Thursday, May 1, 2025
Google search engine

ಯಶಸ್ವಿಯಾಗಿ ನಡೆದ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದ ರಕ್ತದಾನ ಶಿಬಿರ..!

73 ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಗಾಗಿ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
 ಸರ್ಕಾರಿ ನೌಕರರ ಸಮಸ್ಯೆಗಳ ಪರಿಹಾರಕ್ಕಷ್ಟೇ ಸೀಮಿತಗೊಳ್ಳದೆ ಅನೇಕ ನಿರಂತರ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಸಂಘದ ಸತತ ಎಂಟನೆಯ ರಕ್ತದಾನ ಶಿಬಿರ ಎಂಬ ಹೆಮ್ಮೆ ಸಂಘದ್ದು.
 ರಾಷ್ಟೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಮಯದಲ್ಲಿ ರಕ್ತದಾನದ ಮೂಲಕ ಸಂಭ್ರಮಿಸುವ ವಿಭಿನ್ನ ಪದ್ದತಿಯನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಸಂಘವು ಸರ್ಕಾರಿ ನೌಕರರು ಮತ್ತು ನಾಗರೀಕರು ವರ್ಷಕ್ಕೆರಡು ಬಾರಿಯಾದರೂ ರಕ್ತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಈ ಕಾರ್ಯವನ್ನು ಹಮ್ಮಿಕೊಂಡಿದ್ದು,ಇದರೊಂದಿಗೆ ಪ್ರತೀ ವರ್ಷ ಹೊಸ ಹೊಸ ರಕ್ತದಾನಿಗಳನ್ನು ರಕ್ತದಾನಕ್ಕೆ ಪ್ರೇರೇಪಿಸಿ ಸೇರ್ಪಡೆಗೊಳಿಸುವ ಉದ್ದೇಶ ಸಂಘದ್ದು. ಈ ದಿಸೆಯಲ್ಲಿ ಈ ಬಾರಿಯೂ ಹೊಸ ರಕ್ತದಾನಿಗಳ ಸೇರ್ಪಡೆಗೊಂಡಿರುವ ಬಗ್ಗೆ ಸಂಘ ಸಂತಸ ವ್ಯಕ್ತಪಡಿಸಿದೆ. 
  ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಕಟ್ಟೆ ಮಂಜುನಾಥ್ ಮತ್ತು ಜಯಪ್ರಕಾಶ್ ನೇತೃತ್ವದ ಕಂದಾಯ ಇಲಾಖಾ ತಂಡ, ಡಾ.ಅನಿಕೇತನ್ ನೇತೃತ್ವದ ಆರೋಗ್ಯ ಇಲಾಖಾ ತಂಡ, ಕೃಷಿ ಅಧಿಕಾರಿ ಕೌಶಿಕ್ ನೇತೃತ್ವದ ಕೃಷಿ ಇಲಾಖಾ ತಂಡ,ಉಪವಲಯ ಅರಣ್ಯಾಧಿಕಾರಿ ಎಲ್ಲಪ್ಪ ವಡ್ಡರ್ ನೇತೃತ್ವದ ಅರಣ್ಯ ಇಲಾಖಾ ತಂಡ, ಸಂಘದ ಉಪಾಧ್ಯಕ್ಷ ರಾಘವೇಂದ್ರ ಎಸ್ ನೇತೃತ್ವದ ಆರ್ ಡಿ ಪಿ ಆರ್ ತಂಡ, ಉಪನ್ಯಾಸಕ ನಾಗಭೂಷಣ, ಶಿಕ್ಷಕರಾದ ರಾಘವೇಂದ್ರ, ಮಂಜುನಾಥ್ ಕೆ ಆರ್, ನ್ಯಾಯಾಂಗ ಇಲಾಖೆಯ ಗಣೇಶ್ ಮೂರ್ತಿ ಮುಂತಾದವರ ಜೊತೆಗೆ ಹೊಸಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ರಾಜೇಶ್, ಸಾಮಾಜಿಕ ಹೋರಾಟಗಾರ ಹಾರೋಗೊಳಿಗೆ ವಿಶ್ವನಾಥ್,ಮಯೂರ ಹೋಟೆಲ್ ಸಿಬ್ಬಂದಿ ರಾಮಕುಮಾರ್ ಸಂಘದ ಮನವಿಗೆ ಸ್ಪಂದಿಸಿ ರಕ್ತದಾನ ಮಾಡಿರುವುದು ಸಂಘದ ಉತ್ಸಾಹ ಹೆಚ್ಚಿಸಿದ್ದು ಸಂಘದ ಸಮಾಜಮುಖಿ ಕಾರ್ಯದ ಯಶಸ್ಸಿಗೆ ಸಹಕರಿಸಿದ ಸರ್ವರನ್ನೂ ಸಂಘದ ಅಧ್ಯಕ್ಷ ಟಿ ವಿ ಸತೀಶ, ಕಾರ್ಯದರ್ಶಿ ರಾಮು ಬಿ ಕೃತಜ್ಞತೆಯಿಂದ ಸ್ಮರಿಸಿ, ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...