Wednesday, April 30, 2025
Google search engine
Homeರಾಷ್ಟ್ರೀಯಸಂಸದರು, ಸಚಿವರಿಂದ ಕೇಂದ್ರ ಸಚಿವರ ಭೇಟಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳು ಹಾಗೂ...

ಸಂಸದರು, ಸಚಿವರಿಂದ ಕೇಂದ್ರ ಸಚಿವರ ಭೇಟಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳು ಹಾಗೂ ಮಾರ್ಪಾಡಿನ ಬಗ್ಗೆ ಚರ್ಚೆ ಹಾಗೂ ಮನವಿ ಪತ್ರದಲ್ಲೇನಿದೆ…!

ಇಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ,ವೈ ರಾಘವೇಂದ್ರ, ಕರ್ನಾಟಕ ಸರ್ಕಾರದ ಅರಣ್ಯ ಸಚಿವರಾದ ಆನಂದ್ ಸಿಂಗ್, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಒಳಗೊಂಡ ನಿಯೋಗ ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ನಿರ್ಬಂಧಗಳನ್ನು ಸಡಿಲಗೊಳಿಸುವ ಅಂತೆ ಚರ್ಚೆ ಮಾಡಿ ಈ ಕೆಳಕಂಡಂತೆ ಮಾರ್ಪಾಡುಗಳನ್ನು ಮಾಡಬೇಕೆಂದು ಮನವಿ ಸಲ್ಲಿಸಿದರು.

ಮನವಿ ಪತ್ರದಲ್ಲಿ ಏನಿದೆ?

#ಕಸ್ತೂರಿರಂಗನ್ ವರದಿ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರುತ್ತವೆ. ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 500 ಗ್ರಾಮಗಳು ಬರುತ್ತವೆ.

#ಪಶ್ಚಿಮ ಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು 60 ಪರ್ಸೆಂಟ್ ಭೂಪ್ರದೇಶವು ಸಮೃದ್ಧ ಅರಣ್ಯವಾಗಿದೆ.

#ಆದ್ದರಿಂದ ವರದಿಯಲ್ಲಿ ಇರುವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಗ್ರಾಮಗಳನ್ನು ಹೊರತುಪಡಿಸಿ ಸಂಪೂರ್ಣ ಶರಣೆ ಪ್ರದೇಶ ಮತ್ತು ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಮಾತ್ರ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬೇಕು ಎಂದು ಕೋರಿದರು.

#ವರದಿಯಂತೆ, ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ 5 ರಿಂದ 10 ಕಿಲೋಮೀಟರ್ ವರೆಗಿನ ಪ್ರದೇಶವನ್ನು ಬಫರ್ ಜೋನ್ ಎಂಬುದಾಗಿ ಘೋಷಿಸಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುವುದಷ್ಟೇ ಅಲ್ಲದೆ, ರಾಜ್ಯ ಸರ್ಕಾರದ ವತಿಯಿಂದ ಭೂಪ್ರದೇಶದಲ್ಲಿ ಯಾವುದೇ ರೀತಿಯ ಉದ್ಯೋಗ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ ಆದುದರಿಂದ ಅದನ್ನು ಸಂಪೂರ್ಣವಾಗಿ ಪ್ರಸ್ತಾವನೆಯಿಂದ ಕೈಬಿಡಬೇಕು.

#ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ರಾಜ್ಯ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ತಿರಸ್ಕರಿಸಿದೆ.

#ಕರ್ನಾಟಕ ರಾಜ್ಯ ಸರ್ಕಾರವು ವಿಭಿನ್ನ ನಿಲುವು ವ್ಯಕ್ತಪಡಿಸಿದ್ದರಿಂದ ಗ್ರಾಮಗಳಲ್ಲಿ ಪರಿಸ್ಥಿತಿ ಅಧ್ಯಯನ ಮಾಡಲು, ಪ್ರತಿ ಗ್ರಾಮಗಳ ಜನರಿಂದ ದೂರುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ಅಥವಾ ಕಾರ್ಯಪಡೆ ರಚಿಸಲು ಕೇಂದ್ರ ಸಚಿವರಲ್ಲಿ ವಿನಂತಿಸಿದರು.

#ತಮ್ಮ ಸಲಹೆಗಳನ್ನು ಕಸ್ತೂರಿರಂಗನ್ ರವದ ಕರಡು ವರದಿಯಲ್ಲಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕೆಂದು ಕೋರಿದರು.

ಮೇಲ್ಕಂಡಂತೆ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...