Wednesday, April 30, 2025
Google search engine
Homeರಾಜ್ಯಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಲೆ ಎತ್ತಿದ ಮಸೀದಿ..!

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಲೆ ಎತ್ತಿದ ಮಸೀದಿ..!

ಅನಧಿಕೃತ ಪ್ರಾರ್ಥನಾ ಸ್ಥಳಕ್ಕೆ ಅವಕಾಶ ನೀಡಿದವರ ಮೇಲೆ ಕ್ರಮಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ !

ದಕ್ಷಿಣ ವೆಸ್ಟರ್ನ ರೈಲ್ವೆ ವಿಭಾಗ, ಬೆಂಗಳೂರು ಕೆಎಸ್‌ಆರ್ ರೈಲು ನಿಲ್ದಾಣದ ಪ್ಲ್ಯಾಟ್ ನಂ ೫ ರಲ್ಲಿ ಕೂಲಿ ಕಾರ್ಮಿಕರ ವಿಶ್ರಾಂತಿ ಕೊಠಡಿಯನ್ನು ಮುಸಲ್ಮಾನರು, ಅವರ ಪ್ರಾರ್ಥನಾಸ್ಥಳವನ್ನಾಗಿ ಮಾಡಿರುವುದು ಬೆಳಕಿಗೆ ಬಂದಿದೆ. ಈ ಘಟನೆಯು ರಾಷ್ಟ್ರೀಯ ಭದ್ರತೆ, ಸುರಕ್ಷತೆಯ ದೃಷ್ಠಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಬೆಂಗಳೂರು ಕೆಎಸ್‌ಆರ್ ರೈಲು ನಿಲ್ದಾಣವು ರಾಜ್ಯದ ಬಹು ಮಹತ್ವದ ರೈಲು ನಿಲ್ದಾಣವಾಗಿದೆ. ಬೆಂಗಳೂರು ರೈಲು ನಿಲ್ದಾಣದ ಹೊರಗೆ ಪ್ರಾರ್ಥನೆ ಮಾಡಲು ಹಲವಾರು ಮಸೀದಿಗಳು ಇರುವಾಗಲೂ ಸಹ ರೈಲು ನಿಲ್ದಾಣದ ಪ್ಲ್ಯಾಟ್‌ಫಾರ್ಮ ಮೇಲೆ ಪ್ರಾರ್ಥನೆಗೆ ಅವಕಾಶ ನೀಡಿರುವುದು ಒಂದು ಷಡ್ಯಂತ್ರ್ಯವಾಗಿದೆ. ಇಂದು ಪ್ರಾರ್ಥನಾಸ್ಥಳ ಮಾಡಿ, ನಾಳೆ ಅದನ್ನೇ ಮಸೀದಿಯನ್ನಾಗಿ ಮಾರ್ಪಾಡು ಮಾಡುವ ಸಾಧ್ಯತೆ ಇದೆ. ಹಾಗಾಗಿ ಅನಧಿಕೃತ ಪ್ರಾರ್ಥನಾಸ್ಥಳಕ್ಕೆ ಅವಕಾಶ ನೀಡಿದವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ . ಮೋಹನ್ ಗೌಡ ಇವರು ಆಗ್ರಹಿಸಿದರು. ಅವರು ಈ ಸಂದರ್ಭದಲ್ಲಿ ಸಮಿತಿಯ ಸಹಿತ ಭಜರಂಗದಳ, ರಾಷ್ಟ್ರ ರಕ್ಷಣಾ ಪಡೆ, ಹಿಂದೂ ಮಹಾಸಭಾ ಹಾಗೂ ವಿಶ್ವ ಹಿಂದೂ ಪರಿಷದ್ ವತಿಯಿಂದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆಡಳಿತ ಅಧಿಕಾರಿಗಳಿಗೆ ಮನವಿ ನೀಡಿದರು.

ಬೆಂಗಳೂರು ಭಯೋತ್ಪಾದಕರ ಆಶ್ರಯತಾಣವಾಗುತ್ತಿದೆ ಕೂಡಲೇ ಕ್ರಮ ತೆಗೆದುಕೊಂಡು ಜಾಗ ಖಾಲಿ ಮಾಡಿಸಿ ಮೋಹನ್ ಗೌಡ ಆಗ್ರಹ:

ಈಗಾಗಲೇ ಬೆಂಗಳೂರು ಭಯೋತ್ಪಾದಕರ ಆಶ್ರಯ ತಾಣವೆನಿಸಿದೆ. ೨೦೧೮ ರಲ್ಲಿ ರಾಷ್ಟ್ರೀಯ ತನಿಖಾದಳವು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪಶ್ಚಿಮ ಬಂಗಾಳದ ಮೂಲದ ಭಯೋತ್ಪಾದಕ ಆದಿಲ್ ಅಸದುಲ್ಲಾನನ್ನು ಬಂಧಿಸಿತ್ತು. ೨೦೧೯ ರಲ್ಲಿ ಇದೇ ಮ್ಯಾಜೆಸ್ಟಿಕ್ ಏರಿಯಾದಲ್ಲಿ ಕೇಂದ್ರ ಅಪರಾಧ ವಿಭಾಗದ ಪೋಲಿಸ್ ಅಧಿಕಾರಿಗಳು ಮಹಮ್ಮದ್ ಅಕ್ರಮ ಎನ್ನುವ ಭಯೋತ್ಪಾದಕನನ್ನು ಬಂಧಿಸಿದ್ದರು. ಬೆಂಗಳೂರಿನ ಕಾಟನಪೇಟೆ ಮಸೀದಿಯಲ್ಲಿ ಆಶ್ರಯ ಪಡೆದಿದ್ದ ಬಾಂಗ್ಲಾದೇಶ ಮೂಲದ ಜಮಾತ್ ಉಲ್ ಮುಜಾಹಿದ್ದಿನ್ ಸಂಘಟನೆಯ ಸದಸ್ಯನನ್ನು ೨೦೨೦ ರಲ್ಲಿ ಪೊಲೀಸರು ಬಂಧಿಸಿದ್ದರು. ಹೀಗಿದ್ದರೂ ರೈಲು ನಿಲ್ದಾಣದ ಪ್ಯಾಟ್‌ಫಾರ್ಮದಲ್ಲಿ ಅನ್ಯಮತೀಯರ ಪ್ರಾರ್ಥನಾಸ್ಥಳಕ್ಕೆ ಅವಕಾಶ ಮಾಡಿ ಕೊಡುವುದು ಎಷ್ಟು ಸೂಕ್ತ ? ಕೂಡಲೇ ಅಲ್ಲಿನ ಅನಧಿಕೃತ ಪ್ರಾರ್ಥನಾಸ್ಥಳ ಮಾಡಲು ಅವಕಾಶ ನೀಡಿದವರ ಮೇಲೆ ಕ್ರಮ ಜರುಗಿಸಬೇಕು ಮತ್ತು ಅಲ್ಲಿ ಪ್ರಾರ್ಥನೆ ಮಾಡಲು ಅವಕಾಶ ನೀಡಬಾರದು, ಅದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಆಗ್ರಹಿಸಿದರು.

ಇತಿ ತಮ್ಮ ವಿಶ್ವಾಸಿ,
ಶ್ರೀ. ಮೋಹನ ಗೌಡ,
ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ,
(ದೂ. ಕ್ರ. ೭೨೦೪೦೮೨೬೦೯)

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...