
ರಿಪ್ಪನ್ಪೇಟೆ: ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ.
ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ ಪ್ರತಾಪ್ ನ ಬೆನ್ನು ಬಿದ್ದಿದ್ದ ಪೊಲೀಸರು ಇಂದು ಹೊಸನಗರ ಮೂಲಕ ಮಂಗಳೂರಿಗೆ ತೆರಳುತ್ತಿರುವ ಖಚಿತ ಮಾಹಿತಿ ಮೇರೆಗೆ ಹೊಸನಗರ ಪಟ್ಟಣದಲ್ಲಿ ಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಡಿವೈಎಸ್ಪಿ ಶಾಂತವೀರ ಹಾಗೂ ಸಿಪಿಐ ಗಿರೀಶ್ ಮಾರ್ಗದರ್ಶನದಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಸಿಬ್ಬಂದಿಗಳು ಟ್ರಾಕ್ಟರ್ ಕಳ್ಳತನದ ಆರೋಪಿ ಪ್ರತಾಪ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಓಂಕಾರ ಎಸ್. ವಿ. ತಾಳಗುಪ್ಪ…
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…