Thursday, May 1, 2025
Google search engine
Homeಶಿವಮೊಗ್ಗಕೋಮು ಸಂಘರ್ಷಕ್ಕೆ ಬಲಿಯಾದ ವಿಶ್ವನಾಥ್ ಕುಟುಂಬಕ್ಕೆ ಶಿವಮೊಗ್ಗ ಬಂಟ ಸಮಾಜದಿಂದ ಆರ್ಥಿಕ ನೆರವು..!!

ಕೋಮು ಸಂಘರ್ಷಕ್ಕೆ ಬಲಿಯಾದ ವಿಶ್ವನಾಥ್ ಕುಟುಂಬಕ್ಕೆ ಶಿವಮೊಗ್ಗ ಬಂಟ ಸಮಾಜದಿಂದ ಆರ್ಥಿಕ ನೆರವು..!!

ಶಿವಮೊಗ್ಗದಲ್ಲಿ 2015ರಲ್ಲಿ ನಡೆದ ಕೋಮು ಗಲಭೆಯಲ್ಲಿ ಹತನಾದ ವಿಶ್ವನಾಥ ಶೆಟ್ಟಿ ಇವರ ಮಗನಾದ ಚಿರಂಜೀವಿ ಯಶಸ್ ವಿ. ಶೆಟ್ಟಿ ಇವನ ಮುಂದಿನ ಶಿಕ್ಷಣಕ್ಕೆ ಸಹಾಯವಾಗುವಂತೆ ರೂ. ಒಂದು ಲಕ್ಷಗಳನ್ನು ಮತ್ತು ಅವರ ತಾಯಿ ಶ್ರೀಮತಿ ಮೀನಾಕ್ಷಮ್ಮ ಇವರ ಜೀವನಕ್ಕೆ ನೆರವಾಗಲು 25,000 ಗಳನ್ನು ದೇಣಿಗೆಯಾಗಿ ನೀಡಲಾಯಿತು.


ಇಂದು ಶಿವಮೊಗ್ಗ ಬಂಟರ ಭವನ ಸಭಾಂಗಣದಲ್ಲಿ ನಡೆದ ಹೃದಯಸ್ಪರ್ಶಿ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಇವರು ಚೆಕ್ಕನ್ನು ಹಸ್ತಾಂತರಿಸಿದರು.

ಈ ಕಾರ್ಯಕ್ರಮದಲ್ಲಿ ಕೊಪ್ಪ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಶಿವಮೊಗ್ಗ ಬಂಟರ ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಹಾಗೂ ಸಮಾಜದ ಪ್ರಮುಖರಾದ ಕೃಷ್ಣಪ್ಪ ಶೆಟ್ಟಿ, ಎಸ್. ಕೃಷ್ಣಶೆಟ್ಟಿ, ಸುರೇಶ್ ಕುಮಾರ್ ಶೆಟ್ಟಿ, ದಿವಾಕರ ಶೆಟ್ಟಿ, ರಾಜೀವ ಶೆಟ್ಟಿ, ಅರುಣ್ ಶೆಟ್ಟಿ, ಮಂಜುನಾಥ ಶೆಟ್ಟಿ, ಸಾಯಿ ಪ್ರಸಾದ್ ಶೆಟ್ಟಿ, ಸುಧಾಕರ್ ಶೆಟ್ಟಿ, ಉದಯ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಆನಂದ ಶೆಟ್ಟಿ ಹಾಗೂ ಇತರರು ಹಾಜರಿದ್ದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305...

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!