Home ಶಿವಮೊಗ್ಗಆರೋಗ್ಯಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಅಧಿವೇಶನದಲ್ಲಿ ಸಿಡಿದೆದ್ದ ಸ್ಪೀಕರ್ ಸಿಎಂಗೆ ಹೇಳಿದ್ದೇನು?

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಅಧಿವೇಶನದಲ್ಲಿ ಸಿಡಿದೆದ್ದ ಸ್ಪೀಕರ್ ಸಿಎಂಗೆ ಹೇಳಿದ್ದೇನು?

by EDITOR NEWS WARRIORS
0 comments

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕ ತುಕಾರಾಂ ಇಂದು ಸದನದಲ್ಲಿ ಸರ್ಕಾರವನ್ನು ಚಾಟಿಗೆ ತೆಗೆದುಕೊಂಡರು.

ಅಕ್ರಮ ಮದ್ಯ ಮಾರಾಟ ಮಾಡಲು ಆದಾಯ ಹೆಚ್ಚು ಗುರಿ ನೀಡಿರುವುದೇ ಕಾರಣ ಸ್ಪೀಕರ್:


ಅಕ್ರಮ ಮದ್ಯ ಮಾರಾಟದ ಬಗ್ಗೆ ಕಾಂಗ್ರೆಸ್‌ ಶಾಸಕ ತುಕರಾಮ್‌ ಸದನದಲ್ಲಿ ಪ್ರಸ್ತಾಪ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್‌ ಕಾಗೇರಿ ಅವರು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಆದಾಯವಿದೆ ನಿಜ. ಆದರೆ ಆದಾಯದ ಹೆಚ್ಚಳಕ್ಕಾಗಿ ಹಣಕಾಸು ಇಲಾಖೆ ಹೆಚ್ಚು ಮದ್ಯ ಮಾರಾಟದ ಗುರಿಯನ್ನು ನಿಗದಿಪಡಿಸುವುದರಿಂದಲೂ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟವಾಗಲು ಕಾರಣವಾಗಿದೆ ಎಂದರು.

ಅಕ್ರಮ ಮದ್ಯ ಮಾರಾಟದಿಂದ ದಿನೇದಿನೇ ಗ್ರಾಮೀಣ ಭಾಗದಲ್ಲಿ ಸಮಸ್ಯೆಗಳು ಉದ್ಭವವಾಗುತ್ತದೆ:


ಅಕ್ರಮ ಮದ್ಯ ಮಾರಾಟದಿಂದಾಗಿ ದಿನೇದಿನೇ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಸಂಬಂಧಿಸಿದ ಹಿರಿಯ ಅಧಿಕಾರಿಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕಳಿಸಿದರೆ ಅವರಿಗೆ ಸಮಸ್ಯೆಯ ಅರಿವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಬೇಕೆಂದರೆ ಹಣಕಾಸು ಇಲಾಖೆಯವರು ಅಬಕಾರಿ ಇಲಾಖೆಗೆ ಗುರಿ ನಿಗದಿಪಡಿಸುವುದನ್ನು ಬಿಡಬೇಕು ಎಂದು ಅವರು ಆಗ್ರಹಿಸಿದರು.

ಜನರ ಆರೋಗ್ಯಕ್ಕಿಂತ ಸರ್ಕಾರಕ್ಕೆ ಬರುವ ಆದಾಯ ಮುಖ್ಯವಲ್ಲ:

ಗ್ರಾಮೀಣ ಜನತೆಯ ಹಿತದೃಷ್ಟಿಯಿಂದ ವರ್ಷದಿಂದ ವರ್ಷಕ್ಕೆ ಹಣಕಾಸು ಇಲಾಖೆಯವರು ಅಬಕಾರಿ ಇಲಾಖೆಗೆ ಗುರಿ ನಿಗದಿ ಮಾಡುವುದನ್ನು ಕಡಿಮೆ ಮಾಡುತ್ತಾ ಬರಬೇಕು. ಜನರ ಆರೋಗ್ಯಕ್ಕಿಂತ ಮದ್ಯ ಮಾರಾಟದಿಂದ ಬರುವ ಆದಾಯ ದೊಡ್ಡದಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಅವರು ಈ ಸಮಸ್ಯೆ ಬಗ್ಗೆ ಗಮನ ಹರಿಸಬೇಕೆಂದು ಸ್ಪೀಕರ್‌ ಸಲಹೆ ಮಾಡಿದರು.

ಮದ್ಯ ಮಾರಾಟಕ್ಕೆ ಆದಾಯ ಪಿಕ್ಸ್ ಮಾಡಿ ಅಕ್ರಮ ಮದ್ಯ ಮಾರಾಟಕ್ಕೆ ಕುಮ್ಮುಕ್ಕು ನೀಡುವುದು ಸರಿಯಲ್ಲ:

ಮದ್ಯ ಮಾರಾಟದಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿ ಹಣ ಗಳಿಸೋದು ಸರಿಯಲ್ಲ ಎಂದು ಶಾಸಕ ತುಕಾರಾಂ ಆಗ್ರಹಿಸಿದರು.

ಸಚಿವರ ಸಮಜಾಯಿಸಿ: ಇವರ ಪ್ರಶ್ನೆಗೆ ,

ಉತ್ತರ ನೀಡಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ, ಸಂಡೂರು ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡ್ತಿದ್ರು. ನಮ್ಮ ಇಲಾಖೆಯ ಆಧಿಕಾರಿಗಳು ರೇಡ್ ಮಾಡಿದ್ದಾರೆ. ಮದ್ಯದ ಜೊತೆಗೆ ಅಕ್ರಮ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ನಾಳೆ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಕ್ರಮ ಮದ್ಯ ಮಾರಾಟ ಕಡಿವಾಣದ ಬಗ್ಗೆ ಸೂಚನೆ ಕೊಡ್ತೇನೆ ಎಂದರು.

ಅಬಕಾರಿ ಸಚಿವರು ಉತ್ತರಕ್ಕೆ ಸಮಾಧಾನವಾಗದ ಸ್ಪೀಕರ್ ಮತ್ತು ಶಾಸಕರು:

ಅಬಕಾರಿ ಸಚಿವರ ಉತ್ತರ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗಾಗಲಿ, ಶಾಸಕ ತುಕಾರಾಂ ಅವರಿಗಾಗಲಿ ಸಮಾಧಾನ ನೀಡಲಿಲ್ಲ. ಹೆಚ್ಚು ಮದ್ಯ ಮಾರಾಟ ಮಾಡಿ ಎಂದು ಹಣಕಾಸು ಇಲಾಖೆ ಗುರಿ ನಿಗದಿ ಮಾಡದಿದ್ದಾಗ ಮಾತ್ರ ಗೋಪಾಲಯ್ಯ ಅವರು ಸಮಂಜಸವಾದ ಉತ್ತರ ಕೊಡಲು ಸಾಧ್ಯವಾಗುತ್ತದೆ ಎಂದು ಸ್ಪೀಕರ್‌ ಕಾಗೇರಿ ಹೇಳಿದರು.

ಸರ್ಕಾರಕ್ಕೆ ಚಾಟಿ ಬೀಸಿದ ಸ್ಪೀಕರ್:

ಇದೇ ಸಮಯದಲ್ಲಿ ಮಾತನಾಡಿದ ಸ್ಪೀಕರ್ ಗ್ರಾಮೀಣ ಭಾಗದಲ್ಲಿ ದಿನೇದಿನೇ ಅಕ್ರಮ ಮದ್ಯ ಮಾರಾಟ ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಸರ್ಕಾರ ಕೂಡಲೇ ಎಚ್ಚೆತ್ತು ಕೊಳ್ಳಬೇಕು ಜನರ ಆರೋಗ್ಯಕ್ಕಿಂತ ಹಣ ಮುಖ್ಯವಲ್ಲ ಆದಾಯ ಬರುತ್ತದೆ ಎನ್ನುವ ದೃಷ್ಟಿಯಿಂದ ಅಕ್ರಮ ಮಧ್ಯಕ್ಕೆ ಕುಮ್ಮಕ್ಕು ನೀಡುವುದು ಸರಿಯಲ್ಲ ಎಂದು ಸರ್ಕಾರವನ್ನು ಚಾಟಿಗೆ ತೆಗೆದುಕೊಂಡರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...