Wednesday, April 30, 2025
Google search engine
Homeರಾಜ್ಯಮತಾಂತರ ನಿಷೇಧ ಕಾಯ್ದೆ ಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನಾಳೆ ನಿಷೇಧ ಮಸೂದೆ ಮಂಡನೆ..! ಕರಡು...

ಮತಾಂತರ ನಿಷೇಧ ಕಾಯ್ದೆ ಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನಾಳೆ ನಿಷೇಧ ಮಸೂದೆ ಮಂಡನೆ..! ಕರಡು ವಿಧೇಯಕದಲ್ಲಿ ಕೆಲವು ಬದಲಾವಣೆಗಳು..! ಪ್ರಸ್ತಾಪಿಸಲಾಗಿರುವ ಅಂಶಗಳೇನು?

ಬೆಳಗಾವಿ: ದಿನೇದಿನೇ ಕುತೂಹಲ ಕೆರಳಿಸಿದ್ದ ರಾಜ್ಯಾಧ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.

ಕರಡು ವಿಧೇಯಕದಲ್ಲಿ ಕೆಲವು ಬದಲಾವಣೆಗಳು:

ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಯಾಗಲಿದೆ. ಕರಡು ವಿಧೇಯಕದಲ್ಲಿನ ಕೆಲವು ಬದಲಾವಣೆಗಳೊಂದಿಗೆ ನಾಳೆ ಸದನದಲ್ಲಿ ಮಂಡನೆಯಾಗಲಿದೆ. ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಅನುಮೋದನೆ ನೀಡಿದೆ. ನಾಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗಲಿದೆ.

ಕರಡು ವಿಧೇಯಕದಲ್ಲಿನ ಬದಲಾವಣೆಯಾದ ಮತಾಂತರ ನಿಷೇಧ ಮಸೂದೆಯಲ್ಲಿ ಅಂಶಗಳು:


1) ಬಲವಂತದ ಮತಾಂತರ ಶಿಕ್ಷಾರ್ಹ ಎಂಬ ಪ್ರಕಾರವೇ ವಿಧೇಯಕ ಸಿದ್ಧತಾ ಹಂತದಲ್ಲಿದೆ
2) ಯಾವುದೇ ವ್ಯಕ್ತಿ ಅಥವಾ ಸಮುದಾಯದ ಬಲವಂತದ ಮತಾಂತರ ಮಾಡುವಂತಿಲ್ಲ
3) ವ್ಯಕ್ತಿ ಮತಾಂತರ ಹೊಂದಬೇಕಾದರೆ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು
4) ಮತಾಂತರ ಪ್ರಕ್ರಿಯೆ ನಡೆಸಬೇಕಾದರೂ ಸಕ್ಷಮ‌ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು
5) ಅರ್ಜಿ ಸಲ್ಲಿಸಿದ ವ್ಯಕ್ತಿ ತನ್ನ ಇಚ್ಛೆಗೆ ಅನುಗುಣವಾಗಿ ನೀಡಿರುವ ಅರ್ಜಿ ಹಿಂಪಡೆಯಲು ಸ್ವತಂತ್ರ
6) ಮತಾಂತರ ಆಗಲು ಬಯಸುವ ವ್ಯಕ್ತಿಯ ಖಾಸಗಿತನ ಕಾಪಾಡಲು ಮತ್ತು ಧಾರ್ಮಿಕ ಹಕ್ಕನ್ನು ಕಾಪಾಡಲು ಮತಾಂತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ
7) ಮತಾಂತರ ಪ್ರಕ್ರಿಯೆಯೊಳಗೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ತೊಡಗುವಂತೆ ಮಾಡಲು ಅವಕಾಶವಿಲ್ಲ
8) ಬಲವಂತದ ಮತಾಂತರ ಮಾಡುವ ಅಥವಾ ಮತಾಂತರಕ್ಕೆ ಪ್ರಚೋದನೆ ನೀಡುವ ವ್ಯಕ್ತಿಯನ್ನು ಬಂಧಿಸಲು ಅವಕಾಶ
9) ಬಂಧಿತನಾಗುವ ವ್ಯಕ್ತಿಗೆ ಜಾಮೀನು ಪಡೆಯಲು ಅವಕಾಶ ಇಲ್ಲದಂತೆ, ಜಾಮೀನುರಹಿತ ಎಂದು ಪರಿಗಣಿಸುವುದು
10) ಮತಾಂತರ ಪ್ರಕ್ರಿಯೆ ಯಾವುದೇ ಧಾರ್ಮಿಕ ಕಟ್ಟಡಗಳು, ಪ್ರಾರ್ಥನಾ ಕೇಂದ್ರಗಳಲ್ಲಿ ಮಾಡುವಂತಿಲ್ಲ
11) ಮತಾಂತರ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆಯುತ್ತಿದ್ದಲ್ಲಿ ನಿಗದಿತ ಪ್ರಕ್ರಿಯೆಯನ್ನು ತಟಸ್ಥ ಪ್ರದೇಶದಲ್ಲಿ ಮಾಡುವುದು ಕಡ್ಡಾಯ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...