Sunday, June 15, 2025
Google search engine
Homeರಾಜ್ಯದಣಿವರಿಯದ ನಾಯಕ ಜೆಡಿಎಸ್ ವರಿಷ್ಠ ಹೆಚ್, ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ..! ಪ್ರಶ್ನಾತೀತ ನಾಯಕರ...

ದಣಿವರಿಯದ ನಾಯಕ ಜೆಡಿಎಸ್ ವರಿಷ್ಠ ಹೆಚ್, ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ..! ಪ್ರಶ್ನಾತೀತ ನಾಯಕರ ಮನೆಗೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ ಗೃಹ ಸಚಿವ ಆರಗ ಜ್ಞಾನೇಂದ್ರ..!! ಪಕ್ಷ ಭೇದ ಮರೆತು ಪ್ರಧಾನಿ ಮೋದಿ ಸೇರಿದಂತೆ ದೇಶ-ವಿದೇಶದ ಗಣ್ಯರಿಂದ ಶುಭಾಶಯ ಕೋರಿಕೆ..!ಶಿವಮೊಗ್ಗದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಮೇಗನ್ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕತ್ತು ವಿತರಣೆ..!!

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ , ದಣಿವರಿಯದ ನಾಯಕ ಜೆಡಿಎಸ್ ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಅವರಿಗೆ 90 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ.

ದೇಶ ವಿದೇಶಗಳಿಂದ ಹಲವು ಗಣ್ಯರ ಶುಭಾಶಯ:

ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಮುಲಾಯಂ ಸಿಂಗ್ ಯಾದವ್, ಸೇರಿದಂತೆ ದೇಶ ವಿದೇಶದ ನಾನಾ ಗಣ್ಯರು ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹ ಸಚಿವರಿಂದ ಶುಭಾಶಯ ಕೋರಿಕೆ:

ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ವೈ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಮುಖಂಡರುಗಳಾದ ಆರ್ ಅಶೋಕ್, ಸಿಟಿ ರವಿ, ಕಾಂಗ್ರೆಸ್ನ ನ ಜಿ ,ಪರಮೇಶ್ವರ್ ಸೇರಿದಂತೆ ಹಲವು ನಾಯಕರುಗಳು ಪಕ್ಷಬೇಧ ಮರೆತು ಹಿರಿಯ ರಾಜಕಾರಣಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆ :

ಕರ್ನಾಟಕ ರಾಜ್ಯದ ಮೂಲೆ ಮೂಲೆಗಳಲ್ಲಿ ಅವರ ಅಭಿಮಾನಿಗಳು ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್, ಡಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಪ್ರಧಾನಿಯ ಹುಟ್ಟು ಹಬ್ಬದ ಪ್ರಯುಕ್ತ ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕತ್ ವಿತರಣೆ:

ಜೆಡಿಎಸ್ ವರಿಷ್ಟ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ 90ನೇ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕೇಟ್ ಅನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪಮೇಯರ್ ಹೆಚ್. ಫಾಲಾಕ್ಷಿ, ಪ್ರಮುಖರಾದ ಭಾಸ್ಕರ್, ನವುಲೆ ಮಂಜುನಾಥ್, ಪ್ರಶಾಂತ್, ಬಸವರಾಜ್, ದಿವಾಕರ್ ಮೊದಲಾದವರಿದ್ದರು.

ನ್ಯೂಸ್ ವಾರಿಯರ್ಸ್ ಪತ್ರಿಕೆ ಬಳಗದ ವತಿಯಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು…

ರಘುರಾಜ್.ಹೆಚ್.ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…


RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!