
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಮೊದಲೇ ಸೂಕ್ಷ್ಮ ಪ್ರದೇಶವಾಗಿರುವ ಶಿವಮೊಗ್ಗ ನಗರದಲ್ಲಿ ಕೋಮುಗಲಭೆ ಪ್ರಕರಣಗಳು ಹೆಚ್ಚಾಗುತ್ತಿದೆ .
ಹಿಂದೂ ಯುವಕ ಬಜರಂಗದಳದ ಹರ್ಷನ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಯುವಕ ಮಧು ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಈ ಹಲ್ಲೆಗೆ ಸಂಬಂಧಪಟ್ಟಂತೆ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಜೊತೆಗೆ ಅಕ್ರಮ ಮದ್ಯ, ಮರಳು, ಓಸಿ ,ಅಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು. ಇದನ್ನು ಕಡಿವಾಣ ಹಾಕುವಲ್ಲಿ ಪೊಲೀಸ್ ವೈಫಲ್ಯತೆ ಎದ್ದು ಕಾಣುತ್ತಿದೆ. ಎಂದು ಆಡಳಿತರೂಢ ಬಿಜೆಪಿ ಪಕ್ಷದ ನಾಯಕರುಗಳು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಮುಸ್ಲಿಂ ಗೂಂಡಾಗಳನ್ನು ರಕ್ಷಿಸುತ್ತಿದ್ದಾರೆ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಸಚಿವ ಈಶ್ವರಪ್ಪ ಕೂಡ ಗುಡುಗಿದ್ದರು.
ಹಿಂದೂಪರ ಸಂಘಟನೆಗಳ ಮುಖಂಡರು ಕೂಡ ಸಚಿವ ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬಳಿ ಹಿಂದೂಗಳಿಗೆ ರಕ್ಷಣೆ ಇಲ್ಲವಾಗಿದೆ ನಿರಂತರ ಹಲ್ಲೆಗಳು ನಡೆಯುತ್ತಿವೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.
ಪತ್ರಿಕೆ ಕೂಡ ಶಿವಮೊಗ್ಗ “ಪೊಲೀಸ್ ಇಲಾಖೆಯಲ್ಲಿ ಬಿಗ್ ಬ್ಲಾಸ್ಟ್ “ಎನ್ನುವ ಹೆಸರಿನಲ್ಲಿ ವರದಿಯನ್ನು ಕೂಡ ಪ್ರಕಟಿಸಿತ್ತು ಅದರಲ್ಲಿ ವಿಸ್ತಾರವಾಗಿ ಪೊಲೀಸ್ ಇಲಾಖೆಗೆ ಸರ್ಜರಿ ನಡೆಯುವ ಅವಶ್ಯಕತೆ ಇದೆ ಎನ್ನುವ ಅಂಶವನ್ನು ಪ್ರಬಲವಾಗಿ ಪ್ರಕಟಿಸಿತ್ತು.
ಮುಖ್ಯವಾಗಿ ಶಿವಮೊಗ್ಗದ ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ ಅವರ ಕಾರ್ಯವೈಖರಿ ಬಗ್ಗೆ ಹಿಂದೂಪರ ಸಂಘಟನೆಗಳು, ಆಡಳಿತ ಬಿಜೆಪಿ ಪಕ್ಷದ ನಾಯಕರುಗಳು ಅಸಮಾಧಾನವನ್ನು ಹೊರಹಾಕಿದರು. ಖುದ್ದು ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ ಅವರಿಗೆ ಇಲಾಖೆಯಲ್ಲಿ ನಿಯಂತ್ರಣ ತರಲು ಸಾಧ್ಯವಾಗಲಿಲ್ಲ. ಅಪರಾಧ ಪ್ರಕರಣಗಳನ್ನು ಅಕ್ರಮ ದಂಧೆಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು.
ಇವರ ಜಾಗಕ್ಕೆ ದಕ್ಷ, ಪ್ರಾಮಾಣಿಕ ,ಖಡಕ್ ಡಿವೈಎಸ್ಪಿ ಅಗತ್ಯತೆ ಇತ್ತು ಇದನ್ನು ಮನಗಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದಕ್ಷ ಪ್ರಾಮಾಣಿಕ ಅಧಿಕಾರಿಯಾದ ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿದ್ದ ಹಿಂದೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕಾರ್ಯನಿರ್ವಹಿಸಿದ್ದ ಬಿ ಬಾಲರಾಜು ಅವರನ್ನು ಶಿವಮೊಗ್ಗ ಜಿಲ್ಲೆಗೆ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕಾಣದ ಕೈಗಳ ಕುತಂತ್ರ:
ಶಿವಮೊಗ್ಗ ಜಿಲ್ಲೆಗೆ ದಕ್ಷ ಪ್ರಾಮಾಣಿಕ ಅಧಿಕಾರಿ ಬಾಲರಾಜ್ ಬರುತ್ತಿದ್ದಾರೆ ಎನ್ನುವ ಆದೇಶ ಹೊರಬೀಳುತ್ತಿದ್ದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳ ಮನಸ್ಸಿನಲ್ಲಿ ಶಿವಮೊಗ್ಗ ಜಿಲ್ಲೆಯ ನಗರದ ಜನರ ಮನಸ್ಸಿನಲ್ಲಿ ಒಂದಷ್ಟು ಆಶಾಭಾವನೆ ಮೂಡಿತ್ತು. ಇನ್ನಾದರೂ ಶಿವಮೊಗ್ಗ ನಗರದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತೆ. ಹಾಗೂ ಅಕ್ರಮ ದಂಧೆಗಳು ನಿಯಂತ್ರಣಕ್ಕೆ ಬರುತ್ತವೆ ಎನ್ನುವ ನಿರೀಕ್ಷೆಯನ್ನು ಹುಟ್ಟುಹಾಕಿತ್ತು.
ಆದರೆ ಆದೇಶ ಹೊರಬೀಳುತ್ತಿದ್ದಂತೆ ಕೆಲವು ಕಾಣದ ಕೈಗಳು ಇಂಥ ದಕ್ಷ ಪ್ರಾಮಾಣಿಕ ಅಧಿಕಾರಿ ಬಂದರೆ ತಮ್ಮ ಅಕ್ರಮಗಳಿಗೆ ಎಲ್ಲಿ ಬ್ರೇಕ್ ಬೀಳುವುದು ಎನ್ನುವ ಭಯದಿಂದ ಇವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಹಾಗೆ ಖುದ್ದು ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ ಕೂಡ ವೈಯಕ್ತಿಕ ಕಾರಣಗಳಿಗೋಸ್ಕರ ಇಲ್ಲೇ ಉಳಿದುಕೊಳ್ಳಬೇಕು ಎನ್ನುವ ಆಶಯ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದು ಒಳ್ಳೆಯ ಬೆಳವಣಿಗೆ ಅಲ್ಲ ಬಿ ಬಾಲರಾಜ್ ಅವರಂತಹ ದಕ್ಷ ಪ್ರಾಮಾಣಿಕ ಅಧಿಕಾರಿ ಅವಶ್ಯಕತೆ ಶಿವಮೊಗ್ಗ ನಗರಕ್ಕೆ ಈಗಿನ ಪರಿಸ್ಥಿತಿಯಲ್ಲಿ ಇದೆ ಇದನ್ನು ಮನಗಂಡು ಗೃಹ ಸಚಿವರು ಹಾಗೂ ಹಿರಿಯ ಸಚಿವರಾದ ಸಚಿವ ಈಶ್ವರಪ್ಪನವರು ಬಿ ಬಾಲರಾಜ್ ಅವರನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು.
ಯಾವ ಕುತಂತ್ರಗಳಿಗೆ, ಒತ್ತಡಗಳಿಗೂ, ಮಣಿಯಬಾರದು .

ವರದಿ: ರಘುರಾಜ್ ಹೆಚ್.ಕೆ…9449553305…
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305…