Saturday, June 14, 2025
Google search engine
Homeರಾಜ್ಯಪಿ,ಎಸ್ಐ ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ಸಿನ ಮಹಾನ್ ನಾಯಕನ ಪುತ್ರನ ಪಾತ್ರ ಅನುಮಾನ ವ್ಯಕ್ತಪಡಿಸಿದ ಗೃಹಸಚಿವರು..!! ...

ಪಿ,ಎಸ್ಐ ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ಸಿನ ಮಹಾನ್ ನಾಯಕನ ಪುತ್ರನ ಪಾತ್ರ ಅನುಮಾನ ವ್ಯಕ್ತಪಡಿಸಿದ ಗೃಹಸಚಿವರು..!! ಗೃಹ ಖಾತೆಗೆ ಚಾಪೆ ಹಾಸಿ ಕುಳಿತ ಬಿಸಿ ಪಾಟೀಲ್ ಬಗ್ಗೆ ಏನಂದ್ರು ಗೃಹ ಸಚಿವರು ? ಬುಲ್ಡೋಜರ್ ಮಾದರಿ ಕರ್ನಾಟಕಕ್ಕೆ ಬರುತ್ತಾ ?

ಕುಂದಾಪುರ : ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಪಿಎಸ್‌ಐ ನೇಮಕಾತಿ ಅಕ್ರಮ ಅರೋಪದ ಬಗ್ಗೆ ನಮಗೆ ಸಾಕ್ಷ್ಯಾಧಾರಗಳು ದೊರೆತ ಕೂಡಲೇ ಸಿಒಡಿ ತನಿಖೆಗೆ ಆದೇಶ ಮಾಡಿದ್ದೇವೆ. ಆದರೆ ಶಾಸಕ ಪ್ರಿಯಾಂಕ್‌ ಖರ್ಗೆ ಬಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಹಾಗೂ ಇತರ ಸಾಕ್ಷ್ಯಗಳು ಇವೆ ಎಂದು ಹೇಳುತ್ತಾರೆ ಹಾಗಾದರೆ ಇಲ್ಲಿವರೆಗೂ ಏಕೆ ಅದನ್ನು ಅದನ್ನು ತನಿಖಾ ತಂಡಕ್ಕೆ ಹಸ್ತಾಂತರಿಸಿ ಇಲ್ಲ. ಇದನ್ನು ನೋಡಿದರೆ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಶಾಸಕ ಪ್ರಿಯಾಂಕ ಖರ್ಗೆ ಅವರ ಮೇಲೆ ಅನುಮಾನ ಮೂಡುತ್ತಿದೆ ಎಂದಿದ್ದಾರೆ.

ಪ್ರಕರಣ ಸಂಬಂಧವಾಗಿ ಶಾಸಕರ ಆಪ್ತರನ್ನು ಈಗಾಗಲೇ ಬಂಧಿಸಲಾಗಿದೆ:
ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಶಾಸಕರ ಆಪ್ತರಿಬ್ಬರನ್ನು ಬಂಧಿಸಿದ ನಂತರ ಶಾಸಕರ ಈ ಹೇಳಿಕೆಗಳು ಅವಮಾನ ಮೂಡಿಸುತ್ತಿವೆ ಎಂದು ನೇರವಾಗಿ ಆರೋಪ ಮಾಡಿದ್ದಾರೆ.

ಪ್ರಕರಣದಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಇಲ್ಲ ನಿಜವಾದ ಆರೋಪಗಳಿಗೆ ಖಂಡಿತ ಶಿಕ್ಷೆಯಾಗುತ್ತದೆ:

ಸುಮ್ಮನೆ ಆರೋಪ ಮಾಡಿ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಆದರೆ ನಮ್ಮ ಸರ್ಕಾರ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎನ್ನುವ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಈ ವೇಳೆಯಲ್ಲಿ ಸರಕಾರದ ಬೇರೆ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಯಾವುದಾದರೂ ಅಕ್ರಮಗಳು ಬೆಳಕಿಗೆ ಬಂದರೂ ಅದರ ವಿರುದ್ಧವೂ ವಿಸ್ತೃತ ತನಿಖೆ ನಡೆಸಲಾಗುವುದು ಎಂದರು.

ಪರೀಕ್ಷೆ ಬರೆದು ಉತ್ತೀರ್ಣವಾಗಿರುವ 545 ಅಭ್ಯರ್ಥಿಗಳ ಒಎಂಆರ್‌ ಉತ್ತರ ಪತ್ರಿಕೆಗಳ ಪರಿಶೀಲನೆ ನಡೆಸಲಾಗುವುದು ಎಂದರು.ಹುಬ್ಬಳ್ಳಿ ಗಲಭೆಗೆ ಬಾಂಗ್ಲಾ ಸಂಪರ್ಕ ಇದೆ ಎನ್ನುವ ಮಾಹಿತಿ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ಗಲಭೆಯಲ್ಲಿ ಪೊಲೀಸ್‌ ಇಲಾಖೆ, ದೇವಸ್ಥಾನದ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳು ನಷ್ಟವಾಗಿದ್ದು, ಕಾರಣರಾಗಿರುವವರಿಂದಲೇ ವಸೂಲಿ ಮಾಡುವ ಕುರಿತು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ಮುತಾಲಿಕ್‌ ಕಾರ್ಯಕ್ರಮವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಸರಕಾರ ಉದ್ದೇಶ ಪೂರ್ವಕ ನಿರ್ಬಂಧಿಸಿಲ್ಲ. ಈ ಆರೋಪದಲ್ಲಿ ಹುರುಳಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿ ಬುಲ್ಡೋಜರ್‌ ಕ್ರಮ ಸದ್ಯ ಬೇಕಿಲ್ಲ:
ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅಧಿಕಾರಕ್ಕೆ ಬರುವ ಮುಂಚೆ ರೌಡಿ ಆಡಳಿತ ಜಾರಿಯಲ್ಲಿತ್ತು ಹಾಗೂ ಅದನ್ನು ಮಟ್ಟ ಹಾಕುವ ಸಲುವಾಗಿ ಬುಲ್ಡೋಜರ್‌ ಕ್ರಮ ಅನಿವಾರ್ಯವಾಗಿತ್ತು. ಆದರೆ ಕರ್ನಾಟಕದಲ್ಲಿ ಸದ್ಯ ಆ ರೀತಿಯ ಪರಿಸ್ಥಿತಿ ಇಲ್ಲ ಹಾಗಾಗಿ ಅದರ ಅನಿವಾರ್ಯತೆ ಬರುವುದಿಲ್ಲ ಎಂದು ತಿಳಿಸಿದರು.

ಗೃಹ ಖಾತೆ ಬದಲಾವಣೆ ಮಾತೇ ಇಲ್ಲ:
ಕೋಟ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಗೃಹ ಸಚಿವರ ಬದಲಾವಣೆಯಾಗಲಿದೆ ಎನ್ನುವುದು ಕೇವಲ ಊಹಾಪೋಹ. ಗೃಹ ಇಲಾಖೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದು. ಬದಲಾವಣೆ ಮಾಡುವ ಯಾವುದೇ ಸಂದರ್ಭ ಒದಗಿ ಬರುವುದಿಲ್ಲ ಅವಿಶ್ವಾಸ ನನಗಿದೆ ಎಂದರು.

ಬಿಸಿ ಪಾಟೀಲ್ ಅವರ ಹೇಳಿಕೆ ವೈಯಕ್ತಿಕವಾಗಿದ್ದು ಅದಕ್ಕೂ ಗೃಹಖಾತೆ ಬದಲಾವಣೆಗೂ ಸಂಬಂಧವಿಲ್ಲ ಎಂದರು.

ಮುಖ್ಯಮಂತ್ರಿಗಳ ಮೇಲೆ ಹಾಗೂ ನಾಯಕರ ಮೇಲೆ ಸಂಪೂರ್ಣ ವಿಶ್ವಾಸವಿದೆ ರಾಜ್ಯದಲ್ಲಿ ಸಮರ್ಥವಾಗಿ ಗೃಹ ಇಲಾಖೆಯನ್ನು ನಿಭಾಯಿಸುತ್ತಾ ಇರುವುದರಿಂದ ಖಾತೆಗೆ ಯಾವುದೇ ರೀತಿ ತೊಂದರೆ ಇಲ್ಲ ಎಂದರು.

ರಘುರಾಜ್ ಹೆಚ್. ಕೆ

#####################₹₹₹₹######₹##₹₹₹₹₹

ಸುದ್ದಿ ನೀಡಲು ಸಂಪರ್ಕಿಸಿ:9449553305…

RELATED ARTICLES

4 COMMENTS

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!