Thursday, May 1, 2025
Google search engine
Homeಶಿವಮೊಗ್ಗಕೋವ್ಯಾಕ್ಸಿನ್ ಲಸಿಕೆಯ ಬಳಿಕ ಮಕ್ಕಳ್ಳಿಬ್ಬರ ಸ್ಥಿತಿ ಚಿಂತಾಜನಕ..!!

ಕೋವ್ಯಾಕ್ಸಿನ್ ಲಸಿಕೆಯ ಬಳಿಕ ಮಕ್ಕಳ್ಳಿಬ್ಬರ ಸ್ಥಿತಿ ಚಿಂತಾಜನಕ..!!

ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡ ಬಳಿಕ ದಲಿತ ಕುಟುಂಬದ ಇಬ್ಬರು ಬಾಲಕರು ಮಾತು, ಕೈ ಕಾಲು ಸ್ವಾಧೀನ ಕಳೆದು ಕೊಂಡಿರುವುದು ಇದೀಗ ಬೆಳಕಿಗೆ ಬಂದಿದೆ ಅಲ್ಲದೇ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಚಂದ್ರನಾಯ್ಕ ಮತ್ತು ಶಾಂತಿಬಾಯಿ ಎಂಬುವವರಿಗೆ ಇಬ್ಬರು ಗಂಡು ಮಕ್ಕಳ್ಳಿದ್ದು, ಅವರಲ್ಲಿ ಮಧುಚಂದ್ರ ಆನವಟ್ಟಿ ಸರಕಾರಿ ಪಿಯುಸಿ ಓದುತ್ತಿರುವಾಗ ಜನವರಿ 04/ 2022 ರಂದು ಕಾಲೇಜಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದನು. ಅವರ ಇನ್ನೊರ್ವ ಪುತ್ರ ಮನುಚಂದ್ರ ಅಟಲ್ ಬಿಹಾರಿ ವಸತಿ ಶಾಲೆ ಸಾಗರದಲ್ಲಿ 10 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ, ಇವನು ಸರ್ಕಾರಿ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದನು. ಲಸಿಕೆ ಹಾಕಿಸಿಕೊಂಡ ಮರುದಿನವೇ ಇಬ್ಬರು ಮಕ್ಕಳಿಗೂ ಜ್ವರ ಕಾಣಿಸಿಕೊಂಡಿತ್ತು. ಮಧುಚಂದ್ರ ಮಾತು ಬರದಂತಾದನು. ಮನುಚಂದ್ರ ಕೈ ಕಾಲು ಸ್ವಾಧೀನ ಕಳೆದುಕೊಂಡನು. ಇವರ ತಂದೆ ತಾಯಿ ಇದ್ದ 01 ಏಕರೇ ಜಮೀನು ಮಾರಿ ಸರ್ಕಾರಿ ಆಸ್ಪತ್ರೆ ಶಿವಮೊಗ್ಗ ಮತ್ತು ಬೆಂಗಳೂರು ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಸರಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜನರಲ್ಲಿ ಲಸಿಕೆ ಪಡೆಯಬೇಕೆಂದು ಜಾಗೃತಿ ಮೂಡಿಸಿದರ ಪರಿಣಾಮ ದೇಶದ್ಯಾ0ತ ಲಕ್ಷಾಂತರ ಜನ ಲಸಿಕೆ ಪಡೆದಿದ್ದಾರೆ. ಅದರಲ್ಲಿ ಅನೇಕರು ಇದೆ ರೀತಿಯಲ್ಲಿ ತೊಂದರೆಗಳಿಗೆ ಒಳಗಾಗಿದ್ದರೂ ಈ ವಿಚಾರ ಸರಕಾರದ ಗಮನಕ್ಕೆ ಬಂದಿದ್ದರೂ ಸರ್ಕಾರ ಸಂತ್ರಸ್ತರಿಗೆ ಪರಿಣಾಮಕಾರಿಯಾಗಿ ನೀಡಬೇಕಾದ ಯಾವುದೇ ಪರಿಹಾರವನ್ನೂ ನೀಡದೇ ಜಾಣಕುರುಡರತನ ಪ್ರದರ್ಶಿಸುತ್ತಿದೆ ಕೂಡಲೇ ಕರ್ನಾಟಕ ಸರ್ಕಾರ ಕೋವ್ಯಾಕ್ಸಿನ್ ಲಸಿಕೆಯನ್ನೂ ಪಡೆದು ಕೊಂಡ ನಂತರ ಈ ಇಬ್ಬರು ಸಂತ್ರಸ್ತರಿಗೆ ಆರೋಗ್ಯವಾಗುವರೆಗೂ ಸರ್ಕಾರ ಸಂಪೂರ್ಣ ಆಸ್ಪತ್ರೆ ವೆಚ್ಚವನ್ನೂ ಭರಿಸಬೇಕು ತನಿಖೆ ನೆಡೆಸಿ ಸಂತ್ರಸ್ತರಿಗೆ ಸೂಕ್ತ ನ್ಯಾಯ ನೀಡಬೇಕು.

ಮಾಧ್ಯಮದೊಂದಿಗೆ ಪ್ರತಿಕ್ರಿಯೆ ನೀಡಿದ ಮನುಚಂದ್ರ ಸಂತ್ರಸ್ತ ಬಾಲಕ ” ನಾನು ಸಾಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದೆ. ಕೋವ್ಯಾಕ್ಸಿನ್ ಲಸಿಕೆ ಪಡೆದ ನಂತರ ಮರುದಿನವೇ ಕೈ ಕಾಲು ಊದಿಕೊಂಡು ಮೂತ್ರ ವಿಸರ್ಜನೆ ಮಾಡಲಾಗದೇ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ನಂತರ ಬೆಂಗಳೂರಿನ ನೀಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಕಾಲಿನ ಮಾಂಸ ಮತ್ತು ನರ ಪರೀಕ್ಷೆಗೆ ಒಳಪಡಿಸಿದಾಗ ಕೋವ್ಯಾಕ್ಸಿನ್ ಲಸಿಕೆಯಿಂದ ರಿಯಾಕ್ಷನ್ ದಿಂದ ಈ ರೀತಿ ಆಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಓಂಕಾರ್ ಎಸ್ ವಿ ತಾಳಗುಪ್ಪ….

#####################################

ರಘುರಾಜ್ ಹೆಚ್ .ಕೆ ….9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...