Wednesday, April 30, 2025
Google search engine
Homeರಾಷ್ಟ್ರೀಯಈಜುಡುಗೆ( ಸ್ವಿಮ್‌ ಸೂಟ್)ಗಳ ಮೇಲೆ ಹಿಂದೂ ದೇವರ ಚಿತ್ರ ಎತ್ತ ಸಾಗುತ್ತಿದೆ ಸಮಾಜದ ಚಿತ್ತ..!!

ಈಜುಡುಗೆ( ಸ್ವಿಮ್‌ ಸೂಟ್)ಗಳ ಮೇಲೆ ಹಿಂದೂ ದೇವರ ಚಿತ್ರ ಎತ್ತ ಸಾಗುತ್ತಿದೆ ಸಮಾಜದ ಚಿತ್ತ..!!

ನಿರಂತರವಾಗಿ ಹಿಂದೂ ದೇವತೆಗಳನ್ನು ಅವಹೇಳನ ಮಾಡುವ ಉದ್ದೇಶದಿಂದ ಅಶ್ಲೀಲವಾಗಿ ,ಅಸಭ್ಯವಾಗಿ , ಪೋಸ್ಟರ್ ಗಳನ್ನು ಹಾಕುವುದು. ಅಸಭ್ಯವಾಗಿ ಚಿತ್ರಗಳನ್ನು ಬಿತ್ತರಿಸುವುದು ನಡೆದುಕೊಂಡುಬರುತ್ತಿದೆ.

ಇದೀಗ ಹೊಸದಾದ ವಿವಾದ ಒಂದು ಹುಟ್ಟು ಕೊಂಡಿದ್ದು”ಸಹಾರಾ ರೇ ಸ್ವಿಮ್” ಹೆಸರಿನ ಬಟ್ಟೆ ಬ್ರಾಂಡ್ ಹೊಸ ವಿವಾದ ಹುಟ್ಟುಹಾಕಿದೆ. ಹೊಸದಾಗಿ ಲಾಂಚ್‌ ಮಾಡಿರೋ ಈಜುಡುಗೆಗಳ ಮೇಲೆ ಹಿಂದೂ ದೇವತೆಗಳ ಚಿತ್ರಗಳನ್ನು ಮುದ್ರಿಸಿದೆ. ಸಹಾರಾ ರೇ ಒಡೆತನದಲ್ಲಿರುವ ಬ್ರಾಂಡ್‌ ಇದಾಗಿದೆ.

ಔರಾ ಕಲೆಕ್ಷನ್ 2022′ ಹೆಸರಿನಲ್ಲಿ ಈ ಸ್ವಿಮ್‌ ಸೂಟ್‌ಗಳನ್ನು ಬಿಡುಗಡೆ ಮಾಡಲಾಗಿದ್ದು.


ಥಾಂಗ್ಸ್ ಮತ್ತು ಮೈಕ್ರೋ ಸ್ಟ್ರಿಂಗ್ ಟಾಪ್‌ಗಳನ್ನು ಒಳಗೊಂಡಿರುವ ಹೊಸ ಸಂಗ್ರಹ ಇದಾಗಿದೆ. ಇವುಗಳ ಮೇಲೆ ಹಿಂದೂ ದೇವತೆಗಳ ಚಿತ್ರಗಳನ್ನು ಮುದ್ರಿಸಲಾಗಿದೆ. ಈ ವಿವಾದಾತ್ಮಕ ಸ್ವಿಮ್‌ ಸೂಟ್‌ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು.

ಬಿಕಿನಿ ಹಾಗೂ ಟಾಪ್‌ ಮೇಲೆ ಹಿಂದೂ ದೇವತೆಗಳ ಚಿತ್ರಗಳನ್ನು ಮುದ್ರಿಸಿರೋದು ಹಲವರನ್ನು ಕೆರಳಿಸಿದೆ.

ದೇವರ ಚಿತ್ರ ಮುದ್ರಿಸಲೇಬೇಕೆಂಬ ಉದ್ದೇಶ ಕಂಪನಿಗಿದ್ದರೆ, ಯಾಕೆ ಜೀಸಸ್‌ ಚಿತ್ರವನ್ನು ಮುದ್ರಿಸಿಲ್ಲ ಅಂತಾ ಟ್ವಿಟ್ಟರ್‌ ಬಳಕೆದಾರನೊಬ್ಬ ಪ್ರಶ್ನಿಸಿದ್ದಾನೆ.

ಹಿಂದುತ್ವ ಅನ್ನೋದು ಜೋಕ್‌ ಅಲ್ಲ, ಅಥವಾ ಕಂಪನಿಗಳಿಗೆ ಹಣ ಮಾಡಿಕೊಳ್ಳುವ ಮಾರ್ಗವೂ ಅಲ್ಲವೆಂದು ಮತ್ತೋರ್ವ ಆಕ್ರೋಶ ಹೊರಹಾಕಿದ್ದಾನೆ.


ಸಹರಾ ರೇ ಕಂಪನಿ ಈ ರೀತಿ ಮಾಡಿರೋದು ಇದೇ ಮೊದಲೇನಲ್ಲ. 2019ರಲ್ಲಿ ಫ್ಲೋರ್‌ ಮ್ಯಾಟ್‌ ಹಾಗೂ ಟಾಯ್ಲೆಟ್‌ ಕವರ್‌ಗಳ ಮೇಲೆ ಹಿಂದು ದೇವತೆಗಳ ಚಿತ್ರವನ್ನು ಮುದ್ರಿಸಿತ್ತು. ಅದನ್ನು ಅಮೇಜಾನ್‌ನಲ್ಲಿ ಮಾರಾಟಕ್ಕಿಡಲಾಗಿತ್ತು.

ಸಂಸ್ಥೆಗಳಿಗೆ ಪ್ರಚಾರಮಾಡಲು ಸಾಕಷ್ಟು ವಿಧಾನಗಳಿವೆ ಅಂತದ್ದರಲ್ಲಿ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಇತರ ಕೀಳುಮಟ್ಟದ ಜಾಹೀರಾತುಗಳನ್ನು ನೀಡುವುದು ಒಳ್ಳೆಯದಲ್ಲ ಇದರಲ್ಲಿ ಭಾಗವಹಿಸುವುದು ಸಹ ಒಳ್ಳೆಯದಲ್ಲ ಇದು ಇಲ್ಲಿಗೇ ನಿಲ್ಲಬೇಕು ಇಲ್ಲವಾದರೆ ಅದರ ವಿರುದ್ಧ ತೀವ್ರ ಹೋರಾಟ ಮಾಡಿ ಕಂಪನಿಯನ್ನೇ ಮುಚ್ಚಿ ಸಲಾಗುವುದು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ…

ರಘುರಾಜ್ ಹೆಚ್. ಕೆ….

#####################################

ಸುದ್ದಿ ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...