Thursday, May 1, 2025
Google search engine
Homeಶಿವಮೊಗ್ಗಹಿಜಾಬ್ -ಕೇಸರಿ ಶಾಲು ವಿವಾದ ಬಿಜೆಪಿಯ ಮುಂದಿನ ಚುನಾವಣೆಯ ಹಿಡನ್ ಅಜೆಂಡಾ ವಿದ್ಯಾರ್ಥಿಗಳೇ ಜಾಗೃತರಾಗಿ ...

ಹಿಜಾಬ್ -ಕೇಸರಿ ಶಾಲು ವಿವಾದ ಬಿಜೆಪಿಯ ಮುಂದಿನ ಚುನಾವಣೆಯ ಹಿಡನ್ ಅಜೆಂಡಾ ವಿದ್ಯಾರ್ಥಿಗಳೇ ಜಾಗೃತರಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧಪಕ್ಷದ ನಾಯಕಿ ಯಮುನಾ ರಂಗೇಗೌಡ ಹೇಳಿಕೆ..!

ಶಿವಮೊಗ್ಗ: ಭಾರತ ವಿವಿಧ ಧರ್ಮಗಳ ಸಮಾನತೆಯ ಐಕ್ಯತೆಯ ದೇಶ ಇಲ್ಲಿಯವರೆಗೂ ನಾವೆಂದೂ ಕಂಡಿರದ, ಕೇಳಿರದ, ಹಿಜಾಬ್ ವಿವಾದ ಇದ್ದಕ್ಕಿದ್ದಂತೆ ಮುಂಚೂಣಿಗೆ ಬಂದಿದೆ.

ಇದು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರ್ಕಾರದ ಮುಂದಿನ ಚುನಾವಣೆಗೆ ನಡೆಸಿರುವ ಅಜೆಂಡಾ , ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಯುವಕರಿಗೆ ಕೊಟ್ಟ ಭರವಸೆಯಂತೆ ಯಾವುದೇ ರೀತಿಯ ಉದ್ಯೋಗ ಸೃಷ್ಟಿಸಲು ಇಲ್ಲಿಯವರೆಗೂ ಸಾಧ್ಯವಾಗಿಲ್ಲ.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು:

ಪ್ರಸ್ತುತ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿ ಪೂರ್ಣಗೊಂಡ ಬಳಿಕ ಉದ್ಯೋಗ ಕೇಳಿದರೆ ಈ ಸರ್ಕಾರದ ಬಳಿ ಉತ್ತರವಿಲ್ಲ ಆದ್ದರಿಂದ ಯುವಕರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಕೋಮು ವಿವಾದಗಳು ಸೃಷ್ಟಿ ಮಾಡುತ್ತಿದ್ದಾರೆ.

ಶಾಲೆ ಒಂದು ವಿದ್ಯಾಮಂದಿರ:

ಶಾಲೆಯ ಒಂದು ವಿದ್ಯಾಮಂದಿರ ವಾಗಿದ್ದು ಇಲ್ಲಿ ಕೇವಲ ಶೈಕ್ಷಣಿಕ ಪ್ರಗತಿಗೆ ಅಷ್ಟೇ ಅವಕಾಶ ನೀಡಬೇಕು. ಹೆಣ್ಣುಮಕ್ಕಳ ಧಾರ್ಮಿಕ ಹಕ್ಕನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಬ್ಬ ಹಿಂದು ಮಹಿಳೆಗೆ ಹಣೆಗೆ ಕುಂಕುಮ ಇಡುವ, ಕೈಗೆ ಬಳೆ ಹಾಕುವ, ಧಾರ್ಮಿಕ ಸ್ವಾತಂತ್ರ್ಯ ಇದೆ. ಎಂದಾದಲ್ಲಿ ಬೇರೆ ಧರ್ಮದ ಮಹಿಳೆಯರಿಗೆ ಅವರು ಧಾರ್ಮಿಕ ಪದ್ಧತಿಗಳನ್ನು ಅನುಸರಿಸುವ ಸ್ವಾತಂತ್ರ್ಯ ಕೂಡ ಇರುತ್ತದೆ.

ಈ ನಿಟ್ಟಿನಲ್ಲಿ ಶಿಕ್ಷಣಸಸ್ಥೆಗಳು ಮತ್ತು ಪೋಷಕರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ವಿದ್ಯಾರ್ಥಿಗಳಿಗೆ ಧರ್ಮ ಸಹಿಷ್ಣತೆ ಭಾವ ಬೆಳೆಸ ಬೇಕಾಗಿದ್ದು. ಶೈಕ್ಷಣಿಕ ಅವಧಿಯಲ್ಲಿ ಕೋಮು ವಿವಾದಗಳಲ್ಲಿ ಪಾಲ್ಗೊಳ್ಳುವ ಬದಲು ಶೈಕ್ಷಣಿಕ ಅಭಿವೃದ್ಧಿಗೆ ಗಮನಹರಿಸಬೇಕಿದೆ.

ಈ ನಿಟ್ಟಿನಲ್ಲಿ ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು ಅವರು ಜವಾಬ್ದಾರಿಯಾಗಿರುತ್ತದೆ. ರಾಜಕೀಯ ಪಿತೂರಿಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಪ್ರಸ್ತುತ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ.

ಯಮುನಾ ರಂಗೇಗೌಡ ಮಹಾನಗರಪಲಿಕೆ ವಿರೋಧಪಕ್ಷದ ನಾಯಕಿ…

______________________________________________________________________________________________________

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...