Wednesday, April 30, 2025
Google search engine
Homeಶಿವಮೊಗ್ಗಆರೋಗ್ಯದಿನೇ ದಿನೇ ಕೋರೋಣ ಹೆಚ್ಚಳ ನಾಳೆಯಿಂದ ಟಪ್ ರೂಲ್ಸ್ ಜಾರಿ ಗೃಹ ಸಚಿವ ಆರಗ ಜ್ಞಾನೇಂದ್ರ...

ದಿನೇ ದಿನೇ ಕೋರೋಣ ಹೆಚ್ಚಳ ನಾಳೆಯಿಂದ ಟಪ್ ರೂಲ್ಸ್ ಜಾರಿ ಗೃಹ ಸಚಿವ ಆರಗ ಜ್ಞಾನೇಂದ್ರ ಘೋಷಣೆ…!

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸರ್ಕಾರ ನಾಳೆಯಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಇದರ ಬಗ್ಗೆ ಮಹತ್ವದ ಮಾಹಿತಿ ನೀಡಿದರು.

ಕೋವಿಡ್ ಟೆಸ್ಟ್ ಪ್ರಮಾಣ ಹೆಚ್ಚಿಸಲಾಗುವುದು:

ರಾಜ್ಯಾದ್ಯಂತ ಕೋವಿಡ್ ಟೆಸ್ಟ್ ಹೆಚ್ಚಿಸಲಾಗುವುದು ಪ್ರತಿದಿನ ಈಗಿರುವ 1 ಲಕ್ಷದ 10 ಸಾವಿರ ಟೆಸ್ಟಿಂಗ್ ಸಂಖ್ಯೆಯನ್ನು 1 ಲಕ್ಷದ 50 ಸಾವಿರಕ್ಕೆ ಹೆಚ್ಚಿಸಲಾಗುವುದು.


ಮಾಸ್ಕ್, ದೈಹಿಕ, ಸಾಮಾಜಿಕ ಅಂತರ ಕಡ್ಡಾಯ ಪಾಲನೆಗೆ ಸೂಚಿಸಲಾಗಿದೆ ಎಂದರು.

ಶಾಲೆ ಬಂದ್ ಮಾಡುವ ವಿಚಾರದಲ್ಲಿ ತಾಲೂಕು ಮಟ್ಟದಲ್ಲಿ ನಿರ್ಧಾರ:

ಶಾಲೆಗಳಲ್ಲಿ, ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹರಡುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುವುದು. ಶಾಲೆಗಳನ್ನು ಬಂದ್ ಮಾಡುವುದು ಅಥವಾ ರಜೆ ನೀಡುವ ಬಗ್ಗೆ ತಾಲುಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು:

  • ಕೋವಿಡ್ ಟೆಸ್ಟಿಂಗ್ ಹೆಚ್ಚಳ
  • ಮಾಸ್ಕ್, ದೈಹಿಕ ಅಂತರ, ಸಾಮಾಜಿಕ ಅಂತರ ಪಾಲನೆ ಕಡ್ಡಾಯ
  • ವಿಶೇಷವಾಗಿ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ
  • ಬೂಸ್ಟರ್ ಡೋಸ್ ವೇಗ ಹೆಚ್ಚಳಕ್ಕೆ ಸೂಚನೆ
  • ಹೋಂ ಐಸೋಲೇಷನ್ ನಲ್ಲಿರುವವರ ಬಗ್ಗೆ ನಿಗಾ
  • ಜನಸಂದಣಿಯಾಗದಂತೆ ಕ್ರಮ
  • ಜನ ಗುಂಪು ಸೇರದಂತೆ ಹಬ್ಬ ಆಚರಣೆಗೆ ಸೂಚನೆ
  • ದೇವಸ್ಥಾನಗಳಲ್ಲಿ ಈಗಿರುವ ನಿಯಮ ಕಡ್ಡಾಯ ಪಾಲನೆ, ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲು
  • ಐಟಿ-ಬಿಟಿ ಕಚೇರಿ ಓಪನ್ ಬಗ್ಗೆ ಯಥಾಸ್ಥಿತಿ ಮುಂದುವರಿಕೆ
  • ಹೋಟೆಲ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಈಗಿರುವ ಯಥಾಸ್ಥಿತಿ ಮುಂದುವರಿಕೆ
  • ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜು, ಹಾಸ್ಟೇಲ್ ಬಂದ್ ಬಗ್ಗೆ ಶಿಕ್ಷಣ ಸಂಸ್ಥೆ ಹಾಗೂ ಜಿಲ್ಲಾಡಳಿತದ ನಿರ್ಧಾರಕ್ಕೆ ಬಿಟ್ಟದ್ದು
  • ಮಕ್ಕಳಿಗಾಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್, ಬೆಡ್ ಮೀಸಲು
  • ಮಾರ್ಕೆಟ್ ಗಳಲ್ಲಿ ಜನಸಂದಣಿಯಾಗದಂತೆ ಕ್ರಮ, ಮಾರ್ಕೆಟ್ ಸ್ಥಳಾಂತರಕ್ಕೆ ವ್ಯವಸ್ಥೆ

ನಾಳೆಯಿಂದಲೇ ರಾಜ್ಯಾದ್ಯಂತ ಈ ನಿಯಮ ಜಾರಿಗೆ ಬರಲಿದ್ದು, ಇನ್ನಷ್ಟು ಕಠಿಣ ನಿಯಮಗಳ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಕೋವಿಡ್ ಸ್ಥಿತಿಗತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ತಿಳಿಸಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...