Wednesday, April 30, 2025
Google search engine
Homeಶಿವಮೊಗ್ಗಗೃಹಸಚಿವರ ಹೆಸರಿಗೆ ಮಣ್ಣು ಬಳಿಯುವ ಕೆಲಸ ಆರಗ ಜ್ಞಾನೇಂದ್ರ ತವರು ಕ್ಷೇತ್ರದಲ್ಲಿ ಮಣ್ಣು ಮಾಫಿಯಾ..!!

ಗೃಹಸಚಿವರ ಹೆಸರಿಗೆ ಮಣ್ಣು ಬಳಿಯುವ ಕೆಲಸ ಆರಗ ಜ್ಞಾನೇಂದ್ರ ತವರು ಕ್ಷೇತ್ರದಲ್ಲಿ ಮಣ್ಣು ಮಾಫಿಯಾ..!!

ತೀರ್ಥಹಳ್ಳಿ: ತಾಲ್ಲೂಕು ವ್ಯಾಪ್ತಿಯಲ್ಲಿ ಕಲ್ಲು, ಮರಳು,ಅಕ್ರಮ ಸಾಗಾಟ ಜೊತೆಗೆ ಇದೀಗ ಭೂಗರ್ಭ ತೋಡಿ ಮಣ್ಣು ಮಾಫಿಯಾಕ್ಕೆ ಲಗ್ಗೆ ಇಟ್ಟಿರುವ ಅಕ್ರಮಕೋರರು ತಾಲ್ಲೂಕಿನಾದ್ಯಂತ ಕಂದಾಯ ಅರಣ್ಯ ಭೂಮಿ ಜಾಗ ಕಂಡಕಂಡಲ್ಲಿ ಮಣ್ಣು ತೆಗೆದು ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಅಕ್ರಮ ಲೇಔಟ್ ಗೆ ಲಾರಿಗಳಲ್ಲಿ ತಂದು ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆ ಬದಿಗಳಲ್ಲಿ ಸುರಿದು ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡುತ್ತಿದ್ದರು ಕಂಡರೂ ಕಾಣದಂತಿರುವ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು,
ಕುಶಾವತಿ ಭಾಗದಲ್ಲಿ ವೀಕೆಂಡ್ ಕರ್ಫ್ಯೂ ವೇಳೆ ತುಂಗಾ ನದಿ ದಡದಲ್ಲಿ ಲೇಔಟ್ ನಿರ್ಮಾಣ ಮಾಡುವವರು ಯಾವುದೇ ಪರವಾನಗಿ ಪಡೆಯದೇ ಅಕ್ರಮವಾಗಿ ಮಣ್ಣನ್ನು ತಂದು ನದಿ ದಡ ಪಾತ್ರಕ್ಕೆ ಸುರಿಯುತ್ತಿದ್ದು,
ವಿಷಯ ತಿಳಿಯುತ್ತಿದ್ದಂತೆಯೇ ತಾಲ್ಲೂಕು ಆಡಳಿತದ ಅಧಿಕಾರಿಗಳು ತಡೆದು ಕ್ರಮ ಕೈಗೊಂಡಿದ್ದಾರೆ.


ತಾಲ್ಲೂಕಿನಲ್ಲಿ ಇತ್ತೀಚೆಗೆ ಇದೇ ರೀತಿ ಕಾನೂನು ಬಾಹಿರ ಮಣ್ಣುಗಳನ್ನು ತೆಗೆದು ಅಕ್ರಮ ಲೇಔಟ್ ನಿರ್ಮಾಣ ಮಾಡುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,
ಕಾನೂನು ನಿಯಮ ಮೀರಿ ಯಂತ್ರಗಳನ್ನು ಬಳಸಿ ತೆಗೆಯುವುದು ಸಾವಿರಾರು ಲೋಡ್ ಮಣ್ಣು ತಂದು ಲೇಔಟ್ ನಿರ್ಮಾಣ ಮಾಡುತ್ತಿದ್ದು ಈ ಬಗ್ಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಭೂ ವಿಜ್ಞಾನ ಅಧಿಕಾರಿಗಳ ಗಮನಕ್ಕೆ ಬಂದರೂ ಮಣ್ಣು ಸವಕಳಿಯಾಗದಂತೆ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿರುವುದು ನೋಡಿದರೆ ಪರೋಕ್ಷವಾಗಿ ಈ ಮಣ್ಣು ಮಾಫಿಯಾದವರ ಜೊತೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಜಿಲ್ಲಾಧಿಕಾರಿಗಳು ಸಚಿವರ ಕ್ಷೇತ್ರದಲ್ಲಿ ಈ ರೀತಿ ಮಣ್ಣು ಮಾಫಿಯಾ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...