Wednesday, April 30, 2025
Google search engine
Homeರಾಜ್ಯನಿರ್ಗಮನದ ಹಾದಿಯಲ್ಲಿ ಬಿಎಸ್ವೈ, ಯಾರಾಗುತ್ತಾರೆ ಮುಂದಿನ ಸಿಎಂ? ಹಲವು ಸಚಿವರಿಗೆ ಕೋಕ್, ಹೊಸಬರಿಗೆ ಆದ್ಯತೆ, ಫುಲ್...

ನಿರ್ಗಮನದ ಹಾದಿಯಲ್ಲಿ ಬಿಎಸ್ವೈ, ಯಾರಾಗುತ್ತಾರೆ ಮುಂದಿನ ಸಿಎಂ? ಹಲವು ಸಚಿವರಿಗೆ ಕೋಕ್, ಹೊಸಬರಿಗೆ ಆದ್ಯತೆ, ಫುಲ್ ಡೀಟೇಲ್ಸ್…..

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜ್ಯ ರಾಜಕೀಯ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಹಾಲಿ ಮುಖ್ಯಮಂತ್ರಿ ಬಿಎಸ್ ಯುಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎನ್ನುವ ವದಂತಿ ಬೆನ್ನಲ್ಲೇ ಹಲವರ ಹೆಸರುಗಳು ಮುಖ್ಯಮಂತ್ರಿ ರೇಸ್ ನಲ್ಲಿ ಇದೆ. ಅದರಲ್ಲೂ ಪ್ರಮುಖವಾಗಿ ಕೇಂದ್ರ್ರ ಸಚಿವ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ, ಸಿಟಿ ರವಿ, ಬಿಎಲ್ ಸಂತೋಷ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಹೆಸರುಗಳು ಪ್ರಮುಖವಾಗಿವೆ.

ಅದೇ ತರಹ ಈಗಿರುವ ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದ್ದು. ಅದರಲ್ಲೂ ಪ್ರಮುಖವಾಗಿ ಹಿರಿಯ ಸಚಿವರಾದ ಜಗದೀಶ್ ಶೆಟ್ಟರ್, ಈಶ್ವರಪ್ಪ, ಗೋವಿಂದ ಕಾರಜೋಳ, ರಂತಹ ಸಚಿವರುಗಳಿಗೆ ಕೋಕ್ ನೀಡುವ ಸಾಧ್ಯತೆ ಇದ್ದು. ಹಾಗೆ ಮಾಡಿದ್ದೇ ಆದಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ ಆಗುವುದರಲ್ಲಿ ಸಂಶಯವಿಲ್ಲ. ಹಾಗೆ ಹೊಸ ಸಚಿವರುಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಅದರಲ್ಲಿ ಪ್ರಮುಖವಾಗಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ಸಾಗರ ಶಾಸಕರಾದ ಹಾಲಪ್ಪ, ಗೂಳಿಹಟ್ಟಿ ಶೇಖರ್, ರೇಣುಕಾಚಾರ್ಯ, ರಂತಹ ಹೊಸ ಮುಖಗಳಿಗೆ ಆದ್ಯತೆ ಸಿಗುವ ಸಾಧ್ಯತೆ ಇದೆ. ಸಮಸ್ಯೆ ಆಗಿರುವುದು 17 ಶಾಸಕರ ಬಗ್ಗೆ ಇವರ ಬಗ್ಗೆ ಬಿಜೆಪಿ ಸರ್ಕಾರ ಅದರಲ್ಲೂ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಕಾದುನೋಡಬೇಕು. ಮುಖ್ಯಮಂತ್ರಿ ರೇಸ್ ನಲ್ಲಿರುವ ಕೆಲವು ಹೆಸರುಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಪ್ರಮುಖವಾಗಿ ಪ್ರಹ್ಲಾದ್ ಜೋಶಿ, ಬಿಎಲ್ ಸಂತೋಷ್, ವಿಶ್ವೇಶ್ವರ ಹೆಗಡೆ ಕಾಗೇರಿ, ಅನ್ನೋದು ಉನ್ನತ ಮೂಲಗಳಿಂದ ಮಾಹಿತಿ .

ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ರಾಜೀನಾಮೆ ಪ್ರಸಂಗಕ್ಕೆ ಸೋಮವಾರ ಅಂತ್ಯ ಬೀಳಲಿದ್ದು. ಕೊನೆ ಹಂತದಲ್ಲಿ ಯಾವ ಬೆಳವಣಿಗೆ ಬೇಕಾದರೂ ಆಗಬಹುದು… (ವರದಿ ರಘುರಾಜ್ ಹೆಚ್, ಕೆ)..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...