Home ಶಿವಮೊಗ್ಗಆರೋಗ್ಯಸರ್ಕಾರದ ಚಿತ್ತ ಲಾಕ್ ಡೌನ್ ನತ್ತ..!

ಸರ್ಕಾರದ ಚಿತ್ತ ಲಾಕ್ ಡೌನ್ ನತ್ತ..!

by EDITOR NEWS WARRIORS
0 comments

ಕೋವಿಡ್ ಸೋಂಕಿನ ಮಾರ್ಗಸೂಚಿಗಳ ಕುರಿತು ಸಾರ್ವಜನಿಕರು ನಿರ್ಲಕ್ಷ್ಯವಹಿಸಿದರೆ ಮುಂಬೈ, ಹೊಸದಿಲ್ಲಿ, ಪಶ್ಚಿಮ ಬಂಗಾಳದ ರೀತಿ ಲಾಕ್‍ಡೌನ್ ಮಾಡಬೇಕಾಗುತ್ತದೆ’ ಎಂದು ಕಂದಾಯ ಸಚಿವ ಆರ್.ಅಶೋಕ್ ಪರೋಕ್ಷವಾಗಿ ಲಾಕ್‍ಡೌನ್ ಘೋಷಣೆಯ ಬಗ್ಗೆ ಸುಳಿವು ನೀಡಿದ್ದಾರೆ.


ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ‘ರಾಜಧಾನಿ ಬೆಂಗಳೂರು ಅನ್ನು ರೆಡ್‍ಝೋನ್ ಎಂದು ಕೇಂದ್ರ ಸರಕಾರ ಹೇಳಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ತಜ್ಞರು ಹಾಗೂ ಸಚಿವರನ್ನು ಒಳಗೊಂಡಂತೆ ಮತ್ತೊಮ್ಮೆ ಸಭೆ ಕರೆದು ಕಠಿಣ ನಿಯಮಗಳ ಬಗ್ಗೆ ನಿರ್ಧಾರ ಮಾಡಬಹುದು ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆ ಬರುತ್ತದೆ ಎಂಬ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆಡೆ ತಜ್ಞರ ಸಮಿತಿ ನೀಡುವ ಸಲಹೆಗಳನ್ನು ಯಥಾವತ್ತಾಗಿ ಜಾರಿಮಾಡಲಾಗುತ್ತದೆ ಎಂದ ಅವರು, ಸಾರ್ವಜನಿಕರು ಕೋವಿಡ್ ಸೋಂಕು ತಡೆಗಟ್ಟಲು ಸರಕಾರ ಹೇರಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಲು ನಡೆಸಲು ಮುಂದಾಗಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅಶೋಕ್, ಸಭೆ ಬಗ್ಗೆ ತಲೆಯಲ್ಲಿ ಇಲ್ಲ. ಹೀಗಾಗಿ ಜ.4 ಅಥವಾ 5ರಂದು ಸಭೆ ಮಾಡಿ ಕೊವೀಡ್ ಸೋಂಕು ತಡೆಗಟ್ಟಲು ಬಿಗಿ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಪುನರುಚ್ಚರಿಸಿದರು.

ಕರ್ನಾಟಕದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ .

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...