Wednesday, April 30, 2025
Google search engine
Homeಶಿವಮೊಗ್ಗಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಶಾಲಾ ಪ್ರಾರಂಭೋತ್ಸವ ಮಕ್ಕಳ ಕಲರವ ..!!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಶಾಲಾ ಪ್ರಾರಂಭೋತ್ಸವ ಮಕ್ಕಳ ಕಲರವ ..!!


ತೀರ್ಥಹಳ್ಳಿ :ತಾಲ್ಲೂಕಿನ ಪ್ರತಿಷ್ಟಿತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಇಲ್ಲಿ 2022-23ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ನಡೆಯಿತು.


2022-23ನೇ ಸಾಲಿನ ಕಲಿಕಾ ಚೇತರಿಕೆ ಕಲಿಕಾ ವರ್ಷವಾಗಿ ಸರ್ಕಾರ ಘೋಷಿಸಿರುವ ಹಿನ್ನಲೆಯಲ್ಲಿ ಆರಂಭದ ದಿನದಲ್ಲೇ
ವಿದ್ಯಾರ್ಥಿಗಳಿಗೆ ವಿಶಿಷ್ಟವಾಗಿ ಆರತಿಯನ್ನು ಬೆಳಗಿ ಪುಷ್ಪಾರ್ಚನೆ ಮಾಡುವುದರ ಮೂಲಕ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ತಂಡವು ಆತ್ಮೀಯವಾಗಿ ಬರಮಾಡಿಕೊಂಡರು. ಮುಖ್ಯ ಶಿಕ್ಷಕರಾದ ಶ್ರೀಮತಿ ಸುರೇಖಾ ಡಿ ಶೇಟ್ ರವರು ಹಾಜರಿದ್ದ ಎಲ್ಲರನ್ನು ಸ್ವಾಗತಿಸಿದರು.


ಕಲಿಕಾ ಚೇತರಿಕೆ ವರ್ಷದ ಕಾರ್ಯಕ್ರಮದ ಉದ್ದೇಶದ ಬಗ್ಗೆ ಶಿಕ್ಷಕರಾದ ಶ್ರೀಮತಿ ಅಶ್ವಿನಿ ರವರು ಮಾತನಾಡಿ, ಶಾಲಾ ಪ್ರಾರಂಭೋತ್ಸವ ಹಾಗೂ ಸರ್ಕಾರದ ವಿವಿಧ ಶೈಕ್ಷಣಿಕ ಯೋಜನೆಯ ಕುರಿತು ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.
ಹೊನ್ನೇತಾಳು ಗ್ರಾಮ ಪಂಚಾಯತಿ ಸದಸ್ಯರಾದ ರಾಘವೇಂದ್ರ ಅವರು ಮಾತನಾಡಿ ಶಾಲಾ ಅಭಿವೃದ್ಧಿ ಹಾಗೂ ದಾಖಲಾತಿ ಹೆಚ್ಚುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿ, ನಮ್ಮ ಶಾಲೆ ಹಾಗೂ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಹೆಸರು ಮಾಡಲಿ ಎಂದು ಹಾರೈಸಿದರು.


7ನೇ ತರಗತಿ ವಿದ್ಯಾರ್ಥಿಗಳು ಸವಿನೆನಪಿಗಾಗಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಭಾವಚಿತ್ರವನ್ನ ಉಡುಗೊರೆಯಾಗಿ ನೀಡಿದರು. ಬೆಂಗಳೂರಿನ ಕ್ವೆಸ್ ಕಾರ್ಪ್ ಲಿ‌ ಉದ್ಯೋಗಿಯಾದ ಮಧು ನರಸಿಂಹ ಅವರು LKG,UKG ಮಕ್ಕಳಿಗೆ ನೋಟ್ ಬುಕ್ ಮತ್ತು ಪಠ್ಯ ಪುಸ್ತಕವನ್ನು ಕೊಡುಗೆಯಾಗಿ ನೀಡಿರುವುದನ್ನು ಈ ದಿನ ವಿತರಿಸಲಾಯಿತು.

ಬೆಂಗಳೂರಿನ ಶ್ರೀಮತಿ ಅನ್ನಪೂರ್ಣ ಅವರು ಕೊಡುಗೆಯಾಗಿ ನೀಡಿದ ಬ್ಯಾಗನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬ್ಯಾಗ್ ಕೊಡುಗೆಯಾಗಿ ನೀಡಲು ಸಹಕರಿಸಿದ ಶ್ರೀಮತಿ ವಿದ್ಯಾಬಳ್ಳಕರ್ ಹಾಗು ಮಧುಸೂದನ್ ಶುಕ್ಲ ಅವರ ಸಹಕಾರವನ್ನು ಸ್ಮರಿಸಲಾಯಿತು‌.


ಈ ಸಂದರ್ಭದಲ್ಲಿ SDMC ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪೋಷಕರು, ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶಾಲಾ ಪ್ರಾರಂಭೋತ್ಸವಕ್ಕೆ ಮೆರುಗನ್ನು ನೀಡಿದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...