Wednesday, April 30, 2025
Google search engine
Homeಶಿವಮೊಗ್ಗಸಿಗಂದೂರ್ ಬಳಿಯ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ - ನಿತ್ಯ ನರಕ ಸದೃಶದತ್ತ ವಾಹನ ಸವಾರರು "...

ಸಿಗಂದೂರ್ ಬಳಿಯ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ – ನಿತ್ಯ ನರಕ ಸದೃಶದತ್ತ ವಾಹನ ಸವಾರರು ” ಮಂಗಮಾಯವಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಣ್ಣಿದ್ದು ಕುರುಡರಾದ ಸಂಭಂದ ಪಟ್ಟ ಚುನಾಯಿತ ಜನಪ್ರತಿನಿಧಿಗಳು”..!!

ಸಾಗರ: ರಾಷ್ಟ್ರೀಯ ಹೆದ್ದಾರಿ 369 ಇ ರಾಣಿಬೆನ್ನೂರು to ಬೈಂದೂರು ಮಾರ್ಗದ ಸಿಗಂದೂರು ಬಳಿಯ ಶಂಕಣ್ಣ ಶಾನಭೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಪ್ಪದೂರು ಸನಿಹ ಹೊಟ್ಟಲ ಜಡ್ಡು ಬಳಿಯ ಹೆದ್ದಾರಿ ಕಿರಿದಾದ ” U ” ತಿರುವು ಹೊಂದಿದ್ದು, ಈ ” U ” ತಿರುವು ಅತ್ಯಂತ ಅಪಾಯಕಾರಿಯಿಂದ ಕೂಡಿದ್ದಲ್ಲದೇ ಸರ್ಕಾರ ನಿಗದಿತ ತೂಕಕ್ಕಿಂತಲೂ ಹೆಚ್ಚಿನ ಭಾರದ ಸರಕು ಸಾಮಗ್ರಿಗಳನ್ನೂ ಹೊತ್ತ ಬಾರೀ ಗಾತ್ರದ ವಾಹನಗಳು ಸಂಚಾರದಿಂದ ದಿನಗಟ್ಟಲೇ ಈ ತಿರುವಿನಲ್ಲಿ ಸಂಚಾರ ದಟ್ಟನೆಯಿಂದ ಲಘು ವಾಹನಗಳು, ಪ್ರವಾಸಿ ವಾಹನಗಳು ಸುಗಮ ಸಂಚಾರಕ್ಕೆ ತೊಡಕಾಗಿರುತ್ತದೆ.

ಇತ್ತೀಚಿಗೆ ಸ್ಥಳೀಯರೋಬ್ಬರಿಗೆ ಅನಾರೋಗ್ಯದಿಂದ ಬಳಳುತ್ತಿದ್ದ ರೋಗಿಯನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಆಂಬುಲೆನ್ಸ್ ವಾಹನದಲ್ಲಿ ರವಾನಿಸುತ್ತಿದ್ದ ವೇಳೆ ಇದೇ ” U ” ತಿರುವಿನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡ ಆಂಬುಲೆನ್ಸ್ ವಾಹನ ಗಂಟೆಗಟ್ಟಲೇ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಯಿತು.

ಸ್ಥಳೀಯರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಇದೇ ಸಂಕಷ್ಟವನ್ನೂ ವರ್ಷವಿಡಿ ಅನುಭವಿಸುವಂತಹ ನರಕ ಯಾತನೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಲ್ಲಿ, ಮಾನ್ಯ ಸಂಸದರು, ಮಾನ್ಯ ಶಾಸಕರ ಬಳಿ ರಾಷ್ಟ್ರೀಯ ಹೆದ್ದಾರಿಯ ಈ ಅವ್ಯವಸ್ಥೆ ಬಗ್ಗೆ ಎಷ್ಟೇ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದೂ ಅಳಲು ತೋಡಿಕೊಂಡರು.

ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಮಾನ್ಯ ಸಂಸದರು, ಮಾನ್ಯ ಶಾಸಕರು ಶಾನಭೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಪ್ಪದೂರು ಸನಿಹ ಹೊಟ್ಟಲ ಜಡ್ಡು ಬಳಿಯ ಹೆದ್ದಾರಿ ಕಿರಿದಾದ ” U ” ತಿರುವು ಹೊಂದಿದ್ದು, ಈ ” U ” ತಿರುವು ಅತ್ಯಂತ ಅಪಾಯಕಾರಿಯಿಂದ ಮುಕ್ತಿಗೆ ಕ್ರಮ ಕೈಗೊಂಡು ಸುಗಮ ಸುರಕ್ಷಿತ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸ್ಥಳೀಯರು, ಪ್ರವಾಸಿಗರ ಪರವಾಗಿ ಮನವಿ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ 9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...