Friday, May 2, 2025
Google search engine
Homeಶಿವಮೊಗ್ಗಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ತುಂಗಾ ಜಲಾಶಯ ಭರ್ತಿ ಹೊರ ಹರಿವು ಹೆಚ್ಚಳ..! ಎಲ್ಲೆಲ್ಲಿ ಎಷ್ಟು...

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ತುಂಗಾ ಜಲಾಶಯ ಭರ್ತಿ ಹೊರ ಹರಿವು ಹೆಚ್ಚಳ..! ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ..!!

ಶಿವಮೊಗ್ಗ, :: ಶಿವಮೊಗ್ಗದಲ್ಲಿ ಮನೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ಜಲಾಶಯಗಳ ಹೊರ ಹರಿವು ಹೆಚ್ಚಳವಾಗಿದ್ದು.


ಜಲಾಶಯಗಳಲ್ಲಿ ನೀರಿನ ಮಟ್ಟ ಕೆಳಗಿನಂತಿದೆ:


ಲಿಂಗನಮಕ್ಕಿ ಜಲಾಶಯಕ್ಕೆ 11,125 ಕ್ಯೂಸೆಕ್ ಒಳಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1763.65 ಅಡಿಯಷ್ಟು ನೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿ 54.2 ಮಿ.ಮೀ ಮಳೆಯಾಗಿದೆ. ಭದ್ರಾ ಜಲಾಶಯಕ್ಕೆ 7799 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಡ್ಯಾಂನ ಗರಿಷ್ಠ ಮಟ್ಟ 186 ಅಡಿ. ಪ್ರಸ್ತುತ 149.7 ಅಡಿಯಷ್ಟು ನೀರಿದೆ. ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದೆ. ಆದ್ದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯಕ್ಕೆ ಸದ್ಯ 11,976 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಮಾಣಿ ಡ್ಯಾಂನಲ್ಲಿ 380 ಕ್ಯೂಸೆಕ್ ಒಳಹರಿವು ಇದೆ. 390 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪಿಕಪ್ ಡ್ಯಾಂನಲ್ಲಿ 671 ಕ್ಯೂಸೆಕ್ ಒಳಹರಿವು ದಾಖಲಾಗಿದೆ.

ಜಿಲ್ಲೆಯ ವಿವಿಧ ಕಡೆ ನೂರು ಮಿ.ಮೀಗಿಂತಲೂ ಹೆಚ್ಚು ಮಳೆಯಾಗಿರುವ ವರದಿಯಾಗಿದೆ:

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ನಿನ್ನೆಯಿಂದ ಭಾರಿ ಮಳೆಯಾಗುತ್ತಿದ್ದು. ನಿರಂತರ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಬೆಳೆ ಹಾನಿ ಉಂಟಾಗಿದೆ. ಕೆಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೂರು ಮಿ.ಮೀ ಗಿಂತಲು ಹೆಚ್ಚಾದ ವರದಿ ಬಂದಿದ್ದು.

ವಿವಿಧ ಕಡೆ ಮಳೆಯ ಪ್ರಮಾಣದ ವಿವರ ಈ ಕೆಳಗಿನಂತಿದೆ:


ಶಿವಮೊಗ್ಗ ನಗರದಲ್ಲಿ 124 ಮಿ.ಮೀ, ಶಿವಮೊಗ್ಗದ ಮದ್ದಿನಕೊಪ್ಪದಲ್ಲಿ 125 ಮಿ.ಮೀ, ಅಗಸವಳ್ಳಿಯಲ್ಲಿ 127 ಮಿ.ಮೀ, ಕೋಟೆಗಂಗೂರು 125 ಮಿ.ಮೀ, ಮಲ್ಲಾಪುರದಲ್ಲಿ 124 ಮಿ.ಮೀ, ಆಯನೂರಿನಲ್ಲಿ 126 ಮಿ.ಮೀ, ಪುರದಾಳುವಿನಲ್ಲಿ 128 ಮಿ.ಮೀ, ಬಾಳೆಕೊಪ್ಪ 125 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿಯಲ್ಲಿ 124 ಮಿ.ಮೀ. ಶಿಕಾರಿಪುರದ ಅಂಜನಾಪುರದಲ್ಲಿ 125 ಮಿ.ಮೀ, ಹಾರೋಗೊಪ್ಪದಲ್ಲಿ 125 ಮಿ.ಮೀ ಮಳೆ ಸುರಿದಿದೆ. ತೀರ್ಥಹಳ್ಳಿಯ ಅಗ್ರಹಾರದಲ್ಲಿ 124 ಮಿ.ಮೀ, ತ್ರಿಯಂಬಕಪುರ 128 ಮಿ.ಮೀ, ದೇಮ್ಲಾಪುರ 124 ಮಿ.ಮೀ, ಹಾದಿಗಲ್ಲು 127 ಮಿ.ಮೀ ಮಳೆಯಾಗಿದೆ.ಅಪಾಯದ ಮಟ್ಟ ಮಿತಿಮೀರಿದೆ…

ರಘುರಾಜ್ ಹೆಚ್. ಕೆ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!