Tuesday, April 29, 2025
Google search engine
Homeಅಂತಾರಾಷ್ಟ್ರೀಯತೀರ್ಥಹಳ್ಳಿ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು..!!

ತೀರ್ಥಹಳ್ಳಿ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು..!!

ತೀರ್ಥಹಳ್ಳಿ: ಇಂದು ಅಂತರಾಷ್ಟ್ರೀಯ ಮಹಿಳೆಯರ ದಿನಾಚರಣೆ ಇದರ ಪ್ರಯುಕ್ತ ತೀರ್ಥಹಳ್ಳಿಯಲ್ಲಿ ತಾಲೂಕು ಆರೋಗ್ಯ ಇಲಾಖೆ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು.

ಸಂದರ್ಭದಲ್ಲಿ ಪ್ರಾಸ್ತಾವಿಕ ಮಹಿಳೆಯರ ದಿನಾಚರಣೆ ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹಾಗೂ ಆರೋಗ್ಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಮಹಿಳೆಯ ಹಕ್ಕು ಮತ್ತು ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ1911 ರ ಮಾರ್ಚ್ 8 ರಂದು ಕ್ಲಾರಾ ಜೆಟ್ ಕಿನ್ ಎಂಬ ದಿಟ್ಟ ಮಹಿಳೆಯಿಂದಾಗಿ ಆರಂಭಗೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಇಂದು ವಿಶ್ವದಾದ್ಯಂತ ಆಚರಿಸಲ್ಪಡುತ್ತಿದೆ. ವಿವಿಧ ಒತ್ತಡಗಳ ನಡುವೆಯೂ ಕುಟುಂಬ ಮಾತ್ರವಲ್ಲ ವಿವಿಧ ಕ್ಷೇತ್ರಗಳಲ್ಲಿನ ಜವಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಕುಟುಂಬ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಲು ಶ್ರಮಿಸುತ್ತಿರುವ ಸಹೃದಯಿ ಮಹಿಳೆಯರಿಗೆ ಒಂದು ಪುಟ್ಟ ಧನ್ಯವಾದಗಳನ್ನು ಹೇಳುವುದು ನಮ್ಮ ಕರ್ತವ್ಯ ಆ ದಿಸೆಯಲ್ಲಿ ಈ ಪುಟ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

‌ ಈ ಸಂದರ್ಭದಲ್ಲಿ ಎಲ್ಲಾ ಸಹೃದಯಿ ಮಹಿಳೆಯರ ಪರವಾಗಿ ಸಾಂಕೇತಿಕವಾಗಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆಶಾಲತಾ, ಪ್ರಾ.ಆ.ಕೇಂದ್ರ ಹುಂಚದಕಟ್ಟೆಯ ವೈದ್ಯಾಧಿಕಾರಿ ಡಾ.ಶೋಭಾದೇವಿ, ಪ್ರಾ.ಆ.ಕೇಂದ್ರ ಮಾಳೂರಿನ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಶೋಧ,ಪ್ರಾ.ಆ.ಕೇಂದ್ರ ಅರಳಸುರಳಿಯ ಆಶಾ ಕಾರ್ಯಕರ್ತೆ ಪ್ರೇಮರವರನ್ನು ಗೌರವಿಸಲಾಯಿತು ಮತ್ತು ಸಭೆಯಲ್ಲಿದ್ದ ಎಲ್ಲಾ ಮಹಿಳೆಯರಿಗೂ ಹೂಗುಚ್ಚ ನೀಡಿ ಅಭಿನಂದಿಸಲಾಯಿತು.

ವಿಡಿಎಲ್ ಉಪನಿರ್ದೇಶಕ ಡಾ.ಗುಡದಪ್ಪ ಕಸಬಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಟರಾಜ್,ಜಿಲ್ಲಾ ಮೇಲ್ವಿಚಾರಕ ವೆಂಕಟಕೃಷ್ಣ, ವೈದ್ಯಾಧಿಕಾರಿಗಳಾದ ಡಾ.ಅನಿಕೇತನ್, ಡಾ.ಸುರೇಶ್, ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ಖಜಾಂಚಿ ಎ ಎಂ ಜಗದೀಶ್, ಜಂಟಿ ಕಾರ್ಯದರ್ಶಿ ಈಶ್ವರ್, ತಾಲ್ಲೂಕು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಅತಿಥಿಗಳಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು,ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...