Wednesday, April 30, 2025
Google search engine
Homeರಾಜ್ಯರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಳಪೆ ಕಾಮಗಾರಿ ಅನುಷ್ಠಾನ - ಕ್ಯೂರಿಂಗ್ ಕಾಣದ ಸಿಮೆಂಟ್ ಕಾಮಗಾರಿಗಳು -...

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಳಪೆ ಕಾಮಗಾರಿ ಅನುಷ್ಠಾನ – ಕ್ಯೂರಿಂಗ್ ಕಾಣದ ಸಿಮೆಂಟ್ ಕಾಮಗಾರಿಗಳು – ರಾಷ್ಟ್ರೀಯ ಹೆದ್ದಾರಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಗೆ ಟ್ವಿಟ್ ಮುಖಾಂತರ ದೂರು ಸಲ್ಲಿಸಿದ ಖ್ಯಾತ ನ್ಯಾಯವಾದಿಗಳಾದ ಕೆ. ವಿ. ಪ್ರವೀಣ್..!!ಅನುದಾನ ದುರ್ಬಳಕೆಯಾಗುತ್ತಿದ್ದರೂ ಹೇಳುವವರಿಲ್ಲ – ಕೇಳುವವರಿಲ್ಲ..!!

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ನಗರದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲ್ಲಿ ನೆಡೆಯುತ್ತಿರುವ ಬಾಕ್ಸ್ ಚರಂಡಿ ಕಾಮಗಾರಿಗಳು ಸಂಪೂರ್ಣ ಕಳಪೆ ಗುಣಮಟ್ಟದ ಕಾಮಗಾರಿ ನೆಡೆಯುತ್ತಿದ್ದೂ, ಸಿಮೆಂಟ್ ಕಾಮಗಾರಿಗಳಿಗೆ ನೀರು ಹಾಕ್ಕುತ್ತಾ ಕ್ಯೂರಿಂಗ್ ಮಾಡಬೇಕಾದುದು ಅತೀ ಅವಶ್ಯಕತೆ ಇರುತ್ತದೆ ಕಾರಣ ನೀರು ಕ್ಯೂರಿಂಗ್ ದಿಂದ ಸಿಮೆಂಟ್ ಕಾಮಗಾರಿಗಳು ಸಾಕಷ್ಟು ಬಲಿಷ್ಠ ಹಾಗೂ ಉತ್ತಮ ಗುಣಮಟ್ಟ ಕಾಪಾಡಲು ಸಹಕಾರಿಯಾಗುತ್ತದೆ. ಇದರಿಂದ ಸಿಮೆಂಟ್ ಕಾಮಗಾರಿಗಳ ಆಯುಸ್ಸು ಸುಮಾರು ವರ್ಷಗಳ ಕಾಲ ಉಳಿಯುತ್ತದೆ.

ಇದಕ್ಕೆ ವ್ಯತಿರಿಕ್ತವಾಗಿ ಸಾಗರದಲ್ಲಿ ನೆಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅಕ್ಕ ಪಕ್ಕ ಚರಂಡಿ ಕಾಮಗಾರಿಗಳು ಕ್ಯೂರಿಂಗ್ ಮಾಡದೇ ಕಾಮಗಾರಿ ಅನುಷ್ಠಾನ ಮಾಡುತ್ತಿದ್ದರೂ ಕುಂಭ ಕರ್ಣ ನಿದ್ರೆಗೆ ಜಾರಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳು.

ಈ ಬಗ್ಗೆ ಸಾಗರದ ಪ್ರಖ್ಯಾತ ಮಾನ್ಯ ನ್ಯಾಯವಾದಿಗಳಾದ ಕೆ. ವಿ. ಪ್ರವೀಣ್ ರವರು ಸಾಗರ ನಗರದ ಸುತ್ತಮುತ್ತಲಿನ ರಾಷ್ಟ್ರೀಯ ಹೆದ್ದಾರಿಯ ಅಕ್ಕ ಪಕ್ಕ ಚರಂಡಿ ಕಾಮಗಾರಿಯ ಕಳಪೆ ಕಾಮಗಾರಿಯ ಕ್ಯೂರಿಂಗ್ ಮಾಡದೇ ಕಾಮಗಾರಿ ಅನುಷ್ಠಾನ ವಿರುದ್ಧ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಟ್ವೀಟ್ ಮುಖಾಂತರ ದೂರು ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಸಾರ್ವಜನಿಕ ತೆರಿಗೆ ಹಣದ ಅನುದಾನವನ್ನೂ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರಿಗಳು ಈ ರೀತಿ ಅನುದಾನ ದುರ್ಬಳಕೆ ತೊಡಗಿರುವವರ ವಿರುದ್ಧ ಮಾನ್ಯ ಸಂಸದರಾದ ಬಿ. ವೈ. ರಾಘವೇಂದ್ರ ರವರು , ಸ್ಥಳೀಯ ಶಾಸಕರಾದ ಹರತಾಳು ಹಾಲಪ್ಪ ರವರು, ಕುಮಾರ್ ಬಂಗಾರಪ್ಪ ರವರು ಹಾಗೂ ಶಿವಮೊಗ್ಗ ಜಿಲ್ಲಾಡಳಿತ ಸೂಕ್ತ ಕ್ರಮಕ್ಕೆ ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...