Thursday, June 19, 2025
Google search engine
Homeಶಿವಮೊಗ್ಗವಿಶ್ವ ವಿಖ್ಯಾತ ಜೋಗ ಜಲಪಾತ ಸನಿಹದಲ್ಲೇ ಸಮರ್ಪಕ ರಸ್ತೆ ಸಾರಿಗೆ ವ್ಯವಸ್ಥೆಯಿಲ್ಲದೇ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು...

ವಿಶ್ವ ವಿಖ್ಯಾತ ಜೋಗ ಜಲಪಾತ ಸನಿಹದಲ್ಲೇ ಸಮರ್ಪಕ ರಸ್ತೆ ಸಾರಿಗೆ ವ್ಯವಸ್ಥೆಯಿಲ್ಲದೇ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಜೋಳಿಗೆ ಅಥವಾ ತೊಟ್ಟಿಲೇ ಸಾಧನ – ಸಂಸದರು ಶಾಸಕರು ಸೂಕ್ತ ಸಾರಿಗೆ ಸಂಪರ್ಕ ವ್ಯವಸ್ಥೆಯತ್ತ ಒಲವು ತೋರುವರೇ…..?

ಜೋಗ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10 ನೇ ವಾರ್ಡ್ ನಲ್ಲಿರುವ ನಿವಾಸಿಗಳಿಗೆ ಸರಿಯಾದ ರಸ್ತೆ ಸಾರಿಗೆ ವ್ಯವಸ್ಥೆಯಿಲ್ಲದೇ ಅಸಹಾಯಕ ಸ್ಥಿತಿಗೆ ತಲುಪಿದ ನಿವಾಸಿಗಳ ಕಥೆ – ವ್ಯಥೆ.

ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 10 ರ ಚರ್ಚ ಮೌಂಟ್ ನಿವಾಸಿಗಳು ವಯಸ್ಸಾದವರಿಗೆ ಅನಾರೋಗ್ಯ ಪೀಡಿತರ ವೇದನೆ ಹೇಳತೀರದು.

ಜಟಿಲವಾದ ಸಂಪರ್ಕ ರಸ್ತೆಯನ್ನೂ ಸರಿಪಡಿಸಿ ಕೊಡುವಂತೆ ಸ್ಥಳೀಯ ನಿವಾಸಿಗಳು ಸ್ಥಳೀಯ ಆಡಳಿತವಾದ ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ಆಡಳಿತಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಅದಂ ಎಂಬುವವರು ತಮ್ಮ ವಯಸ್ಸಾದ ತಾಯಿಯು ಪಾರ್ಶ್ವಾಯು ಕಾಯಿಲೆಯಿಂದ ನರಳುತ್ತಿದ್ದೂ ತನ್ನ ತಾಯಿಯನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಸಮರ್ಪಕ ರಸ್ತೆ ವ್ಯವಸ್ಥೆಯಿಲ್ಲದೇ ಕಚ್ಚಾ ರಸ್ತೆಯಲ್ಲೇ ಬಹು ದೂರದ ವರೆಗೆ ಜೋಲಿಯಲ್ಲೇ ಹೊತ್ತುಕೊಂಡು ಹೋಗುತ್ತಿರುವ ಹೃದಯ ವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದೂ, ನೆಟ್ಟಿಗರು ಭವ್ಯ ಭಾರತ ಸುವರ್ಣ ಸಂಭ್ರಮ ಆಚರಿಸುತ್ತಿರುವ ಬೆನ್ನೆಲ್ಲೇ ಇಂತಹ ಅವ್ಯವಸ್ಥೆ ಬಗ್ಗೆ ಸಂಸದರು, ಶಾಸಕರು ಹಾಗೂ ಶಿವಮೊಗ್ಗ ಜಿಲ್ಲಾಡಳಿತ ವಿರುದ್ಧ ಕಿಡಿಕಾರುತ್ತಿದ್ದಾರೆ.

ಅಭಿವೃದ್ಧಿ ಪರ ಚಿಂತನೆಯುಳ್ಳ ಜನಸ್ನೇಹಿ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ರವರು ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಸಂಖ್ಯೆ 10 ರಲ್ಲಿ ವಾಸಿಸುತ್ತಿರುವ ನಿವಾಸಿಗಳ ಮೂಲಭೂತ ಸೌಕರ್ಯವಾದ ರಸ್ತೆ ಸಂಪರ್ಕ ಕಲ್ಪಿಸಿ ಅನಾರೋಗ್ಯ ಪೀಡಿತರನ್ನು ಜೋಳಿಗೆ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತಹ ದುಸ್ಥಿತಿಗೆ ವಿರಾಮ ಹಾಕುವಂತೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!