Wednesday, April 30, 2025
Google search engine
Homeಶಿವಮೊಗ್ಗಆಟಕ್ಕುಂಟು ಲೆಕ್ಕಕ್ಕಿಲ್ಲವಾದ ಸಾಗರ ಉಪ ವಿಭಾಗೀಯ ಆಸ್ಪತ್ರೆ &ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಳವಡಿಸಿರುವ...

ಆಟಕ್ಕುಂಟು ಲೆಕ್ಕಕ್ಕಿಲ್ಲವಾದ ಸಾಗರ ಉಪ ವಿಭಾಗೀಯ ಆಸ್ಪತ್ರೆ &ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು..! ಕಳ್ಳರ ಕಾಟ ರೋಗಿಗಳ ಪರದಾಟ..!!

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಪ ವಿಭಾಗೀಯ ಆಸ್ಪತ್ರೆ ಹಾಗೂ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗಳು ಕರ್ನಾಟಕ ರಾಜ್ಯಕ್ಕೆ ಮಾದರಿ ಆಸ್ಪತ್ರೆಯಾಗಿದ್ದೂ, ಈ ಆಸ್ಪತ್ರೆಯಲ್ಲಿ ಅಳವಡಿಸಿದ ಮೂರು ಕಣ್ಣು(C. C. CAMERA ) ಗಳು ಸಮರ್ಪಕವಾಗಿ ನಿರ್ವಹಣೆ ಕೊರತೆಯಿಂದ ನೆನೆಗುದಿಗೆ ಬಿದ್ದಿದ್ದೂ ಚಿತ್ರೀಕರಣವಾದ ವಿಡಿಯೋ ಸಂಗ್ರಹಣೆ ಮಾಡುವ ಉಪಕರಣ ಲಭ್ಯವಿಲ್ಲದೇ ಈ ಎರಡೂ ಆಸ್ಪತ್ರೆ ಒಳಭಾಗದಲ್ಲಿ ನಿತ್ಯ ಕಳ್ಳರ ಕೈಚಳಕದಿಂದ ಮೊಬೈಲ್, ಬೆಲೆಬಾಳುವ ವಸ್ತುಗಳು ಕಳ್ಳತನವಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಇದರಿಂದ ರೋಗಿಗಳು ಹಾಗೂ ರೋಗಿಗಳ ಪೋಷಕರು ಕಳ್ಳತನವಾಗುತ್ತಿರುವುದರಿಂದ ಪರದಾಟ ನೆಡೆಸುತ್ತಿದ್ದೂ, ಸುರಕ್ಷಿತವಲ್ಲದ ಆಸ್ಪತ್ರೆ ಎಂದು ಅಪಕೀರ್ತಿಗೆ ತುತ್ತಾಗಿದೆ.

ವೈಧ್ಯ ಸೇವೆಯಲ್ಲಿ ಪ್ರಾಮಾಣಿಕರೂ, ಜನಸ್ನೇಹಿ ವೈದ್ಯರಾಗಿದ್ದೂ, ಸಾಗರ ಉಪ ವಿಭಾಗೀಯ ಆಸ್ಪತ್ರೆ ಹಾಗೂ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಗಳಾದ ಶ್ರೀ ಪರಪ್ಪ ರವರು ಕೂಡಲೇ ಮೂರನೇ ಕಣ್ಣು (C. C. CAMERA ) ಗಳನ್ನೂ ಸುಸ್ಥಿತಿಯನ್ನಾಗಿ ನಿರ್ವಹಣೆ ಮಾಡಿಸಿ, ವಿಡಿಯೋ ಚಿತ್ರೀಕರಣವನ್ನೂ ಸಂಗ್ರಹಣೆ ಮಾಡುವಂತಹ ಉತ್ತಮ ಗುಣಮಟ್ಟದ ಉಪಕರಣ ಅಳವಡಿಸಿ, ಆಸ್ಪತ್ರೆ ಒಳಭಾಗದಲ್ಲಿ ದಿನನಿತ್ಯ ನೆಡೆಯುತ್ತಿರುವ ಕಳ್ಳರಿಂದ ಆಗುತ್ತಿರುವ ತೊಂದರೆಯನ್ನೂ ತಪ್ಪಿಸಿ, ಸುಭದ್ರ – ಸುರಕ್ಷಿತ ಸಾಗರ ಉಪ ವಿಭಾಗೀಯ ಆಸ್ಪತ್ರೆ ಹಾಗೂ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಾಗುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತಿರುವ ಪ್ರಜ್ಞಾವಂತ ಸಾಗರೀಕರು.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:: 9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...