Wednesday, April 30, 2025
Google search engine
Homeರಾಜ್ಯಅಡಿಕೆ ಬೇರು ಹುಳುವಿನ ಬಾಧೆಗೆ ಹತೋಟಿ ಕ್ರಮಗಳು!!

ಅಡಿಕೆ ಬೇರು ಹುಳುವಿನ ಬಾಧೆಗೆ ಹತೋಟಿ ಕ್ರಮಗಳು!!

ಶಿವಮೊಗ್ಗ>ಜುಲೈ> 16 >ಬೇರು ಹುಳುಗಳು ಅಡಿಕೆ ಕೃಷಿ ಪರಿಸರದಲ್ಲಿನ ದೀರ್ಘಕಾಲಿಕ ಕೀಟಗಳಾಗಿದ್ದು, ರೈತರಿಗೆ ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ಡಾ. ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಈ ಕೆಳಗಿನಂತೆ ನೀಡಿರುತ್ತಾರೆ.ಬೇರು ಹುಳುಗಳು ತೇವಾಂಶವಿರುವ ಮಣ್ಣಿನ ಪದರದಲಿ,್ಲ ಗೋಡು ಮಣ್ಣಿನಿಂದ ಕೂಡಿದ ಹಳ್ಳದ ಪಕ್ಕದ ಮತ್ತು ಗದ್ದೆ ಜಮೀನಿನಲ್ಲಿ ಮಾಡಿದ ಅಡಿಕೆ ತೋಟಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಹುಳುಗಳು ಭೂಮಿಯೊಳಗಿದ್ದು, ಅಡಿಕೆ ಬೇರುಗಳನ್ನು ಕತ್ತರಿಸಿ ತಿನ್ನುವುದರಿಂದ ಗಿಡಗಳು ರೋಗಗ್ರಸ್ಥವಾದಂತೆ ಕಂಡುಬರುತ್ತವೆ. ಬಾಧೆಗೀಡಾದ ಮರಗಳಲ್ಲಿ ಎಲೆಗಳು ಹಳದಿಯಾಗಿ ಗರಿ ಮತ್ತು ಗೆಣ್ಣುಗಳು ಗಿಡ್ಡವಾಗಿ ಕಾಂಡದ ತುದಿ ಮೊನಚಾಗುತ್ತದೆ. ಇಳುವರಿ ಕಡಿಮೆಯಾಗುತ್ತಾ ನಂತರದ ದಿನಗಳಲ್ಲಿ ಮರಗಳು ಸಾಯುತ್ತವೆ. ಹತೋಟಿ ಕ್ರಮಗಳು • ಮುಂಗಾರಿನಲ್ಲಿ ಒಂದೆರಡು ಹದ ಮಳೆ ಆದ ನಂತರ ಮುಸ್ಸಂಜೆಯಲ್ಲಿ ಭೂಮಿಯಿಂದ ಹೊರಬರುವ ದುಂಬಿಗಳನ್ನು ಹಿಡಿದು ನಾಶಪಡಿಸುವುದರಿಂದ ಸಂತತಿಯನ್ನು ಕಡಿಮೆ ಮಾಡಬಹುದು. • ಆಗಸ್ಟ್ ಮೊದಲನೆ ವಾರದಲ್ಲಿ 2-3 ನೇ ಹಂತದ ಬೇರು ಹುಳುಗಳು ಹೆಚ್ಚಾಗಿರುವಾಗ ಕ್ಲೋರೋಪೈರಿಫಾಸ್ 20 ಇ.ಸಿಯನ್ನು ಎಕರೆಗೆ 2 ಲೀ ನಂತೆ (200 ಲೀಟರ್ ನೀರಿಗೆ 400 ಮಿ.ಲಿ ಔಷಧಿ ಕರಗಿಸಿ) ಪ್ರತಿ ಮರಕ್ಕೆ 3-5 ಲೀ ಪ್ರಮಾಣದಲ್ಲಿ ಮರದ ಸುತ್ತ ಸುರಿಯಬೇಕು. • ಸೆಪ್ಟೆಂಬರ್ ತಿಂಗಳಲ್ಲಿ ಸಾಧ್ಯವಿರುವ ಕಡೆ ಬಸಿಗಾಲುವೆಗಳಲ್ಲಿ 3-4 ದಿನ ಕಂಠ ಮಟ್ಟ ನೀರು ನಿಲ್ಲಿಸಿದರೆ ಹುಳುಗಳು ಭೂಮಿಯ ಮೇಲ್ಪದರಕ್ಕೆ ಬರುತ್ತದೆ. ಬಸಿಗಾಲುವೆಗಳ ಮಧ್ಯದ ಪಟದಲ್ಲಿ ಅಗತೆ ಮಾಡಿ ಹುಳುಗಳನ್ನು ಹೆಕ್ಕಿ ನಾಶಪಡಿಸಬೇಕು. ನಂತರ ಇದೇ ತಿಂಗಳ ಮೂರನೇ ವಾರದಲ್ಲಿ ಕ್ಲೋರೋಫೈರಿಪಾಸ್ 20 ಇ.ಸಿಯನ್ನು ಎಕರೆಗೆ 2 ಲೀ (200 ಲೀಟರ್ ನೀರಿಗೆ 400 ಮಿ.ಲಿ ಔಷಧಿ ಕರಗಿಸಿ) ದ್ರಾವಣ ಅಥಾವ ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಅನ್ನು ಎಕರೆಗೆ 700 ಮಿ.ಲೀ ಪ್ರಮಾಣದಲ್ಲಿ (200 ಲೀಟರ್ ನೀರಿಗೆ 200 ಮಿ.ಲಿ ಔಷಧಿ ಕರಗಿಸಿ) ಪ್ರತಿ ಮರಕ್ಕೆ 3-5 ಲೀಟರ್ ನಂತೆ ದ್ರಾವಣ ರೂಪದಲ್ಲಿ ಸೇರಿಸಬೇಕು. • ಮೆಟಾರೈಜಿಯಂ ಅನಿಸೋಪ್ಲಿಯೆ ಅಥವಾ ಹೆಟರೋರಾಬ್ಟಿಸ್ 20 ಗ್ರಾಂ ಪುಡಿಯನ್ನು 1 ಲೀ ನೀರಿನಲ್ಲಿ ಬೆರೆಸಿ ಗಿಡದ ಬುಡ ಭಾಗಕ್ಕೆ ಹಾಕಬೇಕು ಹಾಗೆಯೇ ಮರವೊಂದಕ್ಕೆ 250 ಗ್ರಾಂ ಬೇವಿನ ಹಿಂಡಿ ಹಾಕಬೇಕು.ಇದಲ್ಲದೆ ತೋಟಗಳಿಗೆ ಕಲ್ಲುಗೊಚ್ಚು ಮಣ್ಣನ್ನು ಲಭ್ಯವಿರುವೆಡೆ ಹಾಕಬೇಕು. ಬೇರುಹುಳುಗಳ ಸಂಪೂರ್ಣ ನಿಯಂತ್ರಣ ಕಷ್ಟ ಸಾಧ್ಯವಾದರೂ ಸಮಗ್ರ ಹತೋಟಿ ಕ್ರಮಗಳನ್ನು 3-4 ವರ್ಷ ನಿರಂತರವಾಗಿ ಅನುಸರಿಸಿದರೆ ಹಾನಿಯನ್ನು ಕಡಿಮೆ ಮಾಡಿ ಇಳುವರಿ ಹೆಚ್ಚಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ..(ರಘುರಾಜ್ ಹೆಚ್, ಕೆ)…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...