Sunday, June 15, 2025
Google search engine
Homeಶಿವಮೊಗ್ಗಆರೋಗ್ಯಸರ್ಕಾರದ ಚಿತ್ತ ಲಾಕ್ ಡೌನ್ ನತ್ತ..!

ಸರ್ಕಾರದ ಚಿತ್ತ ಲಾಕ್ ಡೌನ್ ನತ್ತ..!

ಕೋವಿಡ್ ಸೋಂಕಿನ ಮಾರ್ಗಸೂಚಿಗಳ ಕುರಿತು ಸಾರ್ವಜನಿಕರು ನಿರ್ಲಕ್ಷ್ಯವಹಿಸಿದರೆ ಮುಂಬೈ, ಹೊಸದಿಲ್ಲಿ, ಪಶ್ಚಿಮ ಬಂಗಾಳದ ರೀತಿ ಲಾಕ್‍ಡೌನ್ ಮಾಡಬೇಕಾಗುತ್ತದೆ’ ಎಂದು ಕಂದಾಯ ಸಚಿವ ಆರ್.ಅಶೋಕ್ ಪರೋಕ್ಷವಾಗಿ ಲಾಕ್‍ಡೌನ್ ಘೋಷಣೆಯ ಬಗ್ಗೆ ಸುಳಿವು ನೀಡಿದ್ದಾರೆ.


ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ‘ರಾಜಧಾನಿ ಬೆಂಗಳೂರು ಅನ್ನು ರೆಡ್‍ಝೋನ್ ಎಂದು ಕೇಂದ್ರ ಸರಕಾರ ಹೇಳಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ತಜ್ಞರು ಹಾಗೂ ಸಚಿವರನ್ನು ಒಳಗೊಂಡಂತೆ ಮತ್ತೊಮ್ಮೆ ಸಭೆ ಕರೆದು ಕಠಿಣ ನಿಯಮಗಳ ಬಗ್ಗೆ ನಿರ್ಧಾರ ಮಾಡಬಹುದು ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆ ಬರುತ್ತದೆ ಎಂಬ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆಡೆ ತಜ್ಞರ ಸಮಿತಿ ನೀಡುವ ಸಲಹೆಗಳನ್ನು ಯಥಾವತ್ತಾಗಿ ಜಾರಿಮಾಡಲಾಗುತ್ತದೆ ಎಂದ ಅವರು, ಸಾರ್ವಜನಿಕರು ಕೋವಿಡ್ ಸೋಂಕು ತಡೆಗಟ್ಟಲು ಸರಕಾರ ಹೇರಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಲು ನಡೆಸಲು ಮುಂದಾಗಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅಶೋಕ್, ಸಭೆ ಬಗ್ಗೆ ತಲೆಯಲ್ಲಿ ಇಲ್ಲ. ಹೀಗಾಗಿ ಜ.4 ಅಥವಾ 5ರಂದು ಸಭೆ ಮಾಡಿ ಕೊವೀಡ್ ಸೋಂಕು ತಡೆಗಟ್ಟಲು ಬಿಗಿ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಪುನರುಚ್ಚರಿಸಿದರು.

ಕರ್ನಾಟಕದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ .

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!