Tuesday, June 17, 2025
Google search engine
Homeಶಿವಮೊಗ್ಗಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ತುಂಗಾ ಜಲಾಶಯ ಭರ್ತಿ ಹೊರ ಹರಿವು ಹೆಚ್ಚಳ..! ಎಲ್ಲೆಲ್ಲಿ ಎಷ್ಟು...

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ತುಂಗಾ ಜಲಾಶಯ ಭರ್ತಿ ಹೊರ ಹರಿವು ಹೆಚ್ಚಳ..! ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ..!!

ಶಿವಮೊಗ್ಗ, :: ಶಿವಮೊಗ್ಗದಲ್ಲಿ ಮನೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ಜಲಾಶಯಗಳ ಹೊರ ಹರಿವು ಹೆಚ್ಚಳವಾಗಿದ್ದು.


ಜಲಾಶಯಗಳಲ್ಲಿ ನೀರಿನ ಮಟ್ಟ ಕೆಳಗಿನಂತಿದೆ:


ಲಿಂಗನಮಕ್ಕಿ ಜಲಾಶಯಕ್ಕೆ 11,125 ಕ್ಯೂಸೆಕ್ ಒಳಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1763.65 ಅಡಿಯಷ್ಟು ನೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿ 54.2 ಮಿ.ಮೀ ಮಳೆಯಾಗಿದೆ. ಭದ್ರಾ ಜಲಾಶಯಕ್ಕೆ 7799 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಡ್ಯಾಂನ ಗರಿಷ್ಠ ಮಟ್ಟ 186 ಅಡಿ. ಪ್ರಸ್ತುತ 149.7 ಅಡಿಯಷ್ಟು ನೀರಿದೆ. ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದೆ. ಆದ್ದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯಕ್ಕೆ ಸದ್ಯ 11,976 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಮಾಣಿ ಡ್ಯಾಂನಲ್ಲಿ 380 ಕ್ಯೂಸೆಕ್ ಒಳಹರಿವು ಇದೆ. 390 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪಿಕಪ್ ಡ್ಯಾಂನಲ್ಲಿ 671 ಕ್ಯೂಸೆಕ್ ಒಳಹರಿವು ದಾಖಲಾಗಿದೆ.

ಜಿಲ್ಲೆಯ ವಿವಿಧ ಕಡೆ ನೂರು ಮಿ.ಮೀಗಿಂತಲೂ ಹೆಚ್ಚು ಮಳೆಯಾಗಿರುವ ವರದಿಯಾಗಿದೆ:

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ನಿನ್ನೆಯಿಂದ ಭಾರಿ ಮಳೆಯಾಗುತ್ತಿದ್ದು. ನಿರಂತರ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಬೆಳೆ ಹಾನಿ ಉಂಟಾಗಿದೆ. ಕೆಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೂರು ಮಿ.ಮೀ ಗಿಂತಲು ಹೆಚ್ಚಾದ ವರದಿ ಬಂದಿದ್ದು.

ವಿವಿಧ ಕಡೆ ಮಳೆಯ ಪ್ರಮಾಣದ ವಿವರ ಈ ಕೆಳಗಿನಂತಿದೆ:


ಶಿವಮೊಗ್ಗ ನಗರದಲ್ಲಿ 124 ಮಿ.ಮೀ, ಶಿವಮೊಗ್ಗದ ಮದ್ದಿನಕೊಪ್ಪದಲ್ಲಿ 125 ಮಿ.ಮೀ, ಅಗಸವಳ್ಳಿಯಲ್ಲಿ 127 ಮಿ.ಮೀ, ಕೋಟೆಗಂಗೂರು 125 ಮಿ.ಮೀ, ಮಲ್ಲಾಪುರದಲ್ಲಿ 124 ಮಿ.ಮೀ, ಆಯನೂರಿನಲ್ಲಿ 126 ಮಿ.ಮೀ, ಪುರದಾಳುವಿನಲ್ಲಿ 128 ಮಿ.ಮೀ, ಬಾಳೆಕೊಪ್ಪ 125 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿಯಲ್ಲಿ 124 ಮಿ.ಮೀ. ಶಿಕಾರಿಪುರದ ಅಂಜನಾಪುರದಲ್ಲಿ 125 ಮಿ.ಮೀ, ಹಾರೋಗೊಪ್ಪದಲ್ಲಿ 125 ಮಿ.ಮೀ ಮಳೆ ಸುರಿದಿದೆ. ತೀರ್ಥಹಳ್ಳಿಯ ಅಗ್ರಹಾರದಲ್ಲಿ 124 ಮಿ.ಮೀ, ತ್ರಿಯಂಬಕಪುರ 128 ಮಿ.ಮೀ, ದೇಮ್ಲಾಪುರ 124 ಮಿ.ಮೀ, ಹಾದಿಗಲ್ಲು 127 ಮಿ.ಮೀ ಮಳೆಯಾಗಿದೆ.ಅಪಾಯದ ಮಟ್ಟ ಮಿತಿಮೀರಿದೆ…

ರಘುರಾಜ್ ಹೆಚ್. ಕೆ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!