Wednesday, April 30, 2025
Google search engine
Homeರಾಷ್ಟ್ರೀಯಭಾರತೀಯ ಜನತಾ ಪಕ್ಷದ (ಏನ್. ಡಿ. ಎ ಒಕ್ಕೂಟ ) ರಾಷ್ಟ್ರಪತಿ ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ...

ಭಾರತೀಯ ಜನತಾ ಪಕ್ಷದ (ಏನ್. ಡಿ. ಎ ಒಕ್ಕೂಟ ) ರಾಷ್ಟ್ರಪತಿ ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ರವರ ಅಚ್ಚರಿ ಆಯ್ಕೆ..! ರಾಷ್ಟ್ರಪತಿ ಯಾಗುವುದು ಬಹುತೇಕ ಖಚಿತ..!!

ನವದೆಹಲಿ :- ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ಏನ್ ಡಿ ಎ ಅಭ್ಯರ್ಥಿಯಾಗಿ ಬಿಜೆಪಿ ಜಾರ್ಖಂಡ ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದೆ.

20 ಹೆಸರುಗಳನ್ನು ಚರ್ಚಿಸಿದ ನಂತರ ಏನ್ ಡಿ ಎ ಈ ನಿರ್ಧಾರವನ್ನೂ ಕೈಗೆತ್ತಿಕೊಂಡಿದೆ. ಈ ನಡುವೆ ಬುಡಕಟ್ಟು ಮಹಿಳೆಯನ್ನೂ ಆಯ್ಕೆ ಮಾಡುವುದು ಸಾಮಾನ್ಯ ಒಮ್ಮತವಾಗಿತ್ತು ಎಂದು ಬಿಜೆಪಿ ಮುಖ್ಯಸ್ಥ ಜೆ. ಪಿ. ನಡ್ದಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ದೇಶದ ರಾಷ್ಟ್ರಪತಿ ಚುನಾವಣೆಗೆ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ನೇತೃತ್ವದ ಎನ್‌.ಡಿ.ಎ. ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.
ವಿಪಕ್ಷಗಳ ಮೈತ್ರಿಕೂಟ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇದರ ಬೆನ್ನಲ್ಲೇ ಎನ್ ಡಿಎ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಆದಿವಾಸಿ ಮಹಿಳೆಯಾಗಿರುವ ದ್ರೌಪದಿ ಅವರು ಎನ್‌.ಡಿ.ಎ. ಕಡೆಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ. ಪ್ರಥಮ ಬಾರಿಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಗೆ ಆದ್ಯತೆ ನೀಡಲಾಗಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ದ್ರೌಪದಿ ಮುರ್ಮು ಶಿಕ್ಷಕಿಯಾಗಿ ಕೆಲಸ ಮಾಡಿದ್ದಾರೆ. ಕೌನ್ಸಿಲರ್ ಆದ ನಂತರ ಶಾಸಕಿಯಾದರು. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಂತೆ ದ್ರೌಪದಿ ಮುರ್ಮು ಅವರು ಶಿಕ್ಷಣ ಕ್ಷೇತ್ರದೊಂದಿಗೆ ಬಹಳ ಕಾಲ ನಂಟು ಹೊಂದಿದ್ದು, ಸುದೀರ್ಘ ಕಾಲ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಒಡಿಶಾ ಸರ್ಕಾರದ ಸಾರಿಗೆ ಮತ್ತು ವಾಣಿಜ್ಯ ಖಾತೆಗಳನ್ನು ನಿರ್ವಹಿಸಿದ್ದಾರೆ. 2007 ರಲ್ಲಿ ಶಾಸಕರಾಗಿ ನೀಲಕಂಠ ಪ್ರಶಸ್ತಿಯನ್ನು ಪಡೆದಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...