Thursday, May 1, 2025
Google search engine
Homeರಾಜ್ಯರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ ಮುಖ್ಯಮಂತ್ರಿ ಆಪ್ತರಿಗೆ ಇಲ್ಲ ಉಸ್ತುವಾರಿ ಪಟ್ಟ ಯಾರು ಯಾವ ಜಿಲ್ಲೆಗೆ...

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ ಮುಖ್ಯಮಂತ್ರಿ ಆಪ್ತರಿಗೆ ಇಲ್ಲ ಉಸ್ತುವಾರಿ ಪಟ್ಟ ಯಾರು ಯಾವ ಜಿಲ್ಲೆಗೆ ಉಸ್ತುವಾರಿ ಸಚಿವರು? ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟ..! ಶೀಘ್ರದಲ್ಲೇ ಸಂಪುಟ ವಿಸ್ತರಣೆ ಸಾಧ್ಯತೆ?

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಐದು ತಿಂಗಳ ನಂತರ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಯಾರಿಗೆ ಯಾವ ಜಿಲ್ಲೆ ವಿವರ ಈ ಕೆಳಕಂಡಂತಿದೆ:

ಬಸವರಾಜ ಬೊಮ್ಮಾಯಿ – ಬೆಂಗಳೂರು ನಗರ
ಗೋವಿಂದ ಕಾರಜೋಳ – ಬೆಳಗಾವಿ
ಕೆ. ಎಸ್. ಈಶ್ವರಪ್ಪ – ಚಿಕ್ಕಮಗಳೂರು
ಬಿ. ಶ್ರೀರಾಮುಲು – ಬಳ್ಳಾರಿ
ವಿ. ಸೋಮಣ್ಣ – ಚಾಮರಾಜನಗರ
ಉಮೇಶ್ ವಿ. ಕತ್ತಿ – ವಿಜಯಪುರ
ಎಸ್. ಅಂಗಾರ – ಉಡುಪಿ
ಆರಗ ಜ್ಞಾನೇಂದ್ರ – ತುಮಕೂರು
ಡಾ. ಸಿ. ಎನ್. ಅಶ್ವತ್ಥ ನಾರಾಯಣ – ರಾಮನಗರ
ಸಿ. ಸಿ. ಪಾಟೀಲ್ – ಬಾಗಲಕೋಟೆ
ಆನಂದ್ ಸಿಂಗ್ – ಕೊಪ್ಪಳ
ಕೋಟಾ ಶ್ರೀನಿವಾಸ ಪೂಜಾರಿ – ಉತ್ತರ ಕನ್ನಡ
ಪ್ರಭು ಚವ್ಹಾಣ – ಯಾದಗಿರಿ
ಮುರುಗೇಶ್‌ ನಿರಾಣಿ – ಕಲಬುರಗಿ
ಶಿವರಾಮ್ ಹೆಬ್ಬಾರ್ – ಹಾವೇರಿ
ಎಸ್. ಟಿ. ಸೋಮಶೇಖರ್ – ಮೈಸೂರು
ಬಿ. ಸಿ. ಪಾಟೀಲ್ – ಚಿತ್ರದುರ್ಗ ಮತ್ತು ಗದಗ
ಬಿ. ಎ. ಬಸವರಾಜ – ದಾವಣಗೆರೆ
ಡಾ. ಕೆ. ಸುಧಾಕರ್ – ಬೆಂಗಳೂರು ಗ್ರಾಮಾಂತರ
ಕೆ. ಗೋಪಾಲಯ್ಯ – ಹಾಸನ ಮತ್ತು ಮಂಡ್ಯ
ಶಶಿಕಲಾ ಜೊಲ್ಲೆ – ವಿಜಯನಗರ
ಎಂಟಿಬಿ ನಾಗರಾಜ್ – ಚಿಕ್ಕಬಳ್ಳಾಪುರ
ಕೆ. ಸಿ. ನಾರಾಯಣ ಗೌಡ – ಶಿವಮೊಗ್ಗ
ಬಿ. ಸಿ. ನಾಗೇಶ್‌ – ಕೊಡಗು
ವಿ. ಸುನೀಲ್ ಕುಮಾರ್ – ದಕ್ಷಿಣ ಕನ್ನಡ
ಹಾಲಪ್ಪ ಆಚಾರ್ – ಧಾರವಾಡ
ಶಂಕರ್ ಬಿ. ಮುನೇನಕೊಪ್ಪ – ರಾಯಚೂರು ಮತ್ತು ಬೀದರ್
ಮುನಿರತ್ನ – ಕೋಲಾರ.

ಮುಖ್ಯಮಂತ್ರಿಯ ಪರಮಾಪ್ತ ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಹಾಗೂ ಸಚಿವ ಮಾಧುಸ್ವಾಮಿ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಗಳನ್ನು ನೀಡಿಲ್ಲ.

ಮಾಧುಸ್ವಾಮಿ ಅವರಿಗಿಂತ ಮುಖ್ಯಮಂತ್ರಿಯ ಪರಮಾಪ್ತ ಅಶೋಕ್ ಅವರಿಗೆ ಬೆಂಗಳೂರು ನಗರದ ಉಸ್ತುವಾರಿ ನೀಡಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಈಗ ಹುಸಿಯಾಗಿದೆ.

ಹಲವು ರಾಜಕೀಯ ಲೆಕ್ಕಾಚಾರ ಗಳನ್ನೊಳಗೊಂಡ ಈ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಹಲವು ಸಚಿವರುಗಳಿಗೆ ನುಂಗಲಾರದ ತುಪ್ಪವಾಗಿದ್ದು ಅಸಮಾಧಾನದ ಬೇಗುದಿ ಹೊಗೆಯಾಡುತ್ತಿದೆ. ತಮ್ಮ ಆಪ್ತರಲ್ಲಿ ಕೆಲ ಸಚಿವರು ಗಳು ಅಸಮಧಾನವನ್ನು ಹೊರಹಾಕುತ್ತಿದ್ದು ಅದರಲ್ಲೂ ಹಿರಿಯ ಸಚಿವರು ತಮ್ಮ ಮೂಲ ಕ್ಷೇತ್ರವನ್ನೇ ಬಿಟ್ಟು ಬೇರೆ ಕಡೆ ಕೊಟ್ಟಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಉಸ್ತುವಾರಿ ಸಚಿವರುಗಳ ಬದಲಾವಣೆಯ ಬೆನ್ನಲ್ಲೇ ಸಂಪುಟ ವಿಸ್ತರಣೆ ಸಾಧ್ಯತೆ:

ಜಿಲ್ಲಾ ಉಸ್ತುವಾರಿಗಳ ನೇಮಕ ಆದೇಶ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು .ಹಲವು ಹಿರಿಯ ಸಚಿವರುಗಳಿಗೆ ಕೋಕ್ ನೀಡಿ ಹೊಸಬರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ.

ಶಾಸಕ ಯತ್ನಾಳ್ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಚಿವ ಸಂಪುಟದಲ್ಲಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ:

ಬಸನಗೌಡ ಯತ್ನಾಳ್, ಹೊನ್ನಾಳಿ ಶಾಸಕ ರೇಣುಕಾಚಾರ್ಯ ನೂತನ ಸಂಪುಟದಲ್ಲಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದು. ಬದ್ಧ ವೈರಿಗಳಾಗಿದ್ದ ಇವರು ಇತ್ತೀಚೆಗೆ ಪರಸ್ಪರ ಆಪ್ತ ಸಮಾಲೋಚನೆಯಲ್ಲಿ ತೊಡಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...