Tuesday, June 17, 2025
Google search engine
Homeಶಿವಮೊಗ್ಗಹಿಜಾಬ್ -ಕೇಸರಿ ಶಾಲು ವಿವಾದ ಬಿಜೆಪಿಯ ಮುಂದಿನ ಚುನಾವಣೆಯ ಹಿಡನ್ ಅಜೆಂಡಾ ವಿದ್ಯಾರ್ಥಿಗಳೇ ಜಾಗೃತರಾಗಿ ...

ಹಿಜಾಬ್ -ಕೇಸರಿ ಶಾಲು ವಿವಾದ ಬಿಜೆಪಿಯ ಮುಂದಿನ ಚುನಾವಣೆಯ ಹಿಡನ್ ಅಜೆಂಡಾ ವಿದ್ಯಾರ್ಥಿಗಳೇ ಜಾಗೃತರಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧಪಕ್ಷದ ನಾಯಕಿ ಯಮುನಾ ರಂಗೇಗೌಡ ಹೇಳಿಕೆ..!

ಶಿವಮೊಗ್ಗ: ಭಾರತ ವಿವಿಧ ಧರ್ಮಗಳ ಸಮಾನತೆಯ ಐಕ್ಯತೆಯ ದೇಶ ಇಲ್ಲಿಯವರೆಗೂ ನಾವೆಂದೂ ಕಂಡಿರದ, ಕೇಳಿರದ, ಹಿಜಾಬ್ ವಿವಾದ ಇದ್ದಕ್ಕಿದ್ದಂತೆ ಮುಂಚೂಣಿಗೆ ಬಂದಿದೆ.

ಇದು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರ್ಕಾರದ ಮುಂದಿನ ಚುನಾವಣೆಗೆ ನಡೆಸಿರುವ ಅಜೆಂಡಾ , ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಯುವಕರಿಗೆ ಕೊಟ್ಟ ಭರವಸೆಯಂತೆ ಯಾವುದೇ ರೀತಿಯ ಉದ್ಯೋಗ ಸೃಷ್ಟಿಸಲು ಇಲ್ಲಿಯವರೆಗೂ ಸಾಧ್ಯವಾಗಿಲ್ಲ.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು:

ಪ್ರಸ್ತುತ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿ ಪೂರ್ಣಗೊಂಡ ಬಳಿಕ ಉದ್ಯೋಗ ಕೇಳಿದರೆ ಈ ಸರ್ಕಾರದ ಬಳಿ ಉತ್ತರವಿಲ್ಲ ಆದ್ದರಿಂದ ಯುವಕರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಕೋಮು ವಿವಾದಗಳು ಸೃಷ್ಟಿ ಮಾಡುತ್ತಿದ್ದಾರೆ.

ಶಾಲೆ ಒಂದು ವಿದ್ಯಾಮಂದಿರ:

ಶಾಲೆಯ ಒಂದು ವಿದ್ಯಾಮಂದಿರ ವಾಗಿದ್ದು ಇಲ್ಲಿ ಕೇವಲ ಶೈಕ್ಷಣಿಕ ಪ್ರಗತಿಗೆ ಅಷ್ಟೇ ಅವಕಾಶ ನೀಡಬೇಕು. ಹೆಣ್ಣುಮಕ್ಕಳ ಧಾರ್ಮಿಕ ಹಕ್ಕನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಬ್ಬ ಹಿಂದು ಮಹಿಳೆಗೆ ಹಣೆಗೆ ಕುಂಕುಮ ಇಡುವ, ಕೈಗೆ ಬಳೆ ಹಾಕುವ, ಧಾರ್ಮಿಕ ಸ್ವಾತಂತ್ರ್ಯ ಇದೆ. ಎಂದಾದಲ್ಲಿ ಬೇರೆ ಧರ್ಮದ ಮಹಿಳೆಯರಿಗೆ ಅವರು ಧಾರ್ಮಿಕ ಪದ್ಧತಿಗಳನ್ನು ಅನುಸರಿಸುವ ಸ್ವಾತಂತ್ರ್ಯ ಕೂಡ ಇರುತ್ತದೆ.

ಈ ನಿಟ್ಟಿನಲ್ಲಿ ಶಿಕ್ಷಣಸಸ್ಥೆಗಳು ಮತ್ತು ಪೋಷಕರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ವಿದ್ಯಾರ್ಥಿಗಳಿಗೆ ಧರ್ಮ ಸಹಿಷ್ಣತೆ ಭಾವ ಬೆಳೆಸ ಬೇಕಾಗಿದ್ದು. ಶೈಕ್ಷಣಿಕ ಅವಧಿಯಲ್ಲಿ ಕೋಮು ವಿವಾದಗಳಲ್ಲಿ ಪಾಲ್ಗೊಳ್ಳುವ ಬದಲು ಶೈಕ್ಷಣಿಕ ಅಭಿವೃದ್ಧಿಗೆ ಗಮನಹರಿಸಬೇಕಿದೆ.

ಈ ನಿಟ್ಟಿನಲ್ಲಿ ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು ಅವರು ಜವಾಬ್ದಾರಿಯಾಗಿರುತ್ತದೆ. ರಾಜಕೀಯ ಪಿತೂರಿಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಪ್ರಸ್ತುತ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ.

ಯಮುನಾ ರಂಗೇಗೌಡ ಮಹಾನಗರಪಲಿಕೆ ವಿರೋಧಪಕ್ಷದ ನಾಯಕಿ…

______________________________________________________________________________________________________

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!