Home ರಾಷ್ಟ್ರೀಯಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಶಿವಮೊಗ್ಗದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಹೇಳಿಕೆ…!!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಶಿವಮೊಗ್ಗದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಹೇಳಿಕೆ…!!

by EDITOR NEWS WARRIORS
0 comments

ಬಹು ನಿರೀಕ್ಷಿತ ಪಂಚರಾಜ್ಯಗಳ ಚುನಾವಣೆಯ ತಿರ್ಪು ಇಂದು ಹೊರಬಿದ್ದಿದೆ. 4 ರಾಜ್ಯಗಳಲ್ಲಿ ಬಹುತೇಕ ಬಿಜೆಪಿ ಅಧಿಕಾರದ ಗದಗಿಗೆ ಏರುವ ಸಾಧ್ಯತೆ ಇದೆ.

ಇದರ ಸಂಬಂಧವಾಗಿ ಶಿವಮೊಗ್ಗದ ಸಂಸದರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಪುತ್ರರಾದ ಬಿವೈ ರಾಘವೇಂದ್ರ ರವರು ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದು ಪ್ರಧಾನಿ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರದಲ್ಲಿದ್ದ 4 ರಾಜ್ಯಗಳಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ. ಚುನಾವಣಾ ಫಲಿತಾಂಶಗಳನ್ನು ಗಮನಿಸಿದಾಗ ದೇಶದ ಜನರು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.


ಕಾಂಗ್ರೆಸ್ ಪಕ್ಷವು ದಿನೇ ದಿನೇ ತನ್ನ ಅಸ್ಥಿತ್ವವನ್ನು ಕಳೆದುಕೊಂಡು ಸದ್ಯದಲ್ಲಿಯೇ ದೇಶದಲ್ಲಿ ಸಂಪೂರ್ಣವಾಗಿ ಅವನತಿಯಾಗಲಿದೆ ಎಂಬುದನ್ನು ಈ ಚುನಾವಣೆಯ ಫಲಿತಾಂಶವು ಮತ್ತೊಮ್ಮೆ ಸಾಬೀತುಪಡಿಸಿದೆ. ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಖಂಡ ರಾಜ್ಯಗಳ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಆ ರಾಜ್ಯಗಳ ಮತದಾರರಿಗೆ ಸಂಸದರು ಧನ್ಯವಾದಗಳನ್ನು ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಜೀ ಹಾಗೂ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಜೀ ಹಾಗೂ ಪಕ್ಷದ ಎಲ್ಲಾ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...