Home ರಾಜ್ಯಮೇ 14 ಹಾಗೂ 15 ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ..! ಆಸಕ್ತರು ಅರ್ಜಿ ಸಲ್ಲಿಸಬಹುದು..!!

ಮೇ 14 ಹಾಗೂ 15 ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ..! ಆಸಕ್ತರು ಅರ್ಜಿ ಸಲ್ಲಿಸಬಹುದು..!!

by EDITOR NEWS WARRIORS
0 comments

ಮಂಗಳೂರು :- ಮಂಗಳೂರು ವಿಶ್ವ ವಿದ್ಯಾನಿಲಯದ ಉದ್ಯೋಗ ಮಾಹಿತಿ ಕೇಂದ್ರ ಮತ್ತು ನಿಯೋಜನಾ ಘಟಕಗಳು, ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮಂಗಳ ಗಂಗೋತ್ರಿಯ ವಿಶ್ವ ವಿದ್ಯಾನಿಲಯದಲ್ಲಿ ” ಮೇ 14 & 15 ರಂದು ಉದ್ಯೋಗ ಮೇಳ ಆಯೋಜನೆ ಮಾಡಿದೆ.

ಸುಮಾರು 40 ಕಂಪನಿಗಳು, 11000 ಕ್ಕೂ ಹೆಚ್ಚಿನ ಹುದ್ದೆಗಳ ನಿರೀಕ್ಷೆ!!

ಎರಡೂ ದಿನಗಳ ಉದ್ಯೋಗ ಮೇಳದಲ್ಲಿ ದೇಶದ ವಿವಿಧಡೇ ಸುಮಾರು 11000 ಹುದ್ದೆಗಳ ನೇಮಕಾತಿ ನೆಡೆಯುವ ಸಾಧ್ಯತೆಯಿದೆ.

UEIGB, UTPC, ಮಂಗಳೂರು ವಿಶ್ವ ವಿದ್ಯಾನಿಲಯದ ವಿವಿಧ ಘಟಕಗಳ ಸಂಯೋಜನೆ, ಸ್ವಾಯತ್ತ ಕಾಲೇಜುಗಳು ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯದ ಕ್ಯಾಂಪಸ್ ನ ಸುಮಾರು 10000 ಕ್ಕೂ ಮೀರಿದ ವಿದ್ಯಾರ್ಥಿಗಳು ಸಲ್ಲಿಸಿದ್ದಾರೆ

ಈ ಅರ್ಜಿಗಳನ್ನು ಮ್ಯಾಜಿಕ್ ಬಸ್ ಎಂಬ NGO ಗೆ ಹಸ್ತಾಂತರ ಮಾಡಲಾಗಿದೆ. ಈ ಸಂಸ್ಥೆ ಅರ್ಜಿಗಳನ್ನು ಪರಿಶೀಲನೆ ನೆಡೆಸಿ ಅರ್ಹರಿಗೆ ಟೋಕನ್ ಒದಗಿಸಿ ನೇಮಕಾತಿಗೆ ನೇರ ಸಂದರ್ಶನ ನೆಡೆಸಲಿದೆ.

ಕನಿಷ್ಠ ವೇತನ 10000/- ಗರಿಷ್ಟ ಮಿತಿಯಿಲ್ಲ::

ಸ್ಥಳದಲ್ಲೇ ನೋಂದಣಿಗೂ ಅವಕಾಶವಿದ್ದೂ ಅಭ್ಯರ್ಥಿಗಳು ತಮ್ಮ ಹೆಸರು ನೋಂದಾಯಿಸಿ ನೇರ ಸಂದರ್ಶನದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಆಗಮಿಸುವಾಗ ಬಯೋಡೇಟಾ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಫೋಟೋ, 10 ನೇ ತರಗತಿಯ ಅಂಕ ಪಟ್ಟಿ ಜೊತೆಗೆ ಗರಿಷ್ಠ ಅರ್ಹತೆಯ ವಿದ್ಯಾಭ್ಯಾಸದ ಅಂಕ ಪಟ್ಟಿಯನ್ನೂ ತರಬೇಕು. ಶೈಕ್ಷಣಿಕ ವರ್ಷದಲ್ಲಿ ಇರುವ ಪದವಿ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮಂಗಳೂರು ವಿಶ್ವ ವಿದ್ಯಾನಿಲಯದ ಮಾನವಿಕ, ನಿರ್ವಹಣೆ, ವಿಜ್ಞಾನ,ಮತ್ತು ಲೆಕ್ಚರ್ ಕಾಂಪ್ಲೆಕ್ಸ್ಗಳನ್ನೂ ಉದ್ಯೋಗ ಮೇಳಕ್ಕೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಪ್ರತಿಯೊಂದು ವಿಭಾಗಕ್ಕೂ ಸಹಾಯವಾಣಿ ಕಲ್ಪಿಸಲಾಗಿದೆ::

ಉದ್ಯೋಗ ಮೇಳಕ್ಕೆ 80 ಕ್ಕೂ ಹೆಚ್ಚಿನ ಸ್ವಯಂ ಸೇವಕರನ್ನು ನಿಯೋಜನೆ ಮಾಡಿದ್ದೂ ಉದ್ಯೋಗದಾತ ಕಂಪನಿಗಳ ಸಿಬ್ಬಂದಿಯವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಭಾಗಿಯಾದ ಪ್ರತಿಷ್ಟಿತ ಕಂಪನಿಗಳು ಇಂತಿವೆ ” ಅಪೋಲೋ ಫಾರ್ಮಸಿ, ಮುತ್ತುಟ್ಟು ಫೈನಾನ್ಸ್, ಮೆಡಿಪ್ಲಸ್, ಜಸ್ಟ್ ಡೈಲ್, ಬೈಜೂಸ್, ಆಕ್ಸಿಸ್ ಬ್ಯಾಂಕ್, ಕಾಂಚನ ಗ್ರೂಪ್ ಆಫ್ ಕಂಪನಿಸ್, ಹೋಂಡಾ, ಮ್ಯಾಟ್ರಿಕ್ ದಿಯಾ ಸಿಸ್ಟಮ್, ಎಚ್. ಡಿ. ಎಫ್. ಸಿ. ಬ್ಯಾಂಕ್ , ಮಾಂಡೋವಿ ಮೋಟಾರ್ಸ್, ಮೋರ್ ಸೂಪರ್ ಮಾರ್ಕೆಟ್ ಸೇರಿದಂತೆ ಇನ್ನಿತರ 40 ಪ್ರತಿಷ್ಟಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಅರ್ಹ ಉದ್ಯೋಗಿಗಳಿಗೆ ಉದ್ಯೋಗ ನೀಡಲಿದೆ.

ಉಪಯುಕ್ತ ಮಾಹಿತಿಗಾಗಿ
ಶ್ರೀಮತಿ ಶಾರದಾ ಎಚ್ ಸೋಮಯಾಜಿ ಯು. ಟಿ. ಪಿ. ಸಿ. ಯೋಜನೆ – 63630 22303

✒️ ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ::9449553305..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...