಗೂ ಪ್ರಸ್ತುತ ಇರುವ ಕಾಯಿದೆಯನ್ನು ಉಪಯೋಗಿಸಿಕೊಂಡು ಯಾವುದೇ ರೀತಿಯ ಬಲವಂತದ ಅಥವಾ ಆಮಿಷಗಳನ್ನೊಡ್ಡಿ ನಡೆಸಲಾಗುವ ಮತಾಂತರ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು”
ಎಂದರು.

ನಂತರ, ಸಚಿವರು, ಪೊಲೀಸ್ ಠಾಣೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು, ಧರ್ಮಸ್ಥಳದ ಧರ್ಮಾಧಿಕಾರಿ, ಪೂಜ್ಯ ಶ್ರೀ, ವೀರೇಂದ್ರ ಹೆಗ್ಗಡೆಯವರು, ಸ್ಥಳೀಯ ಶಾಸಕ ಶ್ರೀ ಹರೀಶ್ ಪೂಂಜಾ, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಇತರರು ಈ ಸಂಧರ್ಭದಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...