Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಅಧಿವೇಶನದಲ್ಲಿ ಸಿಡಿದೆದ್ದ ಸ್ಪೀಕರ್ ಸಿಎಂಗೆ ಹೇಳಿದ್ದೇನು?

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಅಧಿವೇಶನದಲ್ಲಿ ಸಿಡಿದೆದ್ದ ಸ್ಪೀಕರ್ ಸಿಎಂಗೆ ಹೇಳಿದ್ದೇನು?

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕ ತುಕಾರಾಂ ಇಂದು ಸದನದಲ್ಲಿ ಸರ್ಕಾರವನ್ನು ಚಾಟಿಗೆ ತೆಗೆದುಕೊಂಡರು.

ಅಕ್ರಮ ಮದ್ಯ ಮಾರಾಟ ಮಾಡಲು ಆದಾಯ ಹೆಚ್ಚು ಗುರಿ ನೀಡಿರುವುದೇ ಕಾರಣ ಸ್ಪೀಕರ್:


ಅಕ್ರಮ ಮದ್ಯ ಮಾರಾಟದ ಬಗ್ಗೆ ಕಾಂಗ್ರೆಸ್‌ ಶಾಸಕ ತುಕರಾಮ್‌ ಸದನದಲ್ಲಿ ಪ್ರಸ್ತಾಪ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್‌ ಕಾಗೇರಿ ಅವರು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಆದಾಯವಿದೆ ನಿಜ. ಆದರೆ ಆದಾಯದ ಹೆಚ್ಚಳಕ್ಕಾಗಿ ಹಣಕಾಸು ಇಲಾಖೆ ಹೆಚ್ಚು ಮದ್ಯ ಮಾರಾಟದ ಗುರಿಯನ್ನು ನಿಗದಿಪಡಿಸುವುದರಿಂದಲೂ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟವಾಗಲು ಕಾರಣವಾಗಿದೆ ಎಂದರು.

ಅಕ್ರಮ ಮದ್ಯ ಮಾರಾಟದಿಂದ ದಿನೇದಿನೇ ಗ್ರಾಮೀಣ ಭಾಗದಲ್ಲಿ ಸಮಸ್ಯೆಗಳು ಉದ್ಭವವಾಗುತ್ತದೆ:


ಅಕ್ರಮ ಮದ್ಯ ಮಾರಾಟದಿಂದಾಗಿ ದಿನೇದಿನೇ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಸಂಬಂಧಿಸಿದ ಹಿರಿಯ ಅಧಿಕಾರಿಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕಳಿಸಿದರೆ ಅವರಿಗೆ ಸಮಸ್ಯೆಯ ಅರಿವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಬೇಕೆಂದರೆ ಹಣಕಾಸು ಇಲಾಖೆಯವರು ಅಬಕಾರಿ ಇಲಾಖೆಗೆ ಗುರಿ ನಿಗದಿಪಡಿಸುವುದನ್ನು ಬಿಡಬೇಕು ಎಂದು ಅವರು ಆಗ್ರಹಿಸಿದರು.

ಜನರ ಆರೋಗ್ಯಕ್ಕಿಂತ ಸರ್ಕಾರಕ್ಕೆ ಬರುವ ಆದಾಯ ಮುಖ್ಯವಲ್ಲ:

ಗ್ರಾಮೀಣ ಜನತೆಯ ಹಿತದೃಷ್ಟಿಯಿಂದ ವರ್ಷದಿಂದ ವರ್ಷಕ್ಕೆ ಹಣಕಾಸು ಇಲಾಖೆಯವರು ಅಬಕಾರಿ ಇಲಾಖೆಗೆ ಗುರಿ ನಿಗದಿ ಮಾಡುವುದನ್ನು ಕಡಿಮೆ ಮಾಡುತ್ತಾ ಬರಬೇಕು. ಜನರ ಆರೋಗ್ಯಕ್ಕಿಂತ ಮದ್ಯ ಮಾರಾಟದಿಂದ ಬರುವ ಆದಾಯ ದೊಡ್ಡದಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಅವರು ಈ ಸಮಸ್ಯೆ ಬಗ್ಗೆ ಗಮನ ಹರಿಸಬೇಕೆಂದು ಸ್ಪೀಕರ್‌ ಸಲಹೆ ಮಾಡಿದರು.

ಮದ್ಯ ಮಾರಾಟಕ್ಕೆ ಆದಾಯ ಪಿಕ್ಸ್ ಮಾಡಿ ಅಕ್ರಮ ಮದ್ಯ ಮಾರಾಟಕ್ಕೆ ಕುಮ್ಮುಕ್ಕು ನೀಡುವುದು ಸರಿಯಲ್ಲ:

ಮದ್ಯ ಮಾರಾಟದಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿ ಹಣ ಗಳಿಸೋದು ಸರಿಯಲ್ಲ ಎಂದು ಶಾಸಕ ತುಕಾರಾಂ ಆಗ್ರಹಿಸಿದರು.

ಸಚಿವರ ಸಮಜಾಯಿಸಿ: ಇವರ ಪ್ರಶ್ನೆಗೆ ,

ಉತ್ತರ ನೀಡಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ, ಸಂಡೂರು ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡ್ತಿದ್ರು. ನಮ್ಮ ಇಲಾಖೆಯ ಆಧಿಕಾರಿಗಳು ರೇಡ್ ಮಾಡಿದ್ದಾರೆ. ಮದ್ಯದ ಜೊತೆಗೆ ಅಕ್ರಮ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ನಾಳೆ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಕ್ರಮ ಮದ್ಯ ಮಾರಾಟ ಕಡಿವಾಣದ ಬಗ್ಗೆ ಸೂಚನೆ ಕೊಡ್ತೇನೆ ಎಂದರು.

ಅಬಕಾರಿ ಸಚಿವರು ಉತ್ತರಕ್ಕೆ ಸಮಾಧಾನವಾಗದ ಸ್ಪೀಕರ್ ಮತ್ತು ಶಾಸಕರು:

ಅಬಕಾರಿ ಸಚಿವರ ಉತ್ತರ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗಾಗಲಿ, ಶಾಸಕ ತುಕಾರಾಂ ಅವರಿಗಾಗಲಿ ಸಮಾಧಾನ ನೀಡಲಿಲ್ಲ. ಹೆಚ್ಚು ಮದ್ಯ ಮಾರಾಟ ಮಾಡಿ ಎಂದು ಹಣಕಾಸು ಇಲಾಖೆ ಗುರಿ ನಿಗದಿ ಮಾಡದಿದ್ದಾಗ ಮಾತ್ರ ಗೋಪಾಲಯ್ಯ ಅವರು ಸಮಂಜಸವಾದ ಉತ್ತರ ಕೊಡಲು ಸಾಧ್ಯವಾಗುತ್ತದೆ ಎಂದು ಸ್ಪೀಕರ್‌ ಕಾಗೇರಿ ಹೇಳಿದರು.

ಸರ್ಕಾರಕ್ಕೆ ಚಾಟಿ ಬೀಸಿದ ಸ್ಪೀಕರ್:

ಇದೇ ಸಮಯದಲ್ಲಿ ಮಾತನಾಡಿದ ಸ್ಪೀಕರ್ ಗ್ರಾಮೀಣ ಭಾಗದಲ್ಲಿ ದಿನೇದಿನೇ ಅಕ್ರಮ ಮದ್ಯ ಮಾರಾಟ ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಸರ್ಕಾರ ಕೂಡಲೇ ಎಚ್ಚೆತ್ತು ಕೊಳ್ಳಬೇಕು ಜನರ ಆರೋಗ್ಯಕ್ಕಿಂತ ಹಣ ಮುಖ್ಯವಲ್ಲ ಆದಾಯ ಬರುತ್ತದೆ ಎನ್ನುವ ದೃಷ್ಟಿಯಿಂದ ಅಕ್ರಮ ಮಧ್ಯಕ್ಕೆ ಕುಮ್ಮಕ್ಕು ನೀಡುವುದು ಸರಿಯಲ್ಲ ಎಂದು ಸರ್ಕಾರವನ್ನು ಚಾಟಿಗೆ ತೆಗೆದುಕೊಂಡರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...