Home ಶಿವಮೊಗ್ಗಹಿಜಾಬ್ -ಕೇಸರಿ ಶಾಲು ವಿವಾದ ಬಿಜೆಪಿಯ ಮುಂದಿನ ಚುನಾವಣೆಯ ಹಿಡನ್ ಅಜೆಂಡಾ ವಿದ್ಯಾರ್ಥಿಗಳೇ ಜಾಗೃತರಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧಪಕ್ಷದ ನಾಯಕಿ ಯಮುನಾ ರಂಗೇಗೌಡ ಹೇಳಿಕೆ..!

ಹಿಜಾಬ್ -ಕೇಸರಿ ಶಾಲು ವಿವಾದ ಬಿಜೆಪಿಯ ಮುಂದಿನ ಚುನಾವಣೆಯ ಹಿಡನ್ ಅಜೆಂಡಾ ವಿದ್ಯಾರ್ಥಿಗಳೇ ಜಾಗೃತರಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧಪಕ್ಷದ ನಾಯಕಿ ಯಮುನಾ ರಂಗೇಗೌಡ ಹೇಳಿಕೆ..!

by EDITOR NEWS WARRIORS
0 comments

ಶಿವಮೊಗ್ಗ: ಭಾರತ ವಿವಿಧ ಧರ್ಮಗಳ ಸಮಾನತೆಯ ಐಕ್ಯತೆಯ ದೇಶ ಇಲ್ಲಿಯವರೆಗೂ ನಾವೆಂದೂ ಕಂಡಿರದ, ಕೇಳಿರದ, ಹಿಜಾಬ್ ವಿವಾದ ಇದ್ದಕ್ಕಿದ್ದಂತೆ ಮುಂಚೂಣಿಗೆ ಬಂದಿದೆ.

ಇದು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರ್ಕಾರದ ಮುಂದಿನ ಚುನಾವಣೆಗೆ ನಡೆಸಿರುವ ಅಜೆಂಡಾ , ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಯುವಕರಿಗೆ ಕೊಟ್ಟ ಭರವಸೆಯಂತೆ ಯಾವುದೇ ರೀತಿಯ ಉದ್ಯೋಗ ಸೃಷ್ಟಿಸಲು ಇಲ್ಲಿಯವರೆಗೂ ಸಾಧ್ಯವಾಗಿಲ್ಲ.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು:

ಪ್ರಸ್ತುತ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿ ಪೂರ್ಣಗೊಂಡ ಬಳಿಕ ಉದ್ಯೋಗ ಕೇಳಿದರೆ ಈ ಸರ್ಕಾರದ ಬಳಿ ಉತ್ತರವಿಲ್ಲ ಆದ್ದರಿಂದ ಯುವಕರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಕೋಮು ವಿವಾದಗಳು ಸೃಷ್ಟಿ ಮಾಡುತ್ತಿದ್ದಾರೆ.

ಶಾಲೆ ಒಂದು ವಿದ್ಯಾಮಂದಿರ:

ಶಾಲೆಯ ಒಂದು ವಿದ್ಯಾಮಂದಿರ ವಾಗಿದ್ದು ಇಲ್ಲಿ ಕೇವಲ ಶೈಕ್ಷಣಿಕ ಪ್ರಗತಿಗೆ ಅಷ್ಟೇ ಅವಕಾಶ ನೀಡಬೇಕು. ಹೆಣ್ಣುಮಕ್ಕಳ ಧಾರ್ಮಿಕ ಹಕ್ಕನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಬ್ಬ ಹಿಂದು ಮಹಿಳೆಗೆ ಹಣೆಗೆ ಕುಂಕುಮ ಇಡುವ, ಕೈಗೆ ಬಳೆ ಹಾಕುವ, ಧಾರ್ಮಿಕ ಸ್ವಾತಂತ್ರ್ಯ ಇದೆ. ಎಂದಾದಲ್ಲಿ ಬೇರೆ ಧರ್ಮದ ಮಹಿಳೆಯರಿಗೆ ಅವರು ಧಾರ್ಮಿಕ ಪದ್ಧತಿಗಳನ್ನು ಅನುಸರಿಸುವ ಸ್ವಾತಂತ್ರ್ಯ ಕೂಡ ಇರುತ್ತದೆ.

ಈ ನಿಟ್ಟಿನಲ್ಲಿ ಶಿಕ್ಷಣಸಸ್ಥೆಗಳು ಮತ್ತು ಪೋಷಕರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ವಿದ್ಯಾರ್ಥಿಗಳಿಗೆ ಧರ್ಮ ಸಹಿಷ್ಣತೆ ಭಾವ ಬೆಳೆಸ ಬೇಕಾಗಿದ್ದು. ಶೈಕ್ಷಣಿಕ ಅವಧಿಯಲ್ಲಿ ಕೋಮು ವಿವಾದಗಳಲ್ಲಿ ಪಾಲ್ಗೊಳ್ಳುವ ಬದಲು ಶೈಕ್ಷಣಿಕ ಅಭಿವೃದ್ಧಿಗೆ ಗಮನಹರಿಸಬೇಕಿದೆ.

ಈ ನಿಟ್ಟಿನಲ್ಲಿ ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು ಅವರು ಜವಾಬ್ದಾರಿಯಾಗಿರುತ್ತದೆ. ರಾಜಕೀಯ ಪಿತೂರಿಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಪ್ರಸ್ತುತ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ.

ಯಮುನಾ ರಂಗೇಗೌಡ ಮಹಾನಗರಪಲಿಕೆ ವಿರೋಧಪಕ್ಷದ ನಾಯಕಿ…

______________________________________________________________________________________________________

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...