Thursday, June 19, 2025
Google search engine
Homeರಾಜ್ಯದಾವಣಗೆರೆ ಜಿಲ್ಲೆಯ ಎರಡು ಮದ್ಯದಂಗಡಿಗಳ ಪರವಾನಿಗೆ ರದ್ದು ಕಾರಣವೇನು..?ಯಾವುದು ಅಂಗಡಿಗಳು..?

ದಾವಣಗೆರೆ ಜಿಲ್ಲೆಯ ಎರಡು ಮದ್ಯದಂಗಡಿಗಳ ಪರವಾನಿಗೆ ರದ್ದು ಕಾರಣವೇನು..?ಯಾವುದು ಅಂಗಡಿಗಳು..?

ದಾವಣಗೆರೆ: ಜಿಲ್ಲಾ ಅಬಕಾರಿ ಅಧಿಕಾರಿಗಳು ನೀಡುವ ಎಚ್ಚರಿಕೆ ಮೀರಿ ಪದೇ ಪದೇ ಸನ್ನದುದಾರರು ಸನ್ನದು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ದಾವಣಗೆರೆ ಜಿಲ್ಲೆಯ ಎರಡು ಮದ್ಯದಂಗಡಿಗಳ ಪರವಾನಿಗೆಯನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಹೊನ್ನಾಳಿ ಪಟ್ಟಣದ ಹೆಚ್.ಇ.ಮೈನುದ್ದೀನ್‌ ಪಾಷ ಇವರ ಒಡೆತನದ ಸುಗಂದಾ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ (ಬೈಪಾಸ್ ಬಳಿಯ) ಕೃಷ್ಣ ಸಾ ಭೂತೆ ಒಡೆತನದ ರಾಘವೇಂದ್ರ ಬಾರ್ ಅಂಡ್ ರೆಸ್ಟೋರೆಂಟ್ ಅಮಾನತ್ತಾದ ಮದ್ಯದ ಅಂಗಡಿಗಳು.

ಪ್ರಸ್ತುತ ಅಬಕಾರಿ ವರ್ಷದಲ್ಲಿ ಪರವಾನಿಗೆ ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಮೇಲಿನ ಪ್ರತಿ ಬಾರ್ ಮೇಲೆ ಮೂರು ಪ್ರಕರಣಗಳು ದಾಖಲಾಗಿರುತ್ತವೆ. ಆಯಾ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಹಾಗೂ ಅಬಕಾರಿ ಉಪ ಆಯುಕ್ತರು, ದಾವಣಗೆರೆ ಇವರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧಿಕಾರಿಗಳು, ದಾವಣಗೆರೆ ಇವರು ಸದರಿ ಬಾರ್ ಗಳನ್ನು ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಿದ್ದಾರೆ.

ಈ ಎರಡು ಮದ್ಯದ ಅಂಗಡಿಗಳನ್ನು ತಾಲೂಕು ಅಬಕಾರಿ ಅಧಿಕಾರಿಗಳು ಸ್ತಗಿತಗೊಳಿಸಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: ,9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!