Wednesday, April 30, 2025
Google search engine

ಗಣ ರಾಜ್ಯೋತ್ಸವ ಸಂಭ್ರಮಾಚರಣೆ ಪ್ರಯುಕ್ತ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ..!

 ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ಶಾಖೆಯು ದಿನಾಂಕ:25-01-2022 ರಂದು ಬೆಳಿಗ್ಗೆ 10 ಗಂಟೆಯಿಂದ ಸೊಪ್ಪುಗುಡ್ಡೆಯ ಐಎಂಎ- ರೋಟರಿ ರಕ್ತನಿಧಿಯಲ್ಲಿ ರಕ್ತದಾನ ಮಾಡುವ ಮೂಲಕ 73 ನೇ ಗಣರಾಜ್ಯೋತ್ಸವದ ದಿನವನ್ನು ಸಂಭ್ರಮಿಸುತ್ತಿದೆ.

 ತಾಲ್ಲೂಕಿನ ವಿವಿಧ ಇಲಾಖೆಗಳ ಸಹೃದಯಿ ಸರ್ಕಾರಿ ನೌಕರರು ಹಾಗೂ ನಾಗರೀಕ ಬಂಧುಗಳ ಸಹಕಾರದಿಂದ ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದ ಸಂದರ್ಭಗಳಲ್ಲಿ ನಿರಂತರ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ಸಂಘದ ಎಂಟನೇ ರಕ್ತದಾನ ಶಿಬಿರ ಇದಾಗಿದ್ದು ಯಶಸ್ಸಿಗೆ ಸಹಕರಿಸಿದ ಪ್ರತಿಯೊಬ್ಬರನ್ನೂ ಸಂಘವು ಕೃತಜ್ಞತೆಯಿಂದ ಸ್ಮರಿಸುತ್ತದೆ.

  ಕೋವಿಡ್ ಸಮಸ್ಯೆಯ ಹಿನ್ನಲೆಯಲ್ಲಿ ರಕ್ತದ ಲಭ್ಯತೆ ತೀವ್ರ ಕಡಿಮೆ ಇರುವುದರಿಂದ ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಳ್ಳುವ ಮೂಲಕ ರೋಗಿಗಳ ಜೀವ ಉಳಿಸುವ ಮಹತ್ವದ ಕಾರ್ಯಕ್ಕೆ ಕೈ ಜೋಡಿಸುವಂತೆ ಸಂಘದ ಅಧ್ಯಕ್ಷ ಟಿ ವಿ ಸತೀಶ ಕೋರಿದ್ದಾರೆ.

  ರಕ್ತದಾನದ ಬಗ್ಗೆ ಅನೇಕರಲ್ಲಿ ಗೊಂದಲ, ಆತಂಕಗಳು ಈಗಲೂ ಇದೆ. ಅವಶ್ಯಕತೆಯಷ್ಟು ರಕ್ತದ ಪೂರೈಕೆಯ ಅಲಭ್ಯತೆಗೆ ಇದು ಪ್ರಮುಖ ಕಾರಣ. ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಸರಾಸರಿ 5.5 ರಿಂದ 6 ಲೀಟರ್ ನಷ್ಟು ರಕ್ತವಿರುತ್ತದೆ. ರಕ್ತದಾನ ಪ್ರಕ್ರಿಯೆಯಲ್ಲಿ ಕೇವಲ 350 ಮಿ.ಲೀನಷ್ಟೇ ರಕ್ತವನ್ನು ಸ್ವೀಕರಿಸುವುದರಿಂದ ದಾನಿಗೆ ಯಾವುದೇ ಅಪಾಯವಾಗುವುದಿಲ್ಲ. 18 ರಿಂದ 60 ವರ್ಷದೊಳಗಿನ, 45 ಕೆ.ಜಿ.ಗಿಂತಲೂ ಹೆಚ್ಚು ತೂಕವಿರುವ 12.5 ಗ್ರ್ಯಾಮ್‌ಗಿಂತಲೂ ಹೆಚ್ಚು ಹಿಮೋಗ್ಲೋಬಿನ್ ಅಂಶ ಹೊಂದಿರುವ ಎಲ್ಲಾ ಆರೋಗ್ಯವಂತರೂ ರಕ್ತದಾನ ಮಾಡಬಹುದು. ಲಿವರ್, ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಋತುಸ್ರಾವದಲ್ಲಿರುವವರು, ಹಾಲುಣಿಸುವ ತಾಯಂದಿರು, ರಕ್ತ ಹೀನತೆ, ಕ್ಯಾನ್ಸರ್, ಕ್ಷಯ, ಅಧಿಕ ರಕ್ತದೊತ್ತಡ, ಅಪಸ್ಮಾರ ಮುಂತಾದ ತೊಂದರೆಗಳಿರುವವರು ರಕ್ತದಾನ ಮಾಡಬಾರದು.

 ರಕ್ತದಾನದ ಬಳಿಕ ಹೆಚ್ಚೆಂದರೆ ಒಂದು ತಾಸಿನ ವಿಶ್ರಾಂತಿ ಸಾಕು. ಮೂರು ತಿಂಗಳೊಳಗಾಗಿ ದಾನಿಯ ದೇಹದಲ್ಲಿ ರಕ್ತವು ಮರು ಉತ್ಪತ್ತಿಯಾಗುತ್ತದೆ. ದಾನಿಯಿಂದ ಪಡೆದ ರಕ್ತವನ್ನು ಸಾಮಾನ್ಯವಾಗಿ ೩೫ ದಿನಗಳವರೆಗೆ ಮಾತ್ರ ವಿಶೇಷ ಶೀತಲೀಕರಣ ವ್ಯವಸ್ಥೆಯಲ್ಲಿ ಕಾಪಾಡಿ ಉಪಯೋಗಿಸಲು ಸಾಧ್ಯ. ರಕ್ತವನ್ನು ಕೇವಲ ದಾನದಿಂದಷ್ಟೇ ಪಡೆಯಬಹುದು.

 ಆದ್ದರಿಂದ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಹಾಗೂ ಇತರರನ್ನೂ ರಕ್ತದಾನಕ್ಕಾಗಿ ಪ್ರೇರೇಪಿಸುವಂತೆ ಸರ್ವರನ್ನೂ ಕೋರಿರುವ ಅವರು ಜನವರಿ 25 ಅಥವಾ 26 ರಂದು ಸರ್ಕಾರಿ ನೌಕರರು ಹಾಗೂ ಸಾರ್ವಜನಿಕ ಬಂಧುಗಳು ತಮಗೆ ಅನುಕೂಲವಾದ ಸಮಯಕ್ಕೆ ತಮ್ಮ ಸಮೀಪದ ರಕ್ತನಿಧಿ ಕೇಂದ್ರಕ್ಕೆ ತೆರಳಿ ರಕ್ತದಾನ ಮಾಡುವಂತೆ ವಿನಂತಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...