Thursday, May 1, 2025
Google search engine
Homeಶಿವಮೊಗ್ಗಸಾಗರ ನಗರಸಭೆಗೆ ಧನ್ಯವಾದಗಳು, ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ ನಾಗರಿಕರು ‌‌..!!

ಸಾಗರ ನಗರಸಭೆಗೆ ಧನ್ಯವಾದಗಳು, ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ ನಾಗರಿಕರು ‌‌..!!

ಸಾಗರ : ಸಾಗರದ ನಗರಸಭೆಯ ಅಧಿಕಾರಿಗಳು ಈ ವರ್ಷ ಒಂದು ಜನಸ್ನೇಹಿ ಕೆಲಸ ಮಾಡಿದ್ದಾರೆ. ಆದ್ದರಿಂದ ನಗರದ ನಾಗರಿಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹೋದವರ್ಷ ಸಾಗರ ನಗರಸಭಾ ವ್ಯಾಪ್ತಿಯ ಮನೆಕಂದಾಯ ಮತ್ತು ನೀರಿನಕಂದಾಯಗಳನ್ನು ದೂರದ ಬ್ಯಾಂಕ್ ಗಳಲ್ಲಿಯೇ ಸರದಿಸಾಲಿನಲ್ಲಿ ನಿಂತು ತುಂಬಬೇಕಿತ್ತು. ಇದು ಹಿರಿಯ‌ ನಾಗರಿಕರಿಗೆ, ಗರ್ಭಿಣಿಯರು ಮತ್ತು ಅನಾರೋಗ್ಯಪೀಡಿತರಿಗೆ ತುಂಬಾ ತೊಂದರೆ ಆಗುತ್ತಿತ್ತು. ಈ ಬಗ್ಗೆ ಸ್ಥಳೀಯರಾದ ಶ್ರೀಧರ್ ಶರ್ಮ ಮತ್ತು ಕೆಲವು ಸಮಾನ ಮನಸ್ಕ ನಾಗರಿಕರು ನಮಗೆ ನಗರಸಭೆಯ ಆವರಣದಲ್ಲಿಯೇ ವಿವಿಧ ಕಂದಾಯ ತುಂಬಲು ಅನುಕೂಲ ಮಾಡಿಕೊಡಿ ಎಂದು ನಿರಂತರವಾಗಿ ಒತ್ತಾಯ ಮಾಡುತ್ತಿದ್ದರು.ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ನಗರಸಭೆ ಈಗ ನಗರಸಭೆಯ ಕಚೇರಿಯ ಒಂದು ಮುಂಗಟ್ಟೆಯಲ್ಲಿಯೇ ಹಣ ತುಂಬುವ ಅನುಕೂಲ ಮಾಡಿಕೊಟ್ಟಿದೆ. ಇದನ್ನು ಎಲ್ಲರೂ ಬಳಸಿಕೊಳ್ಳುತ್ತಿದ್ದಾರೆ. ಹೀಗೆ ಹಿರಿಯ ನಾಗರಿಕರಾದ ಶ್ರೀಧರ್ ಶರ್ಮ ಮತ್ತು ಅವರ ಸಮಾನಮನಸ್ಕ ವ್ಯಕ್ತಿಗಳು ನ್ಯಾಯಯುತವಾದ ಬೇಡಿಕೆಗೆ ಸ್ಪಂದಿಸಿದ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು , ಸ್ಥಾಯಿಸಮಸ್ಯೆ ಅಧ್ಯಕ್ಷರು ಹಾಗೂ ನಗರಸಭೆಯ ಆಯುಕ್ತರು ಮತ್ತು ಎಲ್ಲಾ ಸಿಬ್ಬಂದಿವರ್ಗದವರಿಗೆ ತೆರಿಗೆದಾರರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಪತ್ರಿಕೆ ಮೂಲಕ ಅರ್ಪಿಸಿದ್ದಾರೆ. ಅಂತೆಯೇ ಬ್ಯಾಂಕ್ ನ ಸುಸಜ್ಜಿತ ಕಟ್ಟಡದಿಂದ ನಗರಸಭೆಯ ಕಚೇರಿಯೊಳಗೇ ಸಾಗಿಬಂದ ಇಂಡಿಯನ್ ಬ್ಯಾಂಕ್ ಸಿಬ್ಬಂದಿ ವರ್ಗದವರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಹಾಗೆ ಇದು ಇಲ್ಲಿಗೆ ನಿಲ್ಲದೆ ಹೀಗೆ ನಿರಂತರವಾಗಿ ಮುಂದುವರಿದುಕೊಂಡು ಹೋಗಲಿ ಎನ್ನುವುದು ಶ್ರೀಧರ್ ಶರ್ಮ ಅವರ ತಂಡದ ಕೋರಿಕೆ…

#################################₹₹₹₹

ಸುದ್ದಿ ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...