Friday, May 2, 2025
Google search engine
Homeಶಿವಮೊಗ್ಗಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಬೃಹತ್ ಭ್ರಷ್ಟಾಚಾರ - ಸೂಕ್ತ...

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಬೃಹತ್ ಭ್ರಷ್ಟಾಚಾರ – ಸೂಕ್ತ ತನಿಖೆಗೆ ಆಗ್ರಹ..!!

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ಮಹಾ ಜನತೆಯೂ ಕುಡಿಯುವ ನೀರಿಗಾಗಿ ಶರಾವತಿ ನದಿಯಿಂದ ಕುಡಿಯುವ ನೀರು ಒದಗಿಸುವಂತೆ ತೀವ್ರ ಪ್ರತಿಭಟನೆಯಿಂದಾಗಿ ಸರ್ಕಾರ ಕೋಟಿಗಟ್ಟಲೇ ಅನುದಾನ ಮಂಜೂರು ಮಾಡಿದ್ದೂ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಸಂಬಂಧ ಪಟ್ಟ ಅಧಿಕಾರಿಗಳ ಕರ್ತವ್ಯ ಲೋಪದಿಂದ ಹಳ್ಳ ಹಿಡಿದಿದೆ.

ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಸಂಖ್ಯೆ – 03 ರಲ್ಲಿ OVER HEAD TANK ನಿರ್ಮಾಣ ಮಾಡುವ ಬಗ್ಗೆ ESTIMATE ಇದ್ದರೂ ಯೋಜನೆ ಅನುಷ್ಠಾನ ಉಲ್ಲಂಘನೆ ಮಾಡಿ GROUND LEVEL TANK ಮಾಡಿರುವುದು ಸಂಬಂಧ ಪಟ್ಟ ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ತೋರುತ್ತಿದೆ.

ಗುತ್ತಿಗೆದಾರರು ಕಾಮಗಾರಿ ಪೂರೈಸಿ ಇಂತಿಷ್ಟು ವರ್ಷ ಇಂತಿಷ್ಟು ದಿನಗಳು ಎಂದು ಅಷ್ಟರೊಳಗೆ ಕಾಮಗಾರಿ ಪ್ರಗತಿಯನ್ನೂ ಮುಗಿಸಿ ಕೊಡಬೇಕೆಂದು ಒಪ್ಪಂದವಿದ್ದರೂ 04 ರಿಂದ 05 ವಸಂತಗಳು ಕಳೆದರೂ ಗುತ್ತಿಗೆದಾರ ಕಾಮಗಾರಿ ಆಮೇ ವೇಗದಲ್ಲಿ ನಡೆಯುತ್ತಿರುವುದರಿಂದ ಕೂಡಲೇ ಸರ್ಕಾರ ಸಂಬಂಧ ಪಟ್ಟ ಗುತ್ತಿಗೆದಾರನ ಪರವಾನಿಗೆಯನ್ನೂ BLOCK LIST ಗೆ ಹಾಕಬೇಕು.

ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅಕ್ರಮಗಳ ಬಗ್ಗೆ ಸೂಕ್ತ ತನಿಖೆಯನ್ನೂ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಸೆಲ್ವಮಣಿ ಹಾಗೂ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಹೊನ್ನಳ್ಳಿ ರವರು ಆದೇಶ ಮಾಡುವಂತೆ ಹಾಗೂ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ರವರು ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಹಳ್ಳ ಹಿಡಿದ ಬಗ್ಗೆ ಸರ್ಕಾರದ ಗಮನಕ್ಕೆ ತಂದು ತಾಳಗುಪ್ಪ ಹೋಬಳಿಯ ಜನತೆಗೆ ನ್ಯಾಯ ನೀಡಬೇಕೆಂದು ಗ್ರಾಮಸ್ಥರು ಮೂಲಕ ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!