by EDITOR NEWS WARRIORS
1 comment

ಯಶಸ್ವಿಯಾಗಿ ನಡೆದ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದ ರಕ್ತದಾನ ಶಿಬಿರ..!

73 ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಗಾಗಿ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
 ಸರ್ಕಾರಿ ನೌಕರರ ಸಮಸ್ಯೆಗಳ ಪರಿಹಾರಕ್ಕಷ್ಟೇ ಸೀಮಿತಗೊಳ್ಳದೆ ಅನೇಕ ನಿರಂತರ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಸಂಘದ ಸತತ ಎಂಟನೆಯ ರಕ್ತದಾನ ಶಿಬಿರ ಎಂಬ ಹೆಮ್ಮೆ ಸಂಘದ್ದು.
 ರಾಷ್ಟೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಮಯದಲ್ಲಿ ರಕ್ತದಾನದ ಮೂಲಕ ಸಂಭ್ರಮಿಸುವ ವಿಭಿನ್ನ ಪದ್ದತಿಯನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಸಂಘವು ಸರ್ಕಾರಿ ನೌಕರರು ಮತ್ತು ನಾಗರೀಕರು ವರ್ಷಕ್ಕೆರಡು ಬಾರಿಯಾದರೂ ರಕ್ತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಈ ಕಾರ್ಯವನ್ನು ಹಮ್ಮಿಕೊಂಡಿದ್ದು,ಇದರೊಂದಿಗೆ ಪ್ರತೀ ವರ್ಷ ಹೊಸ ಹೊಸ ರಕ್ತದಾನಿಗಳನ್ನು ರಕ್ತದಾನಕ್ಕೆ ಪ್ರೇರೇಪಿಸಿ ಸೇರ್ಪಡೆಗೊಳಿಸುವ ಉದ್ದೇಶ ಸಂಘದ್ದು. ಈ ದಿಸೆಯಲ್ಲಿ ಈ ಬಾರಿಯೂ ಹೊಸ ರಕ್ತದಾನಿಗಳ ಸೇರ್ಪಡೆಗೊಂಡಿರುವ ಬಗ್ಗೆ ಸಂಘ ಸಂತಸ ವ್ಯಕ್ತಪಡಿಸಿದೆ. 
  ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಕಟ್ಟೆ ಮಂಜುನಾಥ್ ಮತ್ತು ಜಯಪ್ರಕಾಶ್ ನೇತೃತ್ವದ ಕಂದಾಯ ಇಲಾಖಾ ತಂಡ, ಡಾ.ಅನಿಕೇತನ್ ನೇತೃತ್ವದ ಆರೋಗ್ಯ ಇಲಾಖಾ ತಂಡ, ಕೃಷಿ ಅಧಿಕಾರಿ ಕೌಶಿಕ್ ನೇತೃತ್ವದ ಕೃಷಿ ಇಲಾಖಾ ತಂಡ,ಉಪವಲಯ ಅರಣ್ಯಾಧಿಕಾರಿ ಎಲ್ಲಪ್ಪ ವಡ್ಡರ್ ನೇತೃತ್ವದ ಅರಣ್ಯ ಇಲಾಖಾ ತಂಡ, ಸಂಘದ ಉಪಾಧ್ಯಕ್ಷ ರಾಘವೇಂದ್ರ ಎಸ್ ನೇತೃತ್ವದ ಆರ್ ಡಿ ಪಿ ಆರ್ ತಂಡ, ಉಪನ್ಯಾಸಕ ನಾಗಭೂಷಣ, ಶಿಕ್ಷಕರಾದ ರಾಘವೇಂದ್ರ, ಮಂಜುನಾಥ್ ಕೆ ಆರ್, ನ್ಯಾಯಾಂಗ ಇಲಾಖೆಯ ಗಣೇಶ್ ಮೂರ್ತಿ ಮುಂತಾದವರ ಜೊತೆಗೆ ಹೊಸಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ರಾಜೇಶ್, ಸಾಮಾಜಿಕ ಹೋರಾಟಗಾರ ಹಾರೋಗೊಳಿಗೆ ವಿಶ್ವನಾಥ್,ಮಯೂರ ಹೋಟೆಲ್ ಸಿಬ್ಬಂದಿ ರಾಮಕುಮಾರ್ ಸಂಘದ ಮನವಿಗೆ ಸ್ಪಂದಿಸಿ ರಕ್ತದಾನ ಮಾಡಿರುವುದು ಸಂಘದ ಉತ್ಸಾಹ ಹೆಚ್ಚಿಸಿದ್ದು ಸಂಘದ ಸಮಾಜಮುಖಿ ಕಾರ್ಯದ ಯಶಸ್ಸಿಗೆ ಸಹಕರಿಸಿದ ಸರ್ವರನ್ನೂ ಸಂಘದ ಅಧ್ಯಕ್ಷ ಟಿ ವಿ ಸತೀಶ, ಕಾರ್ಯದರ್ಶಿ ರಾಮು ಬಿ ಕೃತಜ್ಞತೆಯಿಂದ ಸ್ಮರಿಸಿ, ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

1 comment

rarefub June 25, 2025 - 2:56 pm

Здравствуйте, уважаемые форумчане! Мне посоветовали посмотреть на один интересный сайт. Реально кладезь знаний.

Как правильно черенковать или делить растение? стали понятны после прочтения этой категории. Все получится даже у новичка.
Ссылка ниже:

[url=https://raregreen.ru/category/razmnozhenie/]https://raregreen.ru/category/razmnozhenie/[/url]

Всем удачи в выращивании!

Reply

Leave a Comment

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...