Thursday, May 1, 2025
Google search engine
Homeಶಿವಮೊಗ್ಗನಿರ್ಮಿತಿ ಕೇಂದ್ರದ ಕರ್ಮಕಾಂಡ..! 15 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿರುವ ಎಂ,ಡಿ ನಾಗರಾಜ್...

ನಿರ್ಮಿತಿ ಕೇಂದ್ರದ ಕರ್ಮಕಾಂಡ..! 15 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿರುವ ಎಂ,ಡಿ ನಾಗರಾಜ್ ಸೊರಬ ರಸ್ತೆಯ ಕಳಪೆ ಕಾಮಗಾರಿಯ ಬಗ್ಗೆ ಶಾಸಕರೇ ಏನಂತೀರಾ..?

ಸೊರಬ :- ಶಿವಮೊಗ್ಗ ಜಿಲ್ಲಾ ಸೊರಬ ವಿಧಾನಸಭಾ ಕ್ಷೇತ್ರದ ಕುಪ್ಪಗಡ್ಡೆ ಹೋಬಳಿಯ ಕುಪ್ಪಗಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ” ಯಕ್ಷಿ ” ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸರ್ಕಾರ ಅನುದಾನ ಮಂಜೂರು ಮಾಡಿದ್ದೂ, KRIDAL (ನಿರ್ಮಿತಿ ಕೇಂದ್ರ) ಅನುಷ್ಠಾನ ಕೈಗೆತ್ತಿಕೊಂಡಿದ್ದೂ, ಕಾಮಗಾರಿ ಗುಣಮಟ್ಟ ಕಾಪಾಡದೇ ಇರುವುದು ಸ್ಥಳಕ್ಕೆ ಭೇಟಿ ಕೊಟ್ಟಾಗ ನಮ್ಮ ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಡಾ0ಬರೀಕರಣ ಕಾಮಗಾರಿಯು ನಾಳೆಯಿಂದ ನಡೆಯುವ ಸಾಧ್ಯತೆ ಹೆಚ್ಚಿದೆ.

ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನಲೆ ಡಾ0ಬರೀಕರಣ ಕಾಮಗಾರಿ ಅನುಷ್ಠಾನ ಮಾಡಿದರೇ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಅನುದಾನ ನೀರಲ್ಲಿ ಹೋಮವಾದಂತೆ ಆಗುವುದು ಕಟುಸತ್ಯ.

ಕೂಡಲೇ ಕುಪ್ಪುಗಡ್ಡೆ ಗಾಮ ಪಂಚಾಯಿತಿ ವ್ಯಾಪ್ತಿಯ ” ಯಕ್ಷಿ ” ಗ್ರಾಮದಲ್ಲಿ KRIDAL (ನಿರ್ಮಿತಿ ಕೇಂದ್ರ) ಅನುಷ್ಠಾನ ಮಾಡುತ್ತಿರುವ ಡಾ0ಬರೀಕರಣ ಕಾಮಗಾರಿ ನಿಲ್ಲಿಸಿ, ಮಳೆಗಾಲ ಮುಗಿದ ನಂತರ ಕಾಮಗಾರಿ ಅನುಷ್ಠಾನ ಮಾಡುವಂತೆ ಸಂಬಂಧ ಪಟ್ಟ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ ನೀಡಿ ಮುಗಿದ ನಂತರ ವ್ಯವಸ್ಥಿತವಾಗಿ ರಸ್ತೆ ನಿರ್ಮಿಸುವಂತೆ ಈ ಮೂಲಕ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ನಿರ್ಮಿತಿ ಕೇಂದ್ರದ ಕರ್ಮಕಾಂಡ ಜಿಲ್ಲೆಯ ತುಂಬಾ ಹಬ್ಬಿದೆ:

ನಿರ್ಮಿತಿ ಕೇಂದ್ರದ ಕರ್ಮಕಾಂಡ ಜಿಲ್ಲೆಯ ತುಂಬಾ ಹಬ್ಬಿದ್ದು ಇನ್ನು ಮುಂದೆ ಎಳೆಎಳೆಯಾಗಿ ಒಂದೊಂದೇ ಸಾಕ್ಷಿ ಸಮೇತ ಪತ್ರಿಕೆ ಹೊರತರುತ್ತದೆ. ನಿರ್ಮಿತಿ ಕೇಂದ್ರದ m.d. ನಾಗರಾಜ್ ಕಳೆದ 15ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿದ್ದು .

ಇವೆಲ್ಲಾ ಕಳಪೆ ಕಾಮಗಾರಿ ನಡೆಯಲು ಕಾರಣವಾಗಿದೆ. ಮುಂದೆ ಪತ್ರಿಕೆ ನಿರ್ಮಿತಿ ಕೇಂದ್ರದ ಕರ್ಮಕಾಂಡವನ್ನು ಎಳೆ ಎಳೆಯಾಗಿ ಸಾರ್ವಜನಿಕರ ಅಧಿಕಾರಿಗಳ, ಜನಪ್ರತಿನಿಧಿಗಳ, ಮುಂದೆ ಸಾಕ್ಷಿ ಸಮೇತ ಇಡುತ್ತದೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...