Wednesday, April 30, 2025
Google search engine
Homeಶಿವಮೊಗ್ಗಸರ್ಕಾರಿ ಶಾಲಾ ಮೇಲ್ಚಾವಣಿ ಇಂದೋ ನಾಳೆ ಬೀಳುವ ಸ್ಥಿತಿಯಲ್ಲಿ - ಶಾಲಾ ಮಕ್ಕಳು ಹಾಗೂ ಶಿಕ್ಷಕರು...

ಸರ್ಕಾರಿ ಶಾಲಾ ಮೇಲ್ಚಾವಣಿ ಇಂದೋ ನಾಳೆ ಬೀಳುವ ಸ್ಥಿತಿಯಲ್ಲಿ – ಶಾಲಾ ಮಕ್ಕಳು ಹಾಗೂ ಶಿಕ್ಷಕರು ಪ್ರಾಣಭಯದಲ್ಲಿ – ಶಾಸಕರು ಕುಂಭಕರ್ಣ ನಿದ್ರೆಯಲ್ಲಿ ..!!

https://youtu.be/zkj-zr-UJ54

ಹಿರೇನೆಲ್ಲೂರು :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮೇಲ್ಚಾವಣಿ ಬೀಳುವ ಸ್ಥಿತಿಗೆ ತಲುಪಿದ್ದೂ, ಈ ಬಗ್ಗೆ ಕೂಡಲೇ ಸರಿಪಡಿಸಿಕೊಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾಗರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಲ್ಲಿ , ಸ್ಥಳೀಯ ಶಾಸಕರಾದ ಕುಮಾರ್ ಬಂಗಾರಪ್ಪ ರವರಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯವರು ಹಾಗೂ ಸ್ಥಳೀಯರು ಶಾಲಾ ಮೇಲ್ಚಾವಣಿ ದುರಸ್ಥಿ ಮಾಡಿಕೊಡುವಂತೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಸಾರ್ವಜನಿಕರ ದೂರಿನ ಮೇರೆಗೆ ಮಣಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಾನೊಬ್ಬ ಸಾಮಾಜಿಕ ಹೋರಾಟಗಾರನಾದ ಶಾಲೆಗೆ ಭೇಟಿ ಕೊಟ್ಟಾಗ ಸಾರ್ವಜನಿಕರ ದೂರು ಸತ್ಯವಾಗಿದ್ದೂ, ಈ ಶಾಲಾ ಮೇಲ್ಚಾವಣಿ ಸಂಪೂರ್ಣ ಶಿಥಿಲಾವಸ್ಥೆ ಕೂಡಿದ್ದೂ, ಶಾಲಾ ಮಕ್ಕಳು ಹಾಗೂ ಭೋಧಕರು ಪ್ರಾಣಭಯದಿಂದ ಇರುವುದು ಕಂಡುಬಂದಿರುತ್ತದೆ.

ಮಣಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮೇಲ್ಚಾವಣಿ ದುರಸ್ಥಿಗೆ ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾದ ಸಜ್ಜನ, ಪಾರದರ್ಶಕ ಆಡಳಿತಗಾರರಾದ ಬಿ. ಸಿ. ನಾಗೇಶ್ ರವರು ತಮ್ಮ ವಿಶೇಷ ಅನುದಾನದಲ್ಲಿ ಈ ಸರ್ಕಾರಿ ಶಾಲಾ ಮೇಲ್ಚಾವಣಿ ದುರಸ್ಥಿಗಾಗಿ ಅನುದಾನ ಮಂಜೂರು ಮಾಡುವಂತೆ ಮಣಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಶಾಲಾ ಪೋಷಕರು, ಸ್ಥಳೀಯ ತಮ್ಮಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...