Wednesday, April 30, 2025
Google search engine
Homeರಾಜ್ಯಮಲೆನಾಡಿನ ಸ್ವರ್ಗ ಆಗುಂಬೆಯಲ್ಲಿ ನರಕದರ್ಶನ ಅಧಿಕಾರಿಗಳೇ ಇತ್ತ ಗಮನಿಸಿ...

ಮಲೆನಾಡಿನ ಸ್ವರ್ಗ ಆಗುಂಬೆಯಲ್ಲಿ ನರಕದರ್ಶನ ಅಧಿಕಾರಿಗಳೇ ಇತ್ತ ಗಮನಿಸಿ…

ಮಲೆನಾಡಿನ ಸ್ವರ್ಗ ಕರ್ನಾಟಕದ ಚಿರಾಪುಂಜಿ ಎಂದೆಲ್ಲಾ ಕರೆಸಿಕೊಳ್ಳುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪ್ರವಾಸಿಗರ ನೆಚ್ಚಿನ ತಾಣ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗುಂಬೆಗೆ ಭೇಟಿ ನೀಡುತ್ತಾರೆ. ಆದರೆ ಇಲ್ಲಿ ವಾಸಿಸುವ ಜನರ ಪಾಡು ಮಾತ್ರ ನರಕಯಾತನೆ ಕಾಡುಕೋಣಗಳ ನಿರಂತರ ಹಾವಳಿ, ರೈತರ ನಿದ್ದೆಗೆಡಿಸಿದೆ. ಸರ್ಕಾರವಾಗಲಿ ಸಂಬಂಧಪಟ್ಟ ಅಧಿಕಾರಿಗಳಾಗಲಿ ರೈತರ ನೆರವಿಗೆ ಧಾವಿಸಿಲ್ಲ ಕಾಡುಕೋಣಗಳ ಹಾವಳಿಯಿಂದ ಹಾಳಾದ ಫಸಲಿಗೆ ಸಮರ್ಪಕವಾದ ಪರಿಹಾರವನ್ನು ಘೋಷಿಸಿಲ್ಲ. ಶಾಸಕರಾದ ಆರಗ ಜ್ಞಾನೇಂದ್ರ ಅವರು ಕಾಡುಪ್ರಾಣಿಗಳ ಹಾವಳಿ ಬಗ್ಗೆ ಪತ್ರಿಕೆ ಹಿಂದೆ ಬರೆದಾಗ ವಿಧಾನಸೌಧದಲ್ಲಿ ಇದರ ವಿರುದ್ಧ ಧ್ವನಿಯೆತ್ತಿದ್ದರು. ಆ ಸಮಯದಲ್ಲಿ ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿಯವರು ಕೂಡ ಸೂಕ್ತ ಸ್ಪಂದನೆ ವ್ಯಕ್ತಪಡಿಸಿದ್ದರು. ಆದರೆ ನಂತರ ಕೊರೋನಾ ಸಾಂಕ್ರಮಿಕ ಕಾಯಿಲೆ ತೀವ್ರವಾಗಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಅದು ಅಲ್ಲಿಯೇ ನಿಂತು ಹೋಯಿತು. ಶಾಸಕರು ಇದರ ಬಗ್ಗೆ ಮತ್ತೆ ಧ್ವನಿಯೆತ್ತಲಿ ಆಗುಂಬೆ ಭಾಗದ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿ ಎನ್ನುವುದು ಪತ್ರಿಕೆಯ ಆಶಯ ಜೊತೆಗೆ ನಿರಂತರವಾಗಿ ವಿದ್ಯುತ್ಇರುವುದಿಲ್ಲ ಇದರಿಂದ ವಿದ್ಯಾರ್ಥಿಗಳಿಗೆ ಅಂತೂ ಈಗಿನ ಸಮಯದಲ್ಲಿ ತುಂಬಾ ಕಷ್ಟಕರವಾದ ಪರಿಸ್ಥಿತಿಯಾಗಿದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆಯೂ ಆಗುಂಬೆ ಜನತೆ ಮಾತ್ರ ಎಲ್ಲಾ ನೋವುಗಳನ್ನು ನುಂಗಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇವೆಲ್ಲ ಸಮಸ್ಯೆಗಳ ಮಧ್ಯೆ ಆಗುಂಬೆ ಮುಖ್ಯರಸ್ತೆಯಲ್ಲಿ ಗ್ರಾಮ ಪಂಚಾಯಿತಿ ಎದುರುಗಡೆ ಮಳೆಯ ನೀರು ರಸ್ತೆಯ ಮೇಲೆ ನಿಂತಿರುವುದು ದುರಂತವೇ ಸರಿ ಇದನ್ನು ನೋಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಅವರು ತೆಗೆದುಕೊಳ್ಳುವ ಸಂಬಳಕ್ಕೆ ದ್ರೋಹ ಮಾಡಿದಂತೆ ಕೂಡಲೇ ಇದಕ್ಕೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ತೆಗೆದುಕೊಂಡು ನೀರು ಸರಾಗವಾಗಿ ಚರಂಡಿಗೆ ಹೋಗುವಂತೆ ಮಾಡಿ ಪುಣ್ಯಕಟ್ಟಿಕೊಳ್ಳಿ ಎನ್ನುವುದು ಆಗುಂಬೆ ಭಾಗದ ಜನರ ಮನವಿ ಹಾಗೆ ಪ್ರವಾಸಿಗರದು ಕೂಡ…#( ವರದಿ… ರಘುರಾಜ್ ಹೆಚ್, ಕೆ…9449553305….)#

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...