Monday, June 16, 2025
Google search engine
Homeರಾಜ್ಯಗೌಡ್ರ ಗದ್ದಲದಲ್ಲಿ ಕಿಮ್ಮನೆ ಸುಮ್ಮನಾದ್ರ ? ಒಂದು ಸನ್ಮಾನ ಹಲವು ಅನುಮಾನ..!!

ಗೌಡ್ರ ಗದ್ದಲದಲ್ಲಿ ಕಿಮ್ಮನೆ ಸುಮ್ಮನಾದ್ರ ? ಒಂದು ಸನ್ಮಾನ ಹಲವು ಅನುಮಾನ..!!

ತೀರ್ಥಹಳ್ಳಿ: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಯಾವಾಗ ಮಂಜುನಾಥ ಗೌಡರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬಂದರೂ ಕಿಮ್ಮನೆ ಕೆರಳಲು ಶುರುಮಾಡಿದರು.

ಮುಂಚಿನಿಂದಲೂ ಕಿಮ್ಮನೆ ಒಂದಷ್ಟು ಸಿದ್ಧಾಂತಗಳನ್ನು ಇಟ್ಟುಕೊಂಡು ಬಂದಂತಹ ರಾಜಕಾರಣಿ ಏನಾದರೂ ಹೇಳುವುದಿದ್ದರೆ ನೇರವಾಗಿ ಹೇಳುವಂತಹ ರಾಜಕಾರಣಿ ಅಧಿಕಾರ ಇರಲಿ ಇಲ್ಲದಿರಲಿ ಜನರ ನಡುವೆ ನಿಸ್ವಾರ್ಥಿಯಾಗಿ ಒಂದಷ್ಟು ಕಾನೂನು ಸಲಹೆಗಳನ್ನು ನೀಡುತ್ತಾ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ತಮ್ಮ ಕೈಲಾದ ಸಹಾಯಗಳನ್ನು ಮಾಡುತ್ತಾ ಜನರ ನಡುವೆ ಇರುವ ವ್ಯಕ್ತಿ.

ಮಂಜುನಾಥ್ ಗೌಡರ ಸೇರ್ಪಡೆಯಿಂದ ಇರಿಸುಮುರಿಸು ಗೊಂಡ ಕಿಮ್ಮನೆ:

ಭ್ರಷ್ಟಾಚಾರವನ್ನು ಪ್ರಬಲವಾಗಿ ವಿರೋಧಿಸುವ ಕಿಮ್ಮನೆ ಯಾವಾಗ ಮಂಜುನಾಥ ಗೌಡರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿಕೊಂಡರೂ ಅಂದಿನಿಂದಲೇ ಗೌಡರ ಸೇರ್ಪಡೆಯನ್ನು ವಿರೋಧಿಸುತ್ತಾ ಬಂದರು.

ಭ್ರಷ್ಟರಿಗೆ ಮಣೆ ಹಾಕಬೇಡಿ ಅವರ ಜೊತೆ ನಾನು ಇರುವುದಿಲ್ಲ ಎನ್ನುವ ಮಾತುಗಳನ್ನು ಹೇಳುತ್ತಾ ಬಂದರು ಹಾಗೆ ನಡೆದುಕೊಂಡರು ಕೂಡ ಎಂದು ಸಭೆ-ಸಮಾರಂಭಗಳಲ್ಲಿ ವೇದಿಕೆಗಳಲ್ಲಿ ಮಂಜುನಾಥ ಗೌಡರ ಜೊತೆ ಒಟ್ಟಾಗಿ ಕಾಣಿಸಿಕೊಳ್ಳಲಿಲ್ಲ.

ಆದರೆ ಮಂಜುನಾಥ ಗೌಡರು ಎಲ್ಲೂ ಬಹಿರಂಗವಾಗಿ ಕಿಮ್ಮನೆ ಯನ್ನು ವ್ಯಾಪಕವಾಗಿ ಟೀಕಿಸಲಿಲ್ಲ:

ಕಿಮ್ಮನೆ ಅವರ ಸಿದ್ಧಾಂತಗಳ ಬಗ್ಗೆ ಸ್ಪಷ್ಟ ಅರಿವಿದ್ದ ಮಂಜುನಾಥ ಗೌಡರು ಕಿಮ್ಮನೆ ಅವರನ್ನು ಎಲ್ಲೂ ಬಹಿರಂಗವಾಗಿ ವ್ಯಾಪಕವಾಗಿ ಟೀಕಿಸಿಲ್ಲ ಹಾಗೆ ಜೊತೆಯಾಗಿ ರಾಜಕಾರಣವನ್ನು ಮಾಡಲಿಲ್ಲ ಬದಲಿಗೆ ತಾವೇ ತಮ್ಮ ಹಿಂಬಾಲಕ ರೊಂದಿಗೆ ಸ್ಥಳೀಯ ಚುನಾವಣೆಗಳನ್ನು ಎದುರಿಸಿದರು. ಅದರಲ್ಲಿ ಯಶಸ್ವಿಯಾದರು . ಇಬ್ಬರ ನಡುವೆ ಮುಸುಕಿನ ಗುದ್ದಾಟ ಹೀಗೆ ನಡೆದುಕೊಂಡು ಹೋಗುತ್ತಿತ್ತು.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ನಡೆದಿದ್ದೇನು?

ತೀರ್ಥಹಳ್ಳಿ ಯ ಬೆಟ್ಟಮಕ್ಕಿಯಲ್ಲಿ ನಡೆದ ಅಂಬೇಡ್ಕರ್​ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಹಾಗೂ ಆರ್​ಎಂ ಮಂಜುನಾಥ್​ ಗೌಡರಿಗೆ ಒಟ್ಟಾಗಿ ಸನ್ಮಾನ ಮಾಡಲಾಗಿದೆ.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಆಯೋಜಕರು ಒಂದೇ ಪಕ್ಷದಲ್ಲಿದ್ದರೂ ಪ್ರಬಲವಾಗಿ ಒಬ್ಬರನ್ನೊಬ್ಬರು ವಿರೋಧಿಸುತ್ತಿದ್ದ ಇಬ್ಬರು ನಾಯಕರನ್ನು ಒಂದೇ ವೇದಿಕೆಯಲ್ಲಿ ಕೂರಿಸಿ ಸನ್ಮಾನ ಮಾಡಿರುವುದು ಹಾಗೂ ಇಬ್ಬರು ಒಪ್ಪಿಕೊಂಡು ಪರಸ್ಪರ ಕುಳಿತು ಸನ್ಮಾನ ಮಾಡಿಸಿ ಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ತೀರ್ಥಹಳ್ಳಿ ರಾಜಕೀಯಕ್ಕೆ ಹೊಸ ತಿರುವು ಕೊಡುತ್ತಾ ಈ ಬೆಳವಣಿಗೆ?

ಮಂಜುನಾಥ್ ಗೌಡರು ಕಾಂಗ್ರೆಸ್ ಸೇರಿದ್ದನ್ನು ಪ್ರಬಲವಾಗಿ ವಿರೋಧಿಸಿ ತಮ್ಮ ಆತ್ಮೀಯರ ಜೊತೆ ಕಾರ್ಯಕ್ರಮಗಳಲ್ಲಿ ಸೇರುತ್ತಿದ್ದ ಕಿಮ್ಮನೆ ರತ್ನಾಕರ್ ಚುನಾವಣೆಗಾಗಿ ಗೌಡರ ಜೊತೆ ಹೊಂದಿಕೊಂಡರಾ?

ಪಟ್ಟಣ ಪಂಚಾಯತ್ ಚುನಾವಣೆಯ ಗೆಲುವಿನ ನಗೆ ಬೀರಿದ ಮಂಜುನಾಥ್ ಗೌಡರು ಮುಂದಿನ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ನನಗೆ ಕನ್ಫರ್ಮ್ ಎಂದು ಆತ್ಮೀಯರಲ್ಲಿ ಹೇಳಿಕೊಳ್ಳುತ್ತಿದ್ದರು. ಹಾಗೆ ಕಿಮ್ಮನೆ ಕಾರ್ಯಕ್ರಮಗಳಲ್ಲಿ ದೂರ ಉಳಿಯುತ್ತಿದ್ದರು ಇಬ್ಬರ ನಡುವಿನ ಶೀತಲ ಸಮರ ಹೀಗೆ ಮುಂದುವರೆದಿತ್ತು. ಆದರೆ ಈ ಬೆಳವಣಿಗೆಯಿಂದ ತೀರ್ಥಳ್ಳಿ ಕಾಂಗ್ರೆಸ್ಸಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಮುಂದೆ ಏನಾಗುತ್ತದೆ ಎನ್ನುವ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.

ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ಹತ್ತಿರ ಇರುವುದರಿಂದ ಇಬ್ಬರೂ ಒಂದಾದ್ರ? ರಾಜಕೀಯ ವೈಮನಸ್ಸು ಬಿಟ್ಟರಾ?

ಚುನಾವಣೆಯ ಸಮಯ ಹತ್ತಿರ ಬರುತ್ತಿದ್ದಂತೆ ಇಬ್ಬರು ನಾಯಕರು ತಮ್ಮ ನಡುವಿನ ಅಸಮಧಾನವನ್ನು ಬಿಟ್ಟು ಪಕ್ಷಕ್ಕಾಗಿ ಒಂದಾಗಿದ್ದಾರಾ? ಅಥವಾ ಕಿಮ್ಮನೆ ರತ್ನಾಕರ್ ಅವರಿಗೆ ತೀರ್ಥಹಳ್ಳಿಯ ವಿಧಾನಸಭೆಯ ಕ್ಷೇತ್ರ ಕನ್ಫರ್ಮ್ ಆಯ್ತಾ? ಆರ್ ಎಂ ಮಂಜುನಾಥ್ ಗೌಡರಿಗೆ ಬದಲಿ ವ್ಯವಸ್ಥೆ ಆಗಿದೆಯಾ? ಇದು ಇಬ್ಬರ ನಡುವೆ ಶೀತಲ ಸಮರ ಸರಿಯಾಗಲು ಕಾರಣನಾ? ಇದೆಲ್ಲವೂ ಪಕ್ಷದ ಆಂತರಿಕ ವಿಷಯ ಅದೇನೇ ಇರಲಿ,

ಒಟ್ಟಿನಲ್ಲಿ ಬಿಜೆಪಿಗೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ನ ಇಬ್ಬರು ನಾಯಕ ನಾಯಕರು ಒಂದಾಗಿರುವುದು ಕಾಂಗ್ರೆಸ್ಸಿನ ಉಳಿದ ನಾಯಕರಲ್ಲಿ ಕಾರ್ಯಕರ್ತರಲ್ಲಿ ಉತ್ಸಾಹದ ಚಿಲುಮೆ ಮೂಡಿಸಿದೆ.

ಹಲವು ಅನುಮಾನಗಳನ್ನು ಹುಟ್ಟು ಹಾಕಿರುವ ಈ ಸನ್ಮಾನ ತೀರ್ಥಹಳ್ಳಿಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿರುವುದಂತೂ ಸತ್ಯ ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆದುಕೊಳ್ಳುತ್ತದೆ ಎಂದು ಕಾದುನೋಡಬೇಕು ‌..

ರಘುರಾಜ್ ಹೆಚ್. ಕೆ….

#####################################

ಸುದ್ದಿ ನೀಡಲು ಸಂಪರ್ಕಿಸಿ:9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!